ಮೋದಿ ಪ್ರಮಾಣ ವಚನ ಸ್ವೀಕಾರ ಒಂದು ದಿನ ಮುಂದಕ್ಕೆ: ಜೂ. 9 ಕ್ಕೆ ನಿಗದಿ

Date:

Advertisements

ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನ ಮಂತ್ರಿಯಾಗಿ ಭಾನುವಾರ(ಜೂ.9) ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಮೊದಲು ಜೂನ್‌ 8 ರಂದು ಪ್ರಮಾಣ ವಚನ ಸ್ವೀಕರಿಸುತ್ತಾರೆ ಎಂದು ವರದಿಯಾಗಿತ್ತು.

ಹೊಸದಾಗಿ ಪ್ರಮಾಣ ವಚನ ಸ್ವೀಕರಿಸುವ ಹಿನ್ನೆಲೆಯಲ್ಲಿ ಮೋದಿ ತಮ್ಮ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಬುಧವಾರ ನೀಡಿದ್ದಾರೆ. ರಾಷ್ಟ್ರಪತಿಯವರು ನೂತನ ಸರ್ಕಾರ ರಚನೆಯಾಗುವವರೆಗೂ ಪ್ರಧಾನಿಯಾಗಿ ಮುಂದುವರೆಯುವಂತೆ ನರೇಂದ್ರ ಮೋದಿಗೆ ಸೂಚಿಸಿದ್ದಾರೆ.

ಈ ನಡುವೆ ತೆಲುಗು ದೇಶಂ ಪಕ್ಷದ ನಾಯಕ ಚಂದ್ರಬಾಬು ನಾಯ್ಡು ಜೂನ್‌ 12 ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಮೊದಲು ಜೂ.9 ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ನಿರೀಕ್ಷಿಸಲಾಗಿತ್ತು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಿತ್ರಪಕ್ಷಗಳಿಗೆ ಮಣಿಯುವರೇ ಅಥವಾ ‘ಆಪರೇಷನ್ ಕಮಲ’ಕ್ಕೆ ಶರಣಾಗುವರೇ?

ನರೇಂದ್ರ ಮೋದಿ ಪ್ರಧಾನ ಮಂತ್ರಿಯಾಗಿ ಜೂ.9 ರಂದು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿಂದ ನಾಯ್ಡು ಅವರು ಪ್ರಮಾಣ ವಚನ ದಿನಾಂಕವನ್ನು ಮುಂದೂಡಿದ್ದಾರೆ. ನರೇಂದ್ರ ಮೋದಿ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ರಾಜೀನಾಮೆ ನೀಡಿದ್ದು, 17ನೇ ಲೋಕಸಭೆಯನ್ನು ರಾಷ್ಟ್ರಪತಿ ಅವರು ವಿಸರ್ಜಿಸಿದ್ದಾರೆ.

ಆಂಧ್ರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಚಂದ್ರಬಾಬು ನಾಯ್ಡು ಪಕ್ಷ ಟಿಡಿಪಿ ಅಭೂತಪೂರ್ವ ಯಶಸ್ಸು ಗಳಿಸಿದ್ದು, ಲೋಕಸಭೆಯಲ್ಲೂ 16 ಸ್ಥಾನ ಗೆಲ್ಲುವುದರೊಂದಿಗೆ ಎನ್‌ಡಿಎ ಒಕ್ಕೂಟದಲ್ಲಿ ಕಿಂಗ್‌ ಮೇಕರ್‌ಗಳಲ್ಲಿ ಪ್ರಮುಖ ಪಕ್ಷವಾಗಿದೆ.

ಬಿಜೆಪಿ ಬಹುಮತಕ್ಕೆ ಅಗತ್ಯವಾದ ಸಂಖ್ಯೆಗಳನ್ನು ಗಳಿಸುವಲ್ಲಿ ವಿಫಲವಾದ ಕಾರಣ ಟಿಡಿಪಿ ಹಾಗೂ ಜೆಡಿಯು ಕೇಂದ್ರದ ನೂತನ ಎನ್‌ಡಿಎ ಸರ್ಕಾರದಲ್ಲಿ ಪ್ರಮುಖ ಪಾತ್ರವಹಿಸಲಿವೆ. ಸುದ್ದಿಗಾರರೊಂದಿಗೆ ಮಾತನಾಡಿದ್ದ ಚಂದ್ರಬಾಬು ನಾಯ್ಡು ತಾವು ಎನ್‌ಡಿಎದಲ್ಲಿ ಉಳಿಯುವುದಾಗಿ ತಿಳಿಸಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X