ಸ್ಪರ್ಧಿಸಿದ್ದ ಐದೂ ಸ್ಥಾನಗಳಲ್ಲಿ ಗೆದ್ದ ಎಲ್‌ಜೆಪಿ; ಮೋದಿ ಸರ್ಕಾರದಲ್ಲಿ ಮಂತ್ರಿಯಾಗ್ತಾರಾ ಚಿರಾಗ್ ಪಾಸ್ವಾನ್?

Date:

Advertisements

ಬಿಹಾರದಲ್ಲಿ ಎನ್‌ಡಿಎ ಮೈತ್ರಿಕೂಟದ ಮಿತ್ರಪಕ್ಷ ಚಿರಾಗ್ ಪಾಸ್ವಾನ್ ಅವರ ಎಲ್‌ಜೆಪಿ (ರಾಮ್ ವಿಲಾಸ್) ಐದು ಸ್ಥಾನಗಳಲ್ಲಿ ಸ್ಪರ್ಧಿಸಿ, ಐದರಲ್ಲೂ ಗೆಲುವು ಸಾಧಿಸಿದೆ. ಎಲ್‌ಜೆಪಿಯ ಐವರು ಸಂಸದರಲ್ಲಿ ಒಬ್ಬರಾದ ಎಲ್‌ಜೆಪಿ ನಾಯಕ ಚಿರಾಗ್ ಪಾಸ್ವಾನ್ ಅವರು ಮೋದಿ ಸರ್ಕಾರದಲ್ಲಿ ಸಚಿವರಾಗಲಿದ್ದಾರೆ ಎಂದು ವರದಿಯಾಗಿದೆ.

ಮೂರನೇ ಅವಧಿಗೆ ಪ್ರಧಾನಿಯಾಗಿ ಮೋದಿ ಅವರು ಭಾನುವಾರ ಸಂಜೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದಕ್ಕೂ ಮುನ್ನವೇ ಪಾಸ್ವಾನ್‌ ಅವರಿಗೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರಿಂದ ಕರೆ ಬಂದಿದ್ದು, ಪ್ರಧಾನಿ ನಿವಾಸದಲ್ಲಿ ನಡೆಯಲಿರುವ ಸಭೆಯಲ್ಲಿ ಪಾಸ್ವಾನ್ ಭಾಗಿಯಾಗಲಿದ್ದಾರೆ ಎಂದು ತಿಳಿದುಬಂದಿದೆ.

ಈ ಹಿಂದೆ, ಮೊದಲ ಮತ್ತು ಎರಡನೇ ಅವಧಿಯ ಮೋದಿ ಸರ್ಕಾರಗಳಲ್ಲಿ ಚಿರಾಗ್ ಪಾಸ್ವಾನ್ ಅವರಿಗೆ ಸಚಿವ ಸ್ಥಾನಗಳನ್ನು ನೀಡಲಾಗಿತ್ತು. ಆದರೆ, ಅವರು ತಮ್ಮ ತಂದೆ, ಎಲ್‌ಜೆಪಿ ಮುಖ್ಯಸ್ಥ ರಾಮ್ ವಿಲಾಸ್ ಪಾಸ್ವಾನ್ ಅವರಿಗೆ ಮಂತ್ರಿಗಿರಿಯನ್ನು ಬಿಟ್ಟುಕೊಟ್ಟಿದ್ದರು. ಆದರೆ, 2020ರಲ್ಲಿ ರಾಮ್ ವಿಲಾಸ್ ಪಾಸ್ವಾನ್ ಅವರು ಕೊನೆಯುಸಿರೆಳೆದರು.

Advertisements

ರಾಮ್ ವಿಲಾಸ್ ಅವರ ಸಾವಿನ ಬಳಿಕ ಕುಟುಂಬದೊಳಗೆ ಕಲಹ ಉಂಟಾಗಿತ್ತು. ಚಿರಾಗ್ ಪಾಸ್ವಾನ್ ಮತ್ತು ಅವರ ಚಿಕ್ಕಪ್ಪ ಪಶುಪತಿ ಕುಮಾರ್ ಪರಾಸ್ ಇಬ್ಬರ ನಡುವಿನ ವೈಮನಸ್ಸಿನಿಂದ ಪಕ್ಷವು ಇಬ್ಬಾಗವಾಯಿತು. ಬಿಜೆಪಿ ಪಶುಪತಿ ಅವರ ಪರವಾಗಿ ನಿಂತರೂ, ಚಿರಾಗ್ ಅವರು ಎನ್‌ಡಿಎಗೆ ತಮ್ಮ ಬೆಂಬಲವನ್ನು ಮುಂದುವರೆಸಿದ್ದರು. ಅಲ್ಲದೆ, ತಮ್ಮ ಬಣವನ್ನು ಬಲಗೊಳಿಸಲು, ಜನಸಂಪರ್ಕ ಸಾಧಿಸಲು ‘ಬಿಹಾರ್ ಫಸ್ಟ್, ಬಿಹಾರಿ ಫಸ್ಟ್’ ಅಭಿಯಾನ ಪ್ರಾರಂಭಿಸಿದ್ದರು.

2024ರ ಲೋಕಸಭಾ ಚುನಾವಣೆಗೂ ಮುನ್ನ, ಜಾತಿ ಲೆಕ್ಕಾಚಾರದಲ್ಲಿ ಬಿಹಾರದಲ್ಲಿ ಹೆಚ್ಚು ಮತಗಳನ್ನು ಸೆಳೆಯಲು ಚಿರಾಗ್ ಬಣ ಪ್ರಬಲವಾಗಿ ಎಂದು ಭಾವಿಸಿದ ಬಿಜೆಪಿ, ಚಿರಾಗ್ ಜೊತೆಗೂ ಸೀಟು ಹಂಚಿಕೆ ಮಾಡಿಕೊಂಡು, ಹೋರಾಟ ನಡೆಸಿತು. ಈಗ, ಬಿಜೆಪಿ ಏಕಾಂಗಿಯಾಗಿ ಬಹುಮತ ಪಡೆಯಲು ಸಾಧ್ಯವಾಗ ಹಿನ್ನೆಲೆ, ಚಿರಾಗ್ ಅವರಂತಹ ಸಣಣ ಮಿತ್ರಪಕ್ಷಗಳು ಸರ್ಕಾರ ರಚಿಸಲು ಬಿಜೆಪಿಗೆ ಬಲ ನೀಡಿವೆ.

ಹೀಗಾಗಿ, ಮೋದಿ ನೇತೃತ್ವದ ಹೊಸ ಸರ್ಕಾರದಲ್ಲಿ ಚಿರಾಗ್ ಪಾಸ್ವಾನ್‌ ಅವರಿಗೆ ಮಂತ್ರಿಗಿರಿ ನೀಡಲಾಗುತ್ತಿದೆ ಎಂದು ವರದಿಯಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X