ರಾಮಮಂದಿರ ಇರುವ ಫೈಜಾಬಾದ್‌ನಲ್ಲಿ ಬಿಜೆಪಿಗೆ ಹಿನ್ನಡೆ: ಅಯೋಧ್ಯೆಯಲ್ಲಿ ಕೇಸರಿ ಪಕ್ಷಕ್ಕೆ ಆಘಾತ

Date:

Advertisements

ಬಿಜೆಪಿಯ 2019ರ ಚುನಾವಣಾ ಪ್ರಣಾಳಿಕೆಗಳಲ್ಲಿ ಒಂದಾದ ಅಯೋಧ್ಯೆಯಲ್ಲಿ ರಾಮಮಂದಿರ ಕೇಸರಿ ಪಕ್ಷಕ್ಕೆ ಯಾವುದೇ ಲಾಭ ನೀಡಿದಂತಿಲ್ಲ. ಅಯೋಧ್ಯೆಯಲ್ಲಿ ಬಿಜೆಪಿಗೆ ಆಘಾತ ಉಂಟಾಗಿದ್ದು, ರಾಮಮಂದಿರ ಇರುವ ಕ್ಷೇತ್ರವಾದ ಫೈಜಾಬಾದ್‌ನಲ್ಲಿ ಕೇಸರಿ ಪಕ್ಷಕ್ಕೆ ಹಿನ್ನಡೆ ಕಂಡಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಪಕ್ಷವು ಜನವರಿ 22ರಂದು ದೇವಾಲಯದ ಉದ್ಘಾಟನೆ ಮಾಡಿದೆ. ಬಿಜೆಪಿಯು ರಾಮಮಂದಿರ ಅಲೆಯಿಂದಲೇ ಗೆಲುವು ಸಾಧಿಸಲಿದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಫೈಜಾಬಾದ್‌ನಲ್ಲಿ ಸಮಾಜವಾದಿ ಪಕ್ಷದ (ಎಸ್‌ಪಿ) ಅವಧೇಶ್ ಪ್ರಸಾದ್‌ ಮುನ್ನಡೆಯಲ್ಲಿದ್ದಾರೆ.

ಅಯೋಧ್ಯೆ ಜಿಲ್ಲೆಯ ಫೈಜಾಬಾದ್ ಕ್ಷೇತ್ರದಲ್ಲಿ ಬಿಜೆಪಿಯ ಲಲ್ಲು ಸಿಂಗ್ ಎಸ್‌ಪಿಯ ಅವಧೇಶ್ ಪ್ರಸಾದ್ ವಿರುದ್ಧ 2,244 ಮತಗಳಿಂದ ಹಿನ್ನಡೆಯಲ್ಲಿದ್ದಾರೆ.

Advertisements

ಇದನ್ನು ಓದಿದ್ದೀರಾ?  ಮಹಾ ಸರ್ಕಾರ ಬೀಳಿಸಿದ್ದ ಬಿಜೆಪಿಗೆ ಮುಖಭಂಗ;’ಇಂಡಿಯಾ’ ಒಕ್ಕೂಟಕ್ಕೆ ಭಾರೀ ಮುನ್ನಡೆ

ಫೈಜಾಬಾದ್ ಬಿಜೆಪಿಗೆ ಸುರಕ್ಷಿತ ಸ್ಥಾನವೆಂದು ಪರಿಗಣಿಸಲಾಗಿತ್ತು. ಆದರೆ ಇಲ್ಲಿ ಬಿಜೆಪಿಗೆ ಹಿನ್ನೆಡೆ ಆಶ್ಚರ್ಯ ಹುಟ್ಟಿಸಿದೆ. ಎಸ್‌ಪಿ ಈ ಕ್ಷೇತ್ರ ಮಾತ್ರವಲ್ಲದೆ ಉತ್ತರ ಪ್ರದೇಶದ 30ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುತ್ತಿದೆ.

ಹೆಚ್ಚಿನ ಸಮೀಕ್ಷೆ ತಜ್ಞರು ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಅಭೂತಪೂರ್ವ ವಿಜಯದ ಭವಿಷ್ಯ ನುಡಿದಿದ್ದರು. ಆದರೆ ಬಿಜೆಪಿ ಬಹುತೇಕ ಹಿನ್ನೆಡೆ ಸಾಧಿಸುತ್ತಿದೆ.

ಉತ್ತರ ಪ್ರದೇಶ, ಮಹಾರಾಷ್ಟ್ರ ಮತ್ತು ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಚ್ಚರಿ ಮೂಡಿಸಿದೆ. ಎಕ್ಸಿಟ್ ಪೋಲ್‌ಗಳಲ್ಲಿ ಬಿಜೆಪಿ ದೊಡ್ಡ ಗೆಲುವು ಸಾಧಿಸಲಿದೆ ಎಂಬ ಕ್ಷೇತ್ರಗಳಲ್ಲಿ ಬಿಜೆಪಿ ಸೋಲು ಕಂಡಿದೆ. ಉತ್ತರ ಪ್ರದೇಶ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ಕೇರಳ ಮತ್ತು ತಮಿಳುನಾಡುಗಳಲ್ಲಿ ಇಂಡಿಯಾ ಒಕ್ಕೂಟ ಮುಂಚೂಣಿಯಲ್ಲಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X