ಎಎಪಿ ಕಚೇರಿ ಖಾಲಿ ಮಾಡಲು ಗಡುವು ದಿನಾಂಕ ವಿಸ್ತರಿಸಿದ ಸುಪ್ರಿಂ ಕೋರ್ಟ್

Date:

Advertisements

ನವದೆಹಲಿಯಲ್ಲಿರುವ ಎಎಪಿ ಮುಖ್ಯ ಕಚೇರಿಯನ್ನು ಖಾಲಿ ಮಾಡುವ ಗಡುವಿನ ದಿನಾಂಕವನ್ನು ಸುಪ್ರೀಂ ಕೋರ್ಟ್ ಆಗಸ್ಟ್‌ 10ರವರೆಗೂ ವಿಸ್ತರಿಸಿದೆ. ಈ ಮೊದಲು ಜೂನ್‌ 15ರೊಳಗೆ ಕಚೇರಿ ತೆರವುಗೊಳಿಸುವ ದಿನಾಂಕವನ್ನು ನಿಗದಿಪಡಿಸಲಾಗಿತ್ತು. ಎಎಪಿ ಹೆಚ್ಚುವರಿ ಸಮಯ ಕೇಳಿ ಮನವಿ ಸಲ್ಲಿಸಿದ ಹಿನ್ನೆಲೆ ಗಡುವನ್ನು ವಿಸ್ತರಿಸಲಾಗಿದೆ.

ರಜಾಕಾಲದ ನ್ಯಾಯಾಧೀಶರಾದ ವಿಕ್ರಮ್‌ ನಾಥ್ ಹಾಗೂ ಸಂದೀಪ್‌ ಮೆಹ್ತಾ ಅವರಿದ್ದ ಪೀಠ ಎಎಪಿ ಪರ ಹಾಜರಾಗಿದ್ದ ಸಲ್ಲಿಕೆಗಳನ್ನು ಗಮನಿಸಿ ಗಡುವಿನ ಅವಧಿಯನ್ನು ಆಗಸ್ಟ್‌ 10ಕ್ಕೆ ವಿಸ್ತರಿಸಿ ಆದೇಶ ನೀಡಿದರು.

“ಪ್ರಕರಣದ ವಾಸ್ತವ ಮತ್ತು ಸಂದರ್ಭಗಳನ್ನು ಪರಿಗಣಿಸಿ ಕೊನೆಯ ಅವಕಾಶಗಳನ್ನು ನೀಡಲಾಗುತ್ತಿದ್ದು, ಆಗಸ್ಟ್‌ 10ಕ್ಕೆ ಗಡುವನ್ನು ವಿಸ್ತರಿಸಲಾಗಿದೆ. ಅರ್ಜಿದಾರರು ಶಾಂತಿಯುತವಾಗಿ ಆಸ್ತಿಯನ್ನು ಹಸ್ತಾಂತರಿಸಬೇಕು” ಎಂದು ಪೀಠವು ಆದೇಶಿಸಿತು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದುಬಾರಿ ಚುನಾವಣೆಗಳು, ಸಾಮಾನ್ಯರ ಸ್ಪರ್ಧೆ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆ

ನಮ್ಮದು ರಾಷ್ಟ್ರೀಯ ಪಕ್ಷವಾದ ಕಾರಣ ನ್ಯಾಯಾಲಯದಿಂದ ಹೆಚ್ಚುವರಿ ಜಾಗವನ್ನು ನೀಡುವುದಕ್ಕೆ ಅನುಮತಿಸಬೇಕು ಎಂದು ಈ ಹಿಂದೆ ಎಎಪಿ ಮಾಡಿದ ಮನವಿಗೆ ಸುಪ್ರೀಂ ಕೋರ್ಟ್ ಸಮ್ಮತ್ತಿಸಿರಲಿಲ್ಲ.

“ಪ್ರತೀ ವರ್ಷವು ನಮ್ಮ ಕಟ್ಟಡದ ವೆಚ್ಚವು ಹೆಚ್ಚಾಗುತ್ತಿದೆ.ಆಗಸ್ಟ್‌ವರೆಗೆ ನ್ಯಾಯಾಲಯ ಪರಿಗಣಿಸಬಹುದು. ಅದಕ್ಕಿಂತ ಹೆಚ್ಚು ಸಾಧ್ಯವಿಲ್ಲ.ಕೇಂದ್ರ ಮತ್ತು ಅವರ ನಡುವೆ ಯಾವುದೇ ರಾಜಕೀಯವಿರಬಹುದು. ಆದರೆ ನಮಗೆ 90 ಕೋರ್ಟ್‌ ಕೊಠಡಿಗಳ ಕೊರತೆಯಿದೆ” ಎಂದು ದೆಹಲಿ ಹೈಕೋರ್ಟ್‌ ಪರ ಹಾಜರಿದ್ದ ನ್ಯಾಯಾಧೀಶರು ಸುಪ್ರೀಂ ಕೋರ್ಟ್‌ಗೆ ಮನವರಿಕೆ ಮಾಡಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X