ಕೇಂದ್ರದಲ್ಲಿ ಬಿಜೆಪಿ ಬರುವ ವಿಚಾರ ಮೊದಲೇ ತಿಳಿದ ಸಂಗತಿ: ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್

Date:

Advertisements

ಕೇಂದ್ರದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುತ್ತೆ ಅನ್ನೋದು ನನಗೂ ಗೊತ್ತು. ನಾನು ಕಾಂಗ್ರೆಸ್​ ಶಾಸಕನಾದರೂ ನಿಜ ಹೇಳಬೇಕು, ಕೇಂದ್ರದಲ್ಲಿ ಬಿಜೆಪಿ ಬರುವ ವಿಚಾರ ಮೊದಲೇ ಗೊತ್ತಿರುವ ಸಂಗತಿ ಎಂದು ಕೋಲಾರ ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್ ಅಚ್ಚರಿಯ ಮಾತುಗಳನ್ನಾಡಿದ್ದಾರೆ.

ಕೋಲಾರದಲ್ಲಿ ಸೋಮವಾರ ಸುದ್ದಿಗಾರರ ಎಕ್ಸಿಟ್​ ಪೋಲ್​ ಬಗ್ಗೆ ಪ್ರತಿಕ್ರಿಯಿಸಿ, “ಈ ಬಾರಿ ಬಿಜೆಪಿ ಬರಲಿ. ಮುಂದಿನ ಚುನಾವಣೆ ನಮ್ಮ ಗುರಿ. ಅದಕ್ಕೆ ಬೇಕಾದ ಪೂರ್ವ ತಯಾರಿ ನಡೆಯುತ್ತಿದೆ” ಎಂದರು.

“ರಾಜ್ಯದಲ್ಲಿ 50-50 ಫಲಿತಾಂಶ ​​ಬರಲಿದೆ. ಕೋಲಾರದಲ್ಲಿ 29 ಸಾವಿರ ಮತಗಳಿಂದ ಕಾಂಗ್ರೆಸ್ ಗೆಲ್ಲದೆ. ರಮೇಶ್ ಕುಮಾರ್​ಗೆ ವಿಧಾನ ಪರಿಷತ್​ ಟಿಕೆಟ್ ಕೇಳಿದ್ದೆವು. ಅದು ಸಿಗಲಿಲ್ಲ. ಮುಂದೆ ಒಳ್ಳೆ ಅವಕಾಶ ಸಿಗಬಹುದು. ರಾಜ್ಯದಲ್ಲಿ ಸಚಿವ ಸ್ಥಾನ ಬದಲಾವಣೆಯಾದರೆ ಕೋಲಾರಕ್ಕೂ ಸಚಿವ ಸ್ಥಾನ ಸಿಗಲಿದೆ” ಎಂದು ತಿಳಿಸಿದರು.

Advertisements

“ಚುನಾವಣೆ‌ ನೀತಿ ಸಂಹಿತೆ ಮುಗಿದ ಕೂಡಲೇ ಅಭಿವೃದ್ದಿ ಕೆಲಸಗಳು ಆರಂಭವಾಗಲಿದೆ. ರಿಂಗ್ ರೋಡ್‌ಗೆ ಡಿಪಿಆರ್ ಆಗಿದೆ. ಮೂರು ತಿಂಗಳ‌ ಒಳಗೆ ಟಿಂಡರ್ ಪ್ರಕ್ರಿಯೆ ಸಹ ಮುಗಿಯಲಿದೆ. ಎಪಿಎಂಸಿ ಜಾಗ ಕೂಡಲೇ ಆಗಲಿದೆ. ಚಲುವನಹಳ್ಳಿ ಜಾಗ‌ ನೋಡಿದ್ದು, ಅದೇ ಪೈನಲ್‌ ಆಗಲಿದೆ” ಎಂದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಗಸ್ಟ್ 26ರಿಂದ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದಾದ್ಯಂತ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 26ರಿಂದ ಭಾರೀ ಮಳೆಯಾಗಲಿದೆ...

ಧರ್ಮಸ್ಥಳ ಪ್ರಕರಣ | ನನ್ನ ಬಂಧನ ರಾಜಕೀಯ ಪಿತೂರಿಯ ಭಾಗ: ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಸರ್ಕಾರದಿಂದ ನಷ್ಟ ಸರಿದೂಗಿಸಲಾಗದು, ರೈತರೇ ಕಷ್ಟಕ್ಕೆ ಒಗ್ಗಿಕೊಳ್ಳಬೇಕು: ಬಿಜೆಪಿ ನಾಯಕನ ಹೇಳಿಕೆಗೆ ತೀವ್ರ ಆಕ್ರೋಶ

ಇತ್ತೀಚಿಗೆ ಆದ ಅತಿವೃಷ್ಟಿಯಿಂದ ರೈತರಿಗೆ ಆಗಿರುವ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಲು...

Download Eedina App Android / iOS

X