ಬೆಂಗಳೂರು | ರವಿವಾರ ಮಧ್ಯಾಹ್ನವೇ ಬಿರುಗಾಳಿ ಸಹಿತ ಜೋರು ಮಳೆ

Date:

Advertisements

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರವಿವಾರ ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣವಿದ್ದು, ಮಧ್ಯಾಹ್ನದ ವೇಳೆಗೆ ಜೋರು ಮಳೆಯಾಗಿದೆ. ಸಾಯಂಕಾಲವೂ ಕೂಡ ಮತ್ತೆ ಮಳೆಯಾವಾಗುವ ಸಾಧ್ಯತೆಯಿದೆ.

ಸದ್ಯ ನಗರದಲ್ಲಿ ತಂಪಾದ ವಾತಾವರಣ ತುಂಬಿದೆ. ಬೆಂಗಳೂರಿನ ಗೋವಿಂದರಾಜನಗರ, ಪ್ರಕಾಶನಗರ, ಚಾಮರಾಜಪೇಟೆ, ಕೆ.ಆರ್.ಮಾರುಕಟ್ಟೆ, ಲಾಲ್​ಬಾಗ್, ಹೆಬ್ಬಾಳ, ಮಲ್ಲೇಶ್ವರಂ, ರಾಜಾಜಿನಗರ ಸದಾಶಿವನಗರ, ಶಿವಾಜಿನಗರ, ಮೆಜೆಸ್ಟಿಕ್, ಶಾಂತಿನಗರ, ವಿಧಾನಸೌಧ, ಹೆಬ್ಬಾಳ, ಯಲಹಂಕ​​ ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ.

ಮಧ್ಯಾಹ್ನ ಏಕಾಏಕಿ ಮಳೆಯಾದ ಹಿನ್ನೆಲೆ, ವಾಹನ ಸವಾರರು ಅಂಡರ್‌ಪಾಸ್, ಅಂಗಡಿ ಬದಿ, ಮರದ ಕೆಳಗಡೆ ಮಳೆಯಿಂದ ತಪ್ಪಿಸಿಕೊಳ್ಳಲು ಆಶ್ರಯ ಪಡೆದಿದ್ದಾರೆ. ಜತೆಗೆ, ಬೆಂಗಳೂರಿನಲ್ಲಿ ಇನ್ನು ಮೂರು ದಿನಗಳ ಕಾಲ ಮಳೆಯಾಗಲಿದ್ದು, ಹವಾಮಾನ ಇಲಾಖೆ ‘ಯೆಲ್ಲೋ ಅಲರ್ಟ್’ ಘೋಷಣೆ ಮಾಡಿದೆ.

Advertisements

ನಗರದಲ್ಲಿ ಸದ್ಯ ಗಾಳಿಯ ಜತೆಗೆ ಮಳೆ ಆರಂಭವಾಗಿದ್ದು, ಮಳೆಯಿಂದ ಮತ್ತೆ ಮರ ಗಿಡಗಳು ಬೀಳುವ ಆತಂಕವೂ ಎದುರಾಗಿದೆ. ಮಳೆಯಿಂದಾಗಿ ತಂಪಾದ ವಾತಾವರಣ ಆವರಿಸಿದ್ದು, ಜನರು ಟೀ-ಕಾಫಿ ಅಂಗಡಿಗಳ ಮುಂದೆ ಸೇರಲು ಶುರು ಮಾಡಿದ್ದಾರೆ. ಅಲ್ಲದೆ, ಮಿರ್ಚಿ ಬೊಂಡಾ ಹೀಗೆ ಕರಿದ ತಿಂಡಿಗಳಿಗೂ ಬೇಡಿಕೆ ಹೆಚ್ಚಾಗಿದೆ.

ಕಳೆದ ಭಾನುವಾರವೂ ಏಕಾಏಕಿ ಮಳೆ ಸುರಿದಿದೆ. ಈ ವೇಳೆ, ಹಲವಾರು ಮರಗಳು ನೆಲಕ್ಕೊರಗಿದ್ದವು. ಜತೆಗೆ, ಅನೇಕ ವಾಹನ ಹಾಗೂ ಮನೆಗಳು ಹಾನಿಗೊಳಗಾಗಿದ್ದವು. ರಸ್ತೆಗಳಲ್ಲಿ ನೀರು ನಿಂತು ತಗ್ಗು ಪ್ರದೇಶದ ಮನೆಗಳಿಗೆ ಪ್ರವಾಹದಂತೆ ಮಳೆ ನೀರು ಹರಿದಿತ್ತು. ಇದೀಗ, ನಗರದಲ್ಲಿ ಮಳೆ ಬಿತ್ತೆಂದರೆ, ಅವಾಂತರ ಸೃಷ್ಟಿಯಾಗಬಹುದು ಎಂಬ ಭಯದಲ್ಲಿ ನಗರದ ನಾಗರೀಕರು ಇದ್ದಾರೆ.

ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಸುಳಿಗಾಳಿ ಪರಿಣಾಮ ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಮೂರು ದಿನಗಳ ಕಾಲ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಜೂ.11ರವರೆಗೆ ರೆಡ್ ಅಲರ್ಟ್ ಘೋಷಣೆಯಾಗಿದೆ.

ಈ ಸುದ್ದಿ ಓದಿದ್ದೀರಾ? ನೀಟ್ ಪರೀಕ್ಷೆ ವಿವಾದ| ಸಂಸತ್ತಿನಲ್ಲಿ ನಿಮ್ಮ ಧ್ವನಿಯಾಗುತ್ತೇನೆ: ವಿದ್ಯಾರ್ಥಿಗಳಿಗೆ ರಾಹುಲ್ ಭರವಸೆ

ರಾಜ್ಯದಲ್ಲಿ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿಲಾಗಿದೆ. ಕರಾವಳಿ ತೀರದಲ್ಲಿ ಮೀನುಗಾರಿಕೆ ಮಾಡಲು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ವಿಜಯಪುರ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಜೂನ್ 12ವರೆಗೆ ಮಳೆ ಮುಂದುವರೆಯಲಿದೆ. ದಕ್ಷಿಣ ಕನ್ನಡ, ಗದಗ, ಕಲಬುರಗಿ, ರಾಯಚೂರು, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X