ಪಾದಚಾರಿಗಳ ಮೇಲೆ ಅಪಘಾತ ಆರೋಪ: ನಟಿ ರವೀನಾ ಟಂಡನ್, ಚಾಲಕನ ಮೇಲೆ ಹಲ್ಲೆ

Date:

Advertisements

ಪಾದಚಾರಿಗಳ ಮೇಲೆ ಅಪಘಾತ ನಡೆಸಿದ ಆರೋಪದ ಮೇಲೆ ಗುಪೊಂದು ಬಾಲಿವುಡ್‌ ನಟಿ ರವೀನಾ ಟಂಡನ್ ಹಾಗೂ ಆಕೆಯ ಚಾಲಕನ ಮೇಲೆ ಹಲ್ಲೆ ನಡೆಸಿದೆ.

ವೈರಲ್‌ ಆಗಿರುವ ವಿಡಿಯೋದಲ್ಲಿ ಮೂವರು ಮಹಿಳೆಯರಿಗೆ ಹಲ್ಲೆ ಮಾಡಿದ್ದಾರೆಂದು ಒಂದು ನಿಂದಿಸಿ ಹಲ್ಲೆ ನಡೆಸುತ್ತಿದ್ದಾರೆ.

ಪೊಲೀಸರ ಪ್ರಕಾರ ಈ ಘಟನೆಯು ಶನಿವಾರ ರಾತ್ರಿ ಮುಂಬೈನ ಬಾಂದ್ರದಲ್ಲಿನ ಕಾರ್ಟರ್‌ ರಸ್ತೆಯಲ್ಲಿ ನಡೆದಿದ್ದು, ಖಾರ್‌ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ಕೂಡ ದಾಖಲಾಗಿದೆ.

Advertisements

ವಿಡಿಯೋದಲ್ಲಿರುವಂತೆ, ರವೀನಾ ಟಂಡನ್‌ ಕಾರಿನ ಚಾಲಕ ಮೂವರು ಮಹಿಳೆಯರಿಗೆ ಅಪಘಾತ ಮಾಡಿದ ಮಾಡಿದ ಕಾರಣಕ್ಕಾಗಿ ಕೋಪಗೊಂಡ ಉದ್ರಿಕ್ತ ಗುಂಪು ನಟಿ ಹಾಗೂ ಚಾಲಕನನ್ನು ತರಾಟೆಗೆ ತೆಗೆದುಕೊಳ್ಳುತ್ತಿತ್ತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಧಿಕಾರ ಸ್ಥಾನಗಳಿಂದ ಮಹಿಳೆಯರನ್ನು ಹೊರಗಿಟ್ಟು ಸಮಾನತೆ ಬಗ್ಗೆ ಮಾತನಾಡುವುದಕ್ಕೆ ಅರ್ಥವಿದೆಯೇ?

ಜಗಳವಾಡುತ್ತಿದ್ದ ಗುಂಪಿನ ಜೊತೆ ರವೀನಾ ಟಂಡನ್‌ ಮಾತನಾಡುತ್ತಿರುವ ಸಂದರ್ಭದಲ್ಲಿ ಆಕೆಯನ್ನು ತಳ್ಳಿ ಹಲ್ಲೆ ನಡೆಸಿದೆ. ನಟಿ ನನಗೆ ಹೊಡೆಯಬೇಡಿ ಎಂದು ಹೇಳುತ್ತಿರುವುದು ವಿಡಿಯೋದಲ್ಲಿ ಕಂಡುಬಂದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ವಿಡಿಯೋದಲ್ಲಿ ವ್ಯಕ್ತಿಯೊಬ್ಬರು, ರವೀನಾ ಟಂಡನ್‌ ಚಾಲಕ ತಮ್ಮ ತಾಯಿಯ ಮೇಲೆ ಹಲ್ಲೆ ನಡೆಸಿದ್ದಾನೆ. ಇದನ್ನು ಪ್ರಶ್ನಿಸಿದಾಗ ಆತ ತಮ್ಮ ತಾಯಿಯ ಮೇಲೆ ಹಲ್ಲೆ ಪುನಃ ಹಲ್ಲೆ ನಡೆಸಿದ್ದಾನೆ ಎಂದು ತಿಳಿಸಿದ್ದಾರೆ.

ತಾಯಿ ಸಹೋದರಿ ಹಾಗೂ ಸಂಬಂಧಿಕರೊಬ್ಬರ ಜೊತೆ ನಟಿಯ ಮನೆಯ ಬಳಿ  ಹೋಗುತ್ತಿದ್ದಾಗ  ಘಟನೆ ನಡೆದಿದೆ ವ್ಯಕ್ತಿ ತಿಳಿಸಿದ್ದಾರೆ. ನಟಿ ಮದ್ಯಪಾನ ಮಾಡಿದ್ದರು. ವಾಹನದಿಂದ ಕೆಳಗಿಳಿದು ಬಂದು ನಮ್ಮ ತಾಯಿಯ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ವ್ಯಕ್ತಿ ಆರೋಪಿಸಿದ್ದಾರೆ.

ಘಟನೆ ಬಗ್ಗೆ ಸಾರ್ವಜನಿಕವಾಗಿ ನಟಿ ರವೀನಾ ಟಂಡನ್‌ ಇಲ್ಲಿಯವರೆಗೂ ಯಾವುದೇ ಹೇಳಿಕೆ ನೀಡಿಲ್ಲ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟ ,ನಿರ್ದೇಶಕ ಮುರಳಿ ಮೋಹನ್ ನಿಧನ; ಓಂ, ಶ್‌ ಸೇರಿ ಹಲವು ಚಿತ್ರಗಳಿಗೆ ಸಂಭಾಷಣೆ

ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದ ಮುರಳಿ ಮೋಹನ್ ಅವರು ನಿಧನರಾಗಿದ್ದಾರೆ. ಹಲವು...

ನಾವು ಬಾಯಿ ಮುಚ್ಚಿಕೊಂಡಿದ್ದರೆ ಮತದಾನದ ಹಕ್ಕು ಕಸಿದುಕೊಳ್ಳುವ ದಿನ ದೂರವಿಲ್ಲ: ನಟ ಕಿಶೋರ್ ಕುಮಾರ್

ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾದ ಮತಗಳ್ಳತನದ ಬಗ್ಗೆ ಲೋಕಸಭೆಯ ವಿಪಕ್ಷ...

ಹಣ ಪಡೆದು ವಂಚನೆ ಆರೋಪ: ನಟ ಧ್ರುವ ಸರ್ಜಾ ವಿರುದ್ಧ ಮಹಾರಾಷ್ಟ್ರದಲ್ಲಿ ಎಫ್‌ಐಆರ್‌ ದಾಖಲು

ಖ್ಯಾತ ನಿರ್ದೇಶಕ ಮತ್ತು ನಿರ್ಮಾಪಕ ರಾಘವೇಂದ್ರ ಹೆಗಡೆ ಅವರಿಗೆ ಕೋಟ್ಯಂತರ ರೂಪಾಯಿ...

Download Eedina App Android / iOS

X