ಬಿಜೆಪಿ ಸ್ಪೀಕರ್ ಹುದ್ದೆಯನ್ನು ಉಳಿಸಿಕೊಂಡರೆ ಅಪಾಯಕಾರಿ: ಎಎಪಿ ಸಂಸದ

Date:

Advertisements

ಹೊಸ ಲೋಕಸಭೆಯಲ್ಲಿ ಬಿಜೆಪಿ ಸ್ಪೀಕರ್ ಹುದ್ದೆಯನ್ನು ಉಳಿಸಿಕೊಂಡರೆ ‘ಸಂಸದೀಯ ಸಂಪ್ರದಾಯಗಳಿಗೆ ಅಪಾಯಕಾರಿ’ ಎಂದು ಎಎಪಿ ಸಂಸದ ಸಂಜಯ್ ಸಿಂಗ್ ಆತಂಕ ವ್ಯಕ್ತಪಡಿಸಿದ್ದಾರೆ. ಹಾಗೆಯೇ ಕುದುರೆ ವ್ಯಾಪಾರ ಮತ್ತು ಸಾಂವಿಧಾನಿಕ ನಿಬಂಧನೆಗಳ ಉಲ್ಲಂಘನೆಯ ಸಾಧ್ಯತೆಯ ಬಗ್ಗೆ ಪ್ರಸ್ತಾಪಿಸಿದ್ದಾರೆ.

ಲಕ್ನೋದಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು, 16 ಸಂಸದರನ್ನು ಹೊಂದಿರುವ ಎನ್‌ಡಿಎಯ ಎರಡನೇ ಅತಿದೊಡ್ಡ ಸದಸ್ಯ ಪಕ್ಷವಾದ ಟಿಡಿಪಿ ಈ ಹುದ್ದೆಯನ್ನು ಅಲಂಕರಿಸಬೇಕು ಎಂದು ಅಭಿಪ್ರಾಯಿಸಿರುವ ಎಎಪಿ ಸಂಸದ, ಬಿಜೆಪಿ ನಾಯಕರು ಸ್ಪೀಕರ್ ಆದರೆ ಅಪಾಯವಿದೆ ಎಂದಿದ್ದಾರೆ.

ಇದನ್ನು ಓದಿದ್ದೀರಾ?  ಮೂವರು ಪ್ರಭಾವಿ ಬಿಜೆಪಿ ನಾಯಕರುಗಳಿಗೆ ಮೋದಿ ಸಂಪುಟದಲ್ಲಿ ಅವಕಾಶವಿಲ್ಲ

Advertisements

“ದೇಶದ ಸಂಸತ್ತಿನ ಇತಿಹಾಸದಲ್ಲಿ ಎಂದಿಗೂ 150ಕ್ಕೂ ಹೆಚ್ಚು ಸಂಸದರನ್ನು ಅಮಾನತುಗೊಳಿಸಿಲ್ಲ. ಆದರೆ ಬಿಜೆಪಿ ಅದನ್ನು ಮಾಡಿದೆ. ಆದ್ದರಿಂದ, ಸ್ಪೀಕರ್ ಬಿಜೆಪಿಯವರಾಗಿದ್ದರೆ, ಸಂವಿಧಾನವನ್ನು ಉಲ್ಲಂಘಿಸುವ ಮೂಲಕ ವಿಧೇಯಕಗಳನ್ನು ಅನಿಯಂತ್ರಿತ ರೀತಿಯಲ್ಲಿ ಅಂಗೀಕರಿಸಲಾಗುತ್ತದೆ” ಎಂದು ಆರೋಪಿಸಿದರು.

“ಮುಂದಿನ ದಿನಗಳಲ್ಲಿ ಟಿಡಿಪಿ, ಜೆಡಿಯು ಮತ್ತು ಇತರ ಸಣ್ಣ ಪಕ್ಷಗಳಲ್ಲಿ ಬಿಜೆಪಿ ಬಿರುಕು ತಂದು ಆ ಪಕ್ಷದ ಮುಖಂಡರು ಬಿಜೆಪಿಗೆ ಬಲವಂತವಾಗಿ ಸೇರಿಕೊಳ್ಳುವಂತೆ ಮಾಡುತ್ತದೆ. ಬಿಜೆಪಿಗೆ ಇಂತಹ ಇತಿಹಾಸವೇ ಇರುವುದು” ಎಂದು ಹೇಳಿದ್ದಾರೆ.

ಸ್ಪೀಕರ್ ಹುದ್ದೆಯನ್ನು ಹೊಸ ಎನ್‌ಡಿಎ ಸರ್ಕಾರದ ‘ಮೊದಲ ಪರೀಕ್ಷೆ’ ಎಂದು ಕರೆದ ಸಿಂಗ್, ಈ ಹುದ್ದೆ ಬಿಜೆಪಿಯಲ್ಲೇ ಉಳಿದರೆ ‘ಧ್ವನಿ ಎತ್ತುವ ಸಂಸದರನ್ನು ಸದನದಿಂದ ಹೊರಹಾಕಲಾಗುತ್ತದೆ’ ಎಂದು ನಾನು ಮತ್ತು ಪಕ್ಷ ನಂಬುತ್ತದೆ ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X