ಭೋವಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ, ಕೋಟ ಶ್ರೀನಿವಾಸ ಪೂಜಾರಿಗೆ ಕೋಟಿ ಕೋಟಿ ಲಂಚ: ಗೂಳಿಹಟ್ಟಿ ಶೇಖರ್‌ ಗಂಭೀರ ಆರೋಪ

Date:

Advertisements

ಲೋಕಸಭೆ ಚುನಾವಣೆಯಲ್ಲಿ ಜಯ ಸಾಧಿಸಿರುವ ಕೋಟ ಶ್ರೀನಿವಾಸ ಪೂಜಾರಿ ವಿರುದ್ಧ ಹೊಸದುರ್ಗದ ಮಾಜಿ ಶಾಸಕ ಗೂಳಿಹಟ್ಟಿ ಡಿ.ಶೇಖರ್‌ ಅವರು ಗಂಭೀರ ಆರೋಪ ಮಾಡಿದ್ದು, “ಬಿಜೆಪಿ ಅಧಿಕಾರವಧಿಯಲ್ಲಿ ‘ಭೋವಿ ಅಭಿವೃದ್ಧಿ ನಿಗಮ’ದಲ್ಲಿ ನೂರಾರು ಕೋಟಿ ಅವ್ಯವಹಾರ ನಡೆದಿದೆ. ಸಮಾಜ ಕಲ್ಯಾಣ ಸಚಿವರಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಲಂಚ ಸಂದಾಯವಾಗಿದೆ” ಎಂದು ಆರೋಪಿಸಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಪರಿಶಿಷ್ಟ ಪಂಗಡ ಕಲ್ಯಾಣ ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಪಟ್ಟು ಹಿಡಿದಿರುವ ಸಂದರ್ಭದಲ್ಲಿ ಗೂಳಿಹಟ್ಟಿ ಮಾಡಿದ ಈ ಆರೋಪ ರಾಜಕೀಯ ಸಂಚಲನ ಸೃಷ್ಟಿಸಿದೆ.

13 ನಿಮಿಷಗಳ ಆಡಿಯೊ ಹೇಳಿಕೆಯನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿರುವ ಗೂಳಿಹಟ್ಟಿ, ” ‘ಬಸವರಾಜ ಬೊಮ್ಮಾಯಿ ಸಿಎಂ ಆಗಿದ್ದ ಕೊನೆಯ ಮೂರು ತಿಂಗಳು ಭೋವಿ ಅಭಿವೃದ್ಧಿ ನಿಗಮ ಅಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ. ಬಿಜೆಪಿ ಅಧಿಕಾರವಧಿಯಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿರುವುದು ನನ್ನ ಗಮನಕ್ಕೆ ಬಂದಿದೆ. ಆಗ ಸಚಿವರಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ಅವರಿಗೂ ಇದರಲ್ಲಿ ಪಾಲಿದೆ” ಎಂದು ದೂರಿದ್ದಾರೆ.

Advertisements

“ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಅತ್ಯಂತ ಪ್ರಾಮಾಣಿಕ ರಾಜಕಾರಣಿ ಎಂದು ಬಿಂಬಿಸಲಾಗಿದೆ. ಆದರೆ ಚುನಾವಣೆ ಸಂದರ್ಭದಲ್ಲಿ ಅವರಿಗೆ ₹50 ಕೋಟಿಯಿಂದ ₹60 ಕೋಟಿಯಷ್ಟು ಹಣ ಎಲ್ಲಿಂದ ಬಂತು? ಇದಕ್ಕೆ ಉತ್ತರ ಸಿಗಬೇಕಲ್ಲವೇ” ಎಂದು ಪ್ರಶ್ನಿಸಿದ್ದಾರೆ.

“ಭೋವಿ ಅಭಿವೃದ್ಧಿ ನಿಗಮದ ಅಕ್ರಮವನ್ನು ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖೆ ನಡೆಸಬೇಕು. ಪ್ರಕರಣದ ತನಿಖೆಯನ್ನು ಸಿಬಿಐ ಅಥವಾ ಸಿಐಡಿಗೆ ನೀಡುವುದರಿಂದ ಪ್ರಯೋಜನವಿಲ್ಲ. ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಯಾದರೆ ಮಾತ್ರ ಸತ್ಯ ಬೆಳಕಿಗೆ ಬರುತ್ತದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಗಮನ ಹರಿಸಬೇಕು” ಎಂದು ಆಗ್ರಹಿಸಿದ್ದಾರೆ.

“ಭೋವಿ ಅಭಿವೃದ್ಧಿ ನಿಗಮದ ₹100 ಕೋಟಿಯನ್ನು ತಿಂದು ಹಾಕಲಾಗಿದೆ. ಭೊವಿ ಸಮಾಜದ ಮುಖಂಡರ ಪಾತ್ರವೂ ಇದರಲ್ಲಿದೆ. ಸಮಾಜದ ಫಲಾನುಭವಿಗಳಿಗೆ ಒಂದು ರೂಪಾಯಿ ಕೂಡ ತಲುಪಿಲ್ಲ. ಮುಖ್ಯಮಂತ್ರಿಯಾಗಿದ್ದ ಬಸವರಾಜ ಬೊಮ್ಮಾಯಿ ಈ ಪ್ರಕರಣವನ್ನು ಸಿಐಡಿಗೆ ನೀಡಿದ್ದರು. ಕಾಂಗ್ರೆಸ್‌ ಅಧಿಕಾರವಧಿಯಲ್ಲಿ ಎಚ್‌.ಸಿ.ಮಹದೇವಪ್ಪ ಸಮಾಜ ಕಲ್ಯಾಣ ಸಚಿವರಾದ ಬಳಿಕ ತನಿಖೆ ಸ್ಥಗಿತಗೊಂಡಿದೆ. ಏಕೆ ಹೀಗೆ ಮಾಡಿದ್ದೀರಿ” ಎಂದು ಪ್ರಶ್ನಿಸಿದ್ದಾರೆ.

“ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರ ಲೈಂಗಿಕ ಹಗರಣದ ಬಗ್ಗೆ ತನಿಖೆ ನಡೆಯುತ್ತಿದೆ. ಇಂತಹದೇ ಆರೋಪ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌.ಯಡಿಯೂರಪ್ಪ ವಿರುದ್ಧವೂ ಕೇಳಿಬಂದಿದೆ. ದೂರು ನೀಡಿದ ಮಹಿಳೆಯ ಸಾವಿನ ಬಗ್ಗೆ ಅನುಮಾನಗಳಿವೆ. ಈ ಬಗ್ಗೆ ಏಕೆ ತನಿಖೆ ನಡೆಯುತ್ತಿಲ್ಲ” ಎಂದು ಕೇಳಿದ್ದಾರೆ.

“ಜಾತಿಗೊಂದರಂತೆ ಸ್ಥಾಪಿಸಿದ ಅಭಿವೃದ್ಧಿ ನಿಗಮಗಳಲ್ಲಿ ಇಂತಹ ಅವ್ಯಹಾರ ಮಾಮೂಲಿ ಆಗಿದೆ. ವಿವೇಚನಾ ಕೋಟಾದಡಿ ಸಚಿವರಿಗೆ ಶೇ 15, ಅಧ್ಯಕ್ಷರು ಮತ್ತು ಅಧಿಕಾರಿಗಳಿಗೆ ಶೇ 5ರಷ್ಟು ನಿಗದಿಪಡಿಸಲಾಗಿದೆ. ಇದು ಅತಿ ಹೆಚ್ಚು ದುರ್ಬಳಕೆ ಆಗುತ್ತಿದೆ ಎಂಬುದನ್ನು ನನ್ನ ಅನುಭವದಿಂದ ಹೇಳುತ್ತಿದ್ದೇನೆ” ಎಂದು ವಿವರಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X