ಮಂಡ್ಯ | ದಲಿತ ಕಾಲೋನಿಯಲ್ಲಿ ಅನಧಿಕೃತ ಮೊಬೈಲ್ ಟವರ್‌ ನಿರ್ಮಾಣ; ತೆರವುಗೊಳಿಸುವಂತೆ ದಸಂಸ ಆಗ್ರಹ

Date:

Advertisements

ಸರ್ಕಾರದ ಆದೇಶವಿಲ್ಲದೆ ಸವರ್ಣಿಯ ವ್ಯಕ್ತಿಯೋರ್ವ ಮೊಬೈಲ್ ಟವರ್‌ ನಿರ್ಮಿಸಿದ್ದು, ಇದರಿಂದ ಮಕ್ಕಳು, ವೃದ್ಧರು ಸೇರಿದಂತೆ ಸ್ಥಳೀಯರಿಗೆ ತೊಂದರೆಯಾಗುತ್ತಿದೆ ಎಂದು ಆರೋಪಿಸಿ ದಸಂಸ ಕಾರ್ಯಕರ್ತರು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕು ತಹಶೀಲ್ದಾರ್‌ ಪರಶುರಾಂ ಸತ್ತಿಗೇರಿ ಅವರಿಗೆ ದೂರು ನೀಡಿದ್ದಾರೆ.

“ತಾಲೂಕಿನ ಬೋತಂಗಳ್ಳಿ ಗ್ರಾಮದ ದಲಿತ ಕಾಲೋನಿ ನಿವಾಸಿಗಳು ವಾಸಿಸುತ್ತಿರುವ ಪಕ್ಕದಲ್ಲಿ ಏರ್‌ಟೆಲ್ ಕಂಪನಿಯ ಮೊಬೈಲ್ ಟವರ್‌ ಅಳವಡಿಸಿರುವುದರಿಂದ ಸ್ಥಳೀಯರು ತೊಂದರೆಯಾಗಬಹುದೆಂಬ ಆತಂಕದಲ್ಲಿದ್ದಾರೆ” ಎಂದರು.

“ಸಾರ್ವಜನಿಕರ ಸ್ಥಳದಲ್ಲಿ ಏರ್‌ಟೆಲ್ ಕಂಪನಿಯ ಮೊಬೈಲ್ ಟವರ್‌ ಅಳವಡಿಸಲು ಯಾವುದೇ ಸರ್ಕಾರದ ಆದೇಶವಿಲ್ಲದೆ‌ ಸವರ್ಣೀಯ ತಮ್ಮಡಿಗೌಡರ ಪುತ್ರ ಪುಟ್ಟೇಗೌಡ ದಲಿತ ನಿವಾಸಿಗಳು ವಾಸಿಸುತ್ತಿರುವ ಪಕ್ಕದಲ್ಲಿ ಏರ್‌ಟೆಲ್‌ ಕಂಪನಿಯ ಮೊಬೈಲ್ ಟವರ್‌ ನಿರ್ಮಿಸಿದ್ದಾರೆ” ಎಂದು ದಸಂಸ ಮುಖಂಡರು ಆರೋಪಿಸಿದರು.

Advertisements

“ಟವರ್‌ನಿಂದ ಬರುವ ಶಬ್ದ ಹಾಗೂ ತರಂಗಳಿಂದ ವಿದ್ಯಾಭ್ಯಾಸ ಮಾಡುವ ಮಕ್ಕಳ ಕಿವಿ ಮತ್ತು ಕಣ್ಣುಗಳಿಗೆ ತೊಂದರೆಯಾಗುತ್ತದೆ. ಜತೆಗೆ ಪ್ರಾಣಹಾನಿ ಉಂಟಾಗಿ, ವಯಸ್ಸಾದವರಿಗೆ ಹೃದಯಾಘಾತ ಆಗುವ ಸಂಭವವಿದೆ” ಎಂದು ದೂರಿದರು.

“ಟವರ್‌ ನಿರ್ಮಾಣ ಮಾಡಿರುವ ಕಂಪನಿ ಮತ್ತು ಪುಟ್ಟೇಗೌಡ ಹಾಗೂ ತಮ್ಮಡಿಗೌಡ ಅವರ ವಿರುದ್ಧ ಕಾನೂನು ರೀತ್ಯ ಕ್ರಮ ಜರುಗಿಸಿ ಕೂಡಲೇ ಟವರ್‌ ಸ್ಥಾವರವನ್ನು ತೆರವುಗೊಳಿಸಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ಎಂಎಲ್‌ಸಿ ಚುನಾವಣೆ ನೆಪ; ಸಾರ್ವಜನಿಕರ ಕಾರ್ಯಕ್ಕೆ ನಿರ್ಬಂಧಿಸಿದ ಅಧಿಕಾರಿಗಳು

ದಸಂಸ ಸಂಚಾಲಕ ಕುಬೇರಪ್ಪ, ಸಂಘಟನಾ ಕಾರ್ಯದರ್ಶಿ ಶ್ರೀಕಂಠಯ್ಯ, ಮುಂಡುಗದೊರೆ ಗೋಪಿ ಸೇರಿದಂತೆ ಇತರರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X