ಗುಜರಾತ್‌ನಲ್ಲಿ ಖಾತೆ ತೆರೆದ ಕಾಂಗ್ರೆಸ್; ಕೈ ಅಭ್ಯರ್ಥಿ ಗೆನಿಬೆನ್ ಠಾಕೂರ್ ಗೆಲುವು

Date:

Advertisements

ಗುಜರಾತ್ ಬನಸ್ಕಾಂತ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ರಾಜ್ಯದಲ್ಲಿ ಕಾಂಗ್ರೆಸ್ ಗೆಲುವು ಕಂಡ ಏಕೈಕ ಸ್ಥಾನವಾಗಿದೆ.

ಗುಜರಾತ್‌ನ ಒಟ್ಟು 26ರಲ್ಲಿ ಕಾಂಗ್ರೆಸ್ ಇದೀಗ ಒಂದರಲ್ಲಿ ಗೆಲುವು ಸಾಧಿಸಿ ಖಾತೆ ತೆರೆದಿದೆ. 2009 ಲೋಕಸಭಾ ಚುನಾವಣೆಯ ನಂತರ ಗುಜರಾತ್ನಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. 2014 ಮತ್ತು 2019 ಸಾರ್ವತ್ರಿಕ ಚುನಾವಣೆಗಳಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ ಯಾವುದೇ ಸ್ಥಾನವನ್ನು ಗೆದ್ದಿರಲಿಲ್ಲ.

ಗುಜರಾತ್‌ನ ಬನಸ್ಕಾಂತ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆನಿಬೆನ್ ಠಾಕೂರ್ ಅವರು ಭಾರತೀಯ ಜನತಾ ಪಕ್ಷದ (ಬಿಜೆಪಿ) ರೇಖಾ ಚೌಧರಿ ವಿರುದ್ಧ ಸ್ಪರ್ಧೆ ಮಾಡಿ 30,000 ಮತಗಳಿಂದ ಗೆಲುವು ಸಾಧಿಸಿದ್ದಾರೆ. ಗುಜರಾತ್ನಲ್ಲಿ ಬಿಜೆಪಿ ರಾಜ್ಯದ ಎಲ್ಲ 26 ಸ್ಥಾನಗಳನ್ನು ಗೆಲ್ಲುವ ಗುರಿ ಹೊಂದಿತ್ತು.

Advertisements

ಗುಜರಾತ್ನಲ್ಲಿ ಕಾಂಗ್ರೆಸ್ ನಾಲ್ಕು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ ಎಂದು ತೋರಿಸಿದೆ ಆದರೆ ಅಂತಿಮವಾಗಿ ಠಾಕೂರ್ ಅವರ ಪಕ್ಷದಿಂದ ಏಕೈಕ ವಿಜೇತರಾಗಿ ಹೊರಹೊಮ್ಮಿದರು.

ಬನಸ್ಕಾಂತ ಬಿಜೆಪಿಯ ಭದ್ರಕೋಟೆಯಾಗಿದೆ. 2019ರಲ್ಲಿ ಬಿಜೆಪಿಯ ಪರ್ಬತ್ಭಾಯ್ ಪಟೇಲ್ 3,68,000 ಮತಗಳ ಅಂತರದಿಂದ ಕಾಂಗ್ರೆಸ್ ಪಾರ್ತಿ ಭಟೋಲ್ ಅವರನ್ನು ಸೋಲಿಸಿ ಕ್ಷೇತ್ರವನ್ನು ಗೆದ್ದರು. 2014 ಚುನಾವಣೆಯಲ್ಲೂ ಬಿಜೆಪಿ ಗೆದ್ದಿತ್ತು.

ಈ ಸುದ್ದಿ ಓದಿದ್ದೀರಾ?  10 ರಾಜ್ಯಗಳಲ್ಲಿ ಬಿಜೆಪಿ ‘ಶೂನ್ಯ’ ಸಾಧನೆ

2014 ಮತ್ತು 2019 ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ತವರು ರಾಜ್ಯವಾದ ಗುಜರಾತ್ನಲ್ಲಿ ಕಾಂಗ್ರೆಸ್ ಯಾವುದೇ ಸ್ಥಾನಗಳನ್ನು ಗೆಲ್ಲಲು ವಿಫಲವಾಗಿದೆ. 2009ರಲ್ಲಿ ಗುಜರಾತ್ನಲ್ಲಿ 26 ಸ್ಥಾನಗಳಲ್ಲಿ ಕಾಂಗ್ರೆಸ್ 11 ಮತ್ತು ಬಿಜೆಪಿ 14 ಸ್ಥಾನಗಳನ್ನು ಗೆದ್ದಿತ್ತು.

ಗೆನಿಬೆನ್ ಠಾಕೋರ್ ಪ್ರಸ್ತುತ ಬನಸ್ಕಾಂತ ಜಿಲ್ಲೆಯ ವಾವ್ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದಾರೆ. ಗೆನಿಬೆನ್ ಅವರು ತಮ್ಮ ಗೆಲುವಿನೊಂದಿಗೆ ಗುಜರಾತ್ನಲ್ಲಿ ಬಿಜೆಪಿಯ ಭದ್ರ ಕೋಟೆಯನ್ನು ಭೇಧಿಸಿದ್ದಾರೆ. ಗೆಲುವಿನೊಂದಿಗೆ ಅವರು ರಾಜ್ಯದ ಕಾಂಗ್ರೆಸ್ನಲ್ಲಿ ದೊಡ್ಡ ನಾಯಕಿಯಾಗಿ ಹೊರಹೊಮ್ಮಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X