ಮತ ಎಣಿಕೆಯಲ್ಲಿ ಭಾಗವಹಿಸದಂತೆ ವಿಪಕ್ಷದ ಕಾರ್ಯಕರ್ತರಿಗೆ ಗೃಹ ಬಂಧನ: ಅಖಿಲೇಶ್ ಯಾದವ್

Date:

Advertisements

“ಉತ್ತರ ಪ್ರದೇಶದ ಹಲವು ಜಿಲ್ಲೆಗಳಲ್ಲಿ ವಿಪಕ್ಷದ ಕಾರ್ಯಕರ್ತರಿಗೆ ಗೃಹ ಬಂಧನ ವಿಧಿಸಲಾಗುತ್ತಿದೆ. ಆ ಮೂಲಕ ಮತ ಎಣಿಕೆಯಲ್ಲಿ ಭಾಗವಹಿಸದಂತೆ ತಡೆ ಹಿಡಿಯಲಾಗುತ್ತಿದೆ” ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಗಂಭೀರ ಆರೋಪ ಮಾಡಿದ್ದಾರೆ.

ಸೋಮವಾರ ರಾತ್ರಿ ಉತ್ತರ ಪ್ರದೇಶದ ಹಲವು ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿ ಮತ್ತು ಪೊಲೀಸರು ಸೇರಿಕೊಂಡು ಕಾನೂನುಬಾಹಿರವಾಗಿ ವಿರೋಧ ಪಕ್ಷಗಳ ಕಾರ್ಯಕರ್ತರನ್ನು ಗೃಹಬಂಧನದಲ್ಲಿ ಇರಿಸುತ್ತಿದ್ದು, ಇದರಿಂದ ಜೂನ್ 4ರಂದು ನಡೆಯಲಿರುವ ಮತ ಎಣಿಕೆಯ ಪ್ರಕ್ರಿಯೆಯಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ ಎಂದು ಉತ್ತರ ಪ್ರದೇಶದ ಮಾಜಿ ಸಿಎಂ ಆರೋಪಿಸಿದ್ದಾರೆ.

ಈ ಸಂಬಂಧ ಸಿಸಿಟಿವಿ ದೃಶ್ಯಾವಳಿಗಳನ್ನು ಬಿಡುಗಡೆ ಮಾಡಿರುವ ಅವರು, “ಇಂತಹ ಬೆಳವಣಿಗೆಗಳನ್ನು ಉತ್ತರ ಪ್ರದೇಶದ ಚುನಾವಣಾಧಿಕಾರಿ ತಕ್ಷಣವೇ ನಿಲ್ಲಿಸಬೇಕು. ಬಂಧಿತ ವಿಪಕ್ಷದ ಮುಖಂಡರನ್ನು ತಕ್ಷಣವೇ ಬಿಡುಗಡೆ ಮಾಡಬೇಕು” ಎಂದು ಕನೌಜ್‌ನಿಂದ ಸ್ಪರ್ಧಿಸಿರುವ ಅಖಿಲೇಶ್ ಯಾದವ್ ಹಿಂದಿಯಲ್ಲಿ ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿದ್ದಾರೆ.

Advertisements

“ಎಲ್ಲ ರಾಜಕೀಯ ಪಕ್ಷಗಳು ಶಾಂತಿಯುತವಾಗಿ ಕೆಲಸ ಮಾಡುತ್ತಿರುವಾಗ, ಉತ್ತರ ಪ್ರದೇಶ ಸರ್ಕಾರ ಮತ್ತು ಆಡಳಿತವು ಸಾರ್ವಜನಿಕರ ಕೋಪಕ್ಕೆ ಕಾರಣವಾಗುವ ಯಾವುದೇ ಅನೈತಿಕ ಕೆಲಸವನ್ನು ಮಾಡಬಾರದು. ಪಕ್ಷಪಾತಿ ಧೋರಣೆ ಮಾಡುತ್ತಿರುವ ಜಿಲ್ಲಾಧಿಕಾರಿ ಮತ್ತು ಇತರೆ ಅಧಿಕಾರಿಗಳನ್ನು ತಕ್ಷಣವೇ ಸೇವೆಯಿಂದ ತೆಗೆದು ಹಾಕಬೇಕು. ಶಾಂತಿಯುತ ವಾತಾವರಣದಲ್ಲಿ ಮತ ಎಣಿಕೆಯನ್ನು ಪೂರ್ಣಗೊಳಿಸುವ ಭರವಸೆ ನೀಡಬೇಕು” ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥರು ಚುನಾವಣಾ ಆಯೋಗ ಹಾಗೂ ಸುಪ್ರೀಂ ಕೋರ್ಟ್‌ ಅನ್ನು ಒತ್ತಾಯಿಸಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

Download Eedina App Android / iOS

X