ಕೆನಡಾ | ಟೇಕಾಫ್ ಆಗುತ್ತಿದ್ದಂತೆಯೇ 389 ಪ್ರಯಾಣಿಕರಿದ್ದ ವಿಮಾನದಲ್ಲಿ ಕಾಣಿಸಿಕೊಂಡ ಬೆಂಕಿ; ವಿಡಿಯೋ ವೈರಲ್

Date:

Advertisements

389 ಪ್ರಯಾಣಿಕರು ಮತ್ತು 13 ಸಿಬ್ಬಂದಿಗಳೊಂದಿಗೆ ಪ್ಯಾರಿಸ್‌ಗೆ ತೆರಳುತ್ತಿದ್ದ ಕೆನಡಾದ ವಿಮಾನವೊಂದು ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಬೆಂಕಿ ಹೊತ್ತಿಕೊಂಡ ಘಟನೆ ಜೂನ್ 5ರಂದು ನಡೆದಿದ್ದು, ತಡವಾಗಿ ವರದಿಯಾಗಿದೆ. ಬೆಂಕಿ ಹೊತ್ತಿಕೊಂಡ ದೃಶ್ಯವು ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾಗಿದೆ.

ಏರ್ ಕೆನಡಾ ಸಂಸ್ಥೆಗೆ ಸೇರಿದ AC872 ವಿಮಾನವು ಜೂನ್ 5 ರಂದು ಟೊರೊಂಟೋದಿಂದ ಪ್ಯಾರಿಸ್‌ಗೆ ಹೊರಟಿತ್ತು. ಇದು ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಬೆಂಕಿ ಕಾಣಿಸಿಕೊಂಡ ಕೂಡಲೇ ಏರ್ ಕಂಟ್ರೋಲ್ ಅಧಿಕಾರಿಯು ಪೈಲಟ್‌ಗಳಿಗೆ ಮಾಹಿತಿ ನೀಡಿದ್ದರಿಂದ ಅರ್ಧಗಂಟೆಯ ಬಳಿಕ ಮತ್ತೆ ಟೊರೊಂಟೊಗೆ ಮರಳಿ, ಸುರಕ್ಷಿತವಾಗಿ ಲ್ಯಾಂಡ್ ಆಗಿದೆ. ಪ್ರಯಾಣಿಕರೆಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ವರದಿಯಾಗಿದೆ.

Advertisements

ಘಟನೆಯ ಬಗ್ಗೆ ಮಾಹಿತಿ ನೀಡಿರುವ ಏರ್ ಕೆನಡಾ, “AC872 ವಿಮಾನವು ಜೂನ್ 5 ರಂದು ಟೊರೊಂಟೋದಿಂದ ಪ್ಯಾರಿಸ್‌ಗೆ ಹೊರಟಿತ್ತು. ಇಂಜಿನ್‌ನಲ್ಲಿನ ದೋಷದಿಂದಾಗಿ ಟೇಕಾಫ್ ವೇಳೆ ಬೆಂಕಿ ಕಾಣಿಸಿದೆ. ನಿರ್ಗಮಿಸಿದ ಸ್ವಲ್ಪ ಸಮಯದ ನಂತರ ಟೊರೊಂಟೊಗೆ ಮರಳಿತು. ವಿಮಾನವು ಸುರಕ್ಷಿತವಾಗಿ ಇಳಿಯಿತು. ಬೋಯಿಂಗ್ 777 ವಿಮಾನದಲ್ಲಿ 389 ಪ್ರಯಾಣಿಕರು ಮತ್ತು 13 ಸಿಬ್ಬಂದಿ ಇದ್ದರು. ಪ್ರಯಾಣಿಕರನ್ನು ಅಂದೇ ಸಂಜೆಯ ಬಳಿಕ ಮತ್ತೊಂದು ವಿಮಾನದಲ್ಲಿ ಕಳುಹಿಸಿ ಕೊಡಲಾಗಿದೆ” ಎಂದು ತಿಳಿಸಿದೆ.

“ನಮ್ಮ ಪೈಲಟ್‌ಗಳು ಹೆಚ್ಚು ನುರಿತ ವೃತ್ತಿಪರರು. ಇಂತಹ ಘಟನೆಗಳ ಸಂದರ್ಭದಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಮಾಡುವ ಬಗ್ಗೆ ಚೆನ್ನಾಗಿ ತರಬೇತಿ ಪಡೆದಿದ್ದಾರೆ. ಕೇವಲ ಇಂಜಿನ್ ಮಾತ್ರವಲ್ಲದೇ, ವಿವಿಧ ಅಂಶಗಳಿಂದ ಕೂಡ ಇಂತಹ ಘಟನೆಗಳು ಉಂಟಾಗುತ್ತದೆ” ಎಂದು ಸಂಸ್ಥೆ ತಿಳಿಸಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತದ ಮೇಲೆ ಅಮೆರಿಕ ದ್ವೇಷ: ಟ್ರಂಪ್‌ಗೆ ನೊಬೆಲ್ ನೀಡುವಂತೆ ಮೋದಿ ಶಿಫಾರಸು ಮಾಡಿದ್ರೆ ಎಲ್ಲವೂ ಸರಿಹೋಗತ್ತ?

ಪಾಕಿಸ್ತಾನವು 2026ರ ನೊಬೆಲ್ ಶಾಂತಿ ಪ್ರಶಸ್ತಿಗೆ ಟ್ರಂಪ್‌ ಅವರನ್ನು ಶಿಫಾರಸು ಮಾಡುವುದಾಗಿ...

ಗಾಝಾದಲ್ಲಿ ನರಮೇಧ: ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಮತ್ತು ಇಸ್ರೇಲ್ ರಾಯಭಾರಿ ನಡುವೆ ವಾಕ್ಸಮರ

ಗಾಝಾದಲ್ಲಿ 'ಅಲ್‌ಝಝೀರಾ' ಸಂಸ್ಥೆಯ ಪತ್ರಕರ್ತನನ್ನು ಇಸ್ರೇಲ್ ಹತ್ಯೆಗೈದಿದೆ. ಈ ಹತ್ಯೆಯನ್ನು ಕಾಂಗ್ರೆಸ್‌...

ಮೋದಿ-ಝೆಲೆನ್ಸ್ಕಿ ಫೋನ್ ಮಾತುಕತೆ: ರಷ್ಯಾ ತೈಲ ಖರೀದಿ ಕುರಿತು ಭಾರತದ ಮೇಲೆ ಉಕ್ರೇನ್‌ ಒತ್ತಡ

ರಷ್ಯಾ ಜೊತೆ ಸಂಘರ್ಷದಲ್ಲಿರುವ ಉಕ್ರೇನ್‌ನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಪ್ರಧಾನಿ...

ಗಾಝಾದಲ್ಲಿ ಹತ್ಯೆಯಾದ ಯುವ ಪತ್ರಕರ್ತರೊಬ್ಬರ ಭಿನ್ನ ಉಯಿಲು !

ನಾನು ಸಾಯುವುದಾದರೆ, ನನ್ನ ಸಿದ್ಧಾಂತಗಳ ಮೇಲೆ ದೃಢವಾಗಿರುವೆ. ದೇವರ ಮುಂದೆ ನಾನು...

Download Eedina App Android / iOS

X