ಎಕ್ಸಿಟ್ ಪೋಲ್‌ಗೂ ಮುನ್ನ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿರುವುದನ್ನು ಬಹಿರಂಗಗೊಳಿಸಿ: ಅಮಿತ್ ಶಾಗೆ ಕಾಂಗ್ರೆಸ್ ಆಗ್ರಹ

Date:

Advertisements

ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ಜೂನ್ 4 ರಂದು ಷೇರು ಮಾರುಕಟ್ಟೆಯಲ್ಲಾದ ದೊಡ್ಡ ಕುಸಿತದ ಹಿಂದೆ ದೊಡ್ಡ ಹಗರಣದ ಕಾರಣವಿದೆ ಎಂದು ನಿನ್ನೆಯಷ್ಟೆ(ಜೂ.06) ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದರು. ಹಗರಣದಿಂದ ಹೂಡಿಕೆದಾರರ 30 ಲಕ್ಷ ಕೋಟಿ ರೂ. ನಷ್ಟಕ್ಕೆ ಕಾರಣವಾಗಿದೆ. ನರೇಂದ್ರ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್‌ ಶಾ ಸೇರಿದಂತೆ ನೇರವಾಗಿ ಭಾಗಿಯಾಗಿದ್ದು,ಇದರ ಬಗ್ಗೆ ಜಂಟಿ ಸದನ ತನಿಖೆ ನಡೆಯಬೇಕೆಂದು ಆಗ್ರಹಿಸಿದ್ದರು.

ಈಗ ಇದೇ ಷೇರು ಹಗರಣಕ್ಕೆ ಸಂಬಂಧಿಸಿದಂತೆ ಚುನಾವಣೋತ್ತರ ಸಮೀಕ್ಷೆ ನಂತರ ಬಿಜೆಪಿ ನಾಯಕ ಅಮಿತ್‌ ಶಾ ಹೂಡಿಕೆ ಮಾಡಿ ನಂತರ ಫಲಿತಾಂಶಕ್ಕೂ ಒಂದು ದಿನ ಮುನ್ನ ತನ್ನ ಷೇರುಗಳನ್ನು ಮಾರಾಟ ಮಾಡಿರುವ ದಾಖಲೆಗಳನ್ನು ಬಿಡುಗಡೆ ಮಾಡುವಂತೆ ಕೇರಳ ಕಾಂಗ್ರೆಸ್ ಸವಾಲೆಸೆದಿದೆ.

ಈ ಬಗ್ಗೆ ಅಮಿತ್‌ ಶಾ ಚುನಾವಣಾ ಸಮಯದಲ್ಲಿ ಸಲ್ಲಿಸಿರುವ ದಾಖಲೆಗಳನ್ನು ಕೇರಳ ಕಾಂಗ್ರೆಸ್ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದೆ.

Advertisements

ಷೇರು ಮಾರುಕಟ್ಟೆ ಹಗರಣದ ಬಗ್ಗೆ ಸವಾಲು ಹಾಕುತ್ತೇವೆ. ಇದು ಅಮಿತ್‌ ಶಾ ಅವರು ತಮ್ಮ ಅಫಿಡೆವಿಟ್‌ನಲ್ಲಿ ಘೋಷಿಸಿರುವ ಷೇರುಗಳ ಪಟ್ಟಿಗಳ ಒಟ್ಟು ಪಟ್ಟಿ. ಇದನ್ನು ತಿರುಚದಿದ್ದರೆ ಅಥವಾ ಆಂತರಿಕ ಮಾರಾಟ ನಡೆಯದಿದ್ದರೆ ನಾವು ಕೆಲವು ಪ್ರಶ್ನೆಗಳೊಂದಿಗೆ ಪರಿಶೀಲನೆಗೊಳಪಡಿಸಬೇಕಾಗಿದೆ.

ಚುನಾವಣೋತ್ತರ ಸಮೀಕ್ಷೆ ಪ್ರಕಟವಾಗುವುದಕ್ಕೂ ಮುನ್ನ ಅಮಿತ್‌ ಶಾ ಅವರು ಎಷ್ಟು ಷೇರುಗಳನ್ನು ಖರೀದಿಸಿದ್ದರು? ಎಕ್ಸಿಟ್‌ ಪೋಲ್‌ ಪ್ರಕಟವಾದ ನಂತರ ಜೂನ್‌ 3 ರಂದು ಎಷ್ಟನ್ನು ಮಾರಾಟ ಮಾಡಿದರು ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಅದೇ ರೀತಿ ಪಿಯೂಷ್ ಗೋಯಲ್‌, ಇತರ ಸಚಿವರು, ಸಮೀಕ್ಷೆ ಪ್ರಕಟಿಸಿದವರು ಹಾಗೂ ಪತ್ರಕರ್ತರು ಒಳಗೊಂಡು ಈ ಹಗರಣವನ್ನು ಬಯಲಿಗೆಳಯಬೇಕಾಗಿದೆ. ಪೋಸ್ಟ್‌ನಲ್ಲಿ ಇರುವಂತ ಕಂಪನಿಗಳ ಹೆಸರುಗಳು ಅಮಿತ್‌ ಶಾ ಹಾಗೂ ಅವರ ಪತ್ನಿಯವರು ಷೇರು ಹೂಡಿಕೆ ಮಾಡಿರುವ ಕಂಪನಿಗಳ ಪಟ್ಟಿಯಾಗಿದೆ.

ಈ ದಾಖಲೆಯ ಹಿನ್ನೆಲೆಯಲ್ಲಿ ನಾವು ಅಮಿತ್‌ ಶಾ ಅವರಿಗೆ ಬಹಿರಂಗ ಸವಾಲು ಹಾಕುತ್ತೇವೆ. ಕಳೆದ ಒಂದು ತಿಂಗಳಲ್ಲಿ ನೀವು ಚಟುವಟಿಕೆ ನಡೆಸಿದ ಮಾರುಕಟ್ಟೆ ವಹಿವಾಟುಗಳನ್ನು ಸಾರ್ವಜನಿಕಗೊಳಿಸಿ ತಾವು ಸ್ವಚ್ಛವಾಗಿರುವುದಾಗಿ ತಿಳಿಸಿ ಎಂದು ಕೇರಳ ಕಾಂಗ್ರೆಸ್ ಸವಾಲೆಸೆದಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಜನರೊಂದಿಗೆ ನೊಂದು ಬೆಂದು ಬಂಗಾರವಾದ ರಾಹುಲ್ ಗಾಂಧಿ

ಕೇರಳ ಕಾಂಗ್ರೆಸ್ ಪೋಸ್ಟ್‌ ಮಾಡಿರುವ ಅಮಿತ್‌ ಶಾ ಅವರ ಚುನಾವಣಾ ಅಫಿಡೆವಿಟ್‌ನ ದಾಖಲೆಗಳಲ್ಲಿ ನೂರಾರು ಕಂಪನಿಗಳಿಗೆ ಹೂಡಿಕೆ ಮಾಡಿರುವ ಮಾಹಿತಿಯಿದೆ. ಇದರಿಂದ ಬಿಜೆಪಿ ನಾಯಕರು ನೂರಾರು ಕೋಟಿಗೂ ಅಧಿಕ ಲಾಭ ಪಡೆದಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಜೂನ್ 1 ರಂದು ನಡೆದ ಮತದಾನೋತ್ತರ ಸಮೀಕ್ಷೆ ನಂತರ ಷೇರು ಮಾರುಕಟ್ಟೆಗಳು ಏರಿಕೆ ಕಂಡಿದ್ದವು. ಮೂರು ದಿನಗಳ ನಂತರ ಕುಸಿತದ ಷೇರು ಮಾರುಕಟ್ಟೆ ಸೂಚ್ಯಂಕ ತಲೆಕೆಳಗಾಗಿತ್ತು. ಚುನಾವಣೋತ್ತರ ಸಮೀಕ್ಷೆಗಳದ್ದು ಸರಿಯಾಗಿಲ್ಲ ಎಂಬ ಮಾಹಿತಿ ಬಿಜೆಪಿ ನಾಯಕರಿಗೆ ಇತ್ತು ಎಂದು ರಾಹುಲ್ ಆರೋಪಿಸಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X