ವಿಜಯಪುರ | ಪರಿಸರವನ್ನು ನಾವು ಸಂರಕ್ಷಣೆ ಮಾಡಿದರೆ, ಪರಿಸರ ನಮ್ಮನ್ನು ರಕ್ಷಣೆ ಮಾಡುತ್ತದೆ: ಫಾದರ್ ಸುಮನ್ ಬಾಲು

Date:

Advertisements

ನಾವೆಲ್ಲರೂ ಪರಿಸರ ಹಾಗೂ ಪ್ರಕೃತಿಯ ಒಂದು ಭಾಗವಾಗಿದ್ದೇವೆ. ಪರಿಸರ ಸಮತೋಲನದಲ್ಲಿ ಇದ್ದರೆ ಮಾನವ ಸಂಕುಲ ಆರೋಗ್ಯವಾಗಿರುತ್ತದೆ. ಕಾಲಕಾಲಕ್ಕೆ ಮಳೆ ಶುದ್ಧವಾದ ಗಾಳಿ, ನೀರು, ಉತ್ತಮ ಆರೋಗ್ಯ ನಮ್ಮದಾಗಿರುತ್ತದೆ. ಪರಿಸರವನ್ನು ನಾವು ಸಂರಕ್ಷಣೆ ಮಾಡಿದರೆ, ಪರಿಸರ ನಮ್ಮನ್ನು ರಕ್ಷಣೆ ಮಾಡುತ್ತದೆ ಎಂದು ಆನೌಪಚಾರಿಕ ಶಿಕ್ಷಣ ಸಂಸ್ಥೆ ಸಹ ನಿರ್ದೇಶಕ ಫಾದರ್ ಸುಮನ್ ಬಾಲು ತಿಳಿಸಿದರು.

ವಿಜಯಪುರದ ಅನೌಪಚಾರಿಕ ಶಿಕ್ಷಣ ಸಂಸ್ಥೆ ಹಾಗೂ ಸಂತ ಜೋಸೆಫ್ ಸಮುದಾಯ ಆರೋಗ್ಯ ಮತ್ತು ಬೆಂಬಲ ಕೇಂದ್ರದಲ್ಲಿ ಆಯೋಜಿಸಿದ್ದ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

“ಮಾನವನ ವೈಭವೀಕರಣ ಜೀವನ ಹಾಗೂ ದುರಾಸೆಗೆ ಕಾಡು ನಾಶ ಮಾಡುತ್ತಿದ್ದೇವೆ. ಅದರ ಪರಿಣಾಮವಾಗಿ ಕಳೆದ ಎರಡು ವರ್ಷಗಳ ಹಿಂದೆ ಕೋವಿಡ್ ಸಮಯದಲ್ಲಿ ಪ್ರಕೃತಿಯಲ್ಲಿ ಉಚಿತವಾಗಿ ದೊರೆಯಬೇಕಾಗಿದ್ದ ಆಮ್ಲಜನಕವು ನಾವು ಖರೀದಿ ಮಾಡಿ ಪಡೆಯಬೇಕಾಯಿತು” ಎಂದರು.

Advertisements

“ಪರಿಸರ ವಿನಾಶದಿಂದ ಪ್ರಕೃತಿಯಲ್ಲಿ ಪ್ರತಿ ವರ್ಷ ಅತಿವೃಷ್ಟಿ, ಅನಾವೃಷ್ಟಿ ಎದುರಿಸಬೇಕಾಗಿದೆ. ಆದ್ದರಿಂದ ನಾವು ಪರಿಸರ ಸಂರಕ್ಷಣೆ ಮಾಡಬೇಕು. ಪ್ರತಿ ಮನೆಯ ಸುತ್ತಮುತ್ತ ಕನಿಷ್ಟ 5 ರಿಂದ 10 ಮರಗಳನ್ನು ಬೆಳೆಸಬೇಕು. ಅವುಗಳನ್ನು ಕಾಳಜಿಯಿಂದ ನೋಡಿಕೊಳ್ಳಬೇಕು. ನಮ್ಮ ಮನೆಯಲ್ಲಿ ಯಾವುದೇ ಶುಭಕಾರ್ಯದಲ್ಲಿ ಸಸಿ ನೆಡುವ, ಸಸಿ ವಿತರಿಸುವ ಕಾರ್ಯಕ್ರಮಗಳು ನಡೆಯುವ ರೂಢಿಯಾಗಬೇಕು” ಎಂದು ಸಲಹೆ ನೀಡಿದರು.

“ನಮ್ಮಿಂದ ಶಾಲೆ ಆವರಣ, ದೇವಸ್ಥಾನ, ಮಸೀದಿ ಸುತ್ತಮುತ್ತ ಗಿಡ ನೆಡಬೇಕು. ಇದರಿಂದ ನಾವು ಬಿಸಿಲಿನ ತಾಪಮಾನದಿಂದ ಪಾರಾಗುತ್ತೇವೆ” ಎಂದು ತಿಳಿಸಿದರು.

ಅನೌಪಚಾರಿಕ ಶಿಕ್ಷಣ ಸಂಸ್ಥೆ ನಿರ್ದೇಶಕ ಫಾದರ್ ಟಿಯೊಲ್ ಮಚಾದೊ ಅಧ್ಯಕ್ಷತೆ ಭಾಷಣದಲ್ಲಿ ಮಾತನಾಡಿ, “ಗಿಡ ಮರ ಬೆಳೆಸುವುದರ ಜತೆಗೆ ಪ್ಲಾಸ್ಟಿಕ್ ಬಳಕೆ ನಿಷೇಧ ಮಾಡಬೇಕು. ಪ್ಲಾಸ್ಟಿಕ್ ಚೀಲವನ್ನು ಬಳಕೆ ನಂತರ ಬಿಸಾಡುವ ಬದಲು ಮರುಬಳಕೆ ಮಾಡಬೇಕು. ಪ್ಲಾಸ್ಟಿಕ್ ಬಳಕೆ ಮಾಡಿ ಕಸದ ಬುಟ್ಟಿಗೆ ಹಾಗೂ ಕಸದ ತೊಟ್ಟಿಗೆ ಹಾಕುವುದರಿಂದ ಅವುಗಳನ್ನು ಪ್ರಾಣಿಗಳು ಸೇವಿಸುವುದರಿಂದ ಅವುಗಳ ಜೀವಕ್ಕೆ ಕುತ್ತು ಬರುವುದು. ಆದ್ದರಿಂದ ಇಂದು ನಾವು ಪ್ಲಾಸ್ಟಿಕ್ ಮುಕ್ತ ಜಿಲ್ಲೆ ಮಾಡೋಣ” ಎಂದು ಸಂಕಲ್ಪ ಮಾಡಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಸಹಾಯಕ ಪ್ರಾಧ್ಯಾಪಕ ಅಭ್ಯರ್ಥಿಗಳ ನೇಮಕಾತಿ ವಿಳಂಬ; ಆದೇಶಪ್ರತಿ, ಗೆಜೆಟ್‌ಗಾಗಿ ಅಭ್ಯರ್ಥಿಗಳ ಪಟ್ಟು

ಸಂತ ಜೋಸೆಪ್ ಸಮುದಾಯ ಆರೋಗ್ಯ ಮತ್ತು ಬೆಂಬಲ ಕೇಂದ್ರದ ಮುಖ್ಯಸ್ಥೆ ಸಿಸ್ಟರ್ ಶಾಂತಿ ಮೇರಿ, ಸಿಸ್ಟರ್ ಅಮಲಾ ರಾಣಿ, ರುಕ್ಮಿಣಿ ಕುಂಬಾರ, ಸುನೀತಾ ಮೋರೆ ಸೇರಿದಂತೆ 100ಕ್ಕೂ ಹೆಚ್ಚು ಸದಸ್ಯರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X