ತುಮಕೂರು ಜಿಲ್ಲಾಡಳಿತ ನಿರ್ಲಕ್ಷ್ಯ; ರಾಜಕಾಲುವೆ ಹೂಳು ತೆಗೆಯಲು ಮುಂದಾದ ರೈತ

Date:

Advertisements

ತುಮಕೂರು ಜಿಲ್ಲಾಡಳಿತದ ನಿರ್ಲಕ್ಷ್ಯದಿಂದಾಗಿ 70ರ ಇಳಿವಯಸ್ಸಿನಲ್ಲಿ ಗುದ್ದಲಿ ಹಿಡಿದು ರೈತರೊಬ್ಬರು ರಾಜಕಾಲುವೆ ಹೂಳು ತೆಗೆದಿದ್ದು, ಇವರ ಕಾರ್ಯಕ್ಕೆ ಮೆಚ್ಚುಗೆಯ ಮಹಾಪೂರವೇ ಹರಿದಿದೆ.

ತುಮಕೂರು ನಗರದ ಹೊರವಲಯದ ಗಣೇಶ ನಗರದ ರೈತ ಲಕ್ಷ್ಮಯ್ಯ ಗುದ್ದಲಿ ಹಿಡಿದು ಹೂಳು ತೆಗೆಯುವ ಕಾರ್ಯ ಮಾಡಿದ್ದಾರೆ. ಕಳೆದ ಮೂರು ವರ್ಷದಿಂದ ಜಿಲ್ಲಾಡಳಿತ ರಾಜಕಾಲುವೆ ಹೂಳು ತೆಗೆದಿರಲಿಲ್ಲ. ಇದರಿಂದ ಭಾರೀ ಮಳೆಗೆ ರಾಜಕಾಲುವೆ ತುಂಬಿ ಬಡಾವಣೆಗೆ ನೀರು ನುಗ್ಗಿತ್ತು. ಇದರಿಂದ ಬೇಸತ್ತು ಸ್ವತಃ ತಾನೇ ಗುದ್ದಲಿ ಹಿಡಿದು ತಮ್ಮ ತೋಟದ ಪಕ್ಕದಲ್ಲಿ ಹಾದು ಹೋಗಿರುವ ರಾಜಕಾಲುವೆ ಸ್ವಚ್ಛತೆ ಮಾಡಿದ್ದಾರೆ. ಕಳೆದ ಎರಡು ದಿನದಿಂದ ಏಕಾಂಗಿಯಾಗಿ ರಾಜಕಾಲುವೆ ಅಗೆಯುತ್ತಿದ್ದಾರೆ. ಮಳೆ ನೀರು ಸರಾಗವಾಗಿ ಹರಿಯಲು ಶ್ರಮಿಸಿದ್ದಾರೆ.

“ಮಳೆ ಬಂದರೆ ತೋಟಕ್ಕೆ, ಮನೆಗಳಿಗೆ ನೀರು ನುಗ್ಗುತ್ತಿದೆ. ಅಧಿಕಾರಿಗಳಿಗೆ ತಿಳಿಸಿದರೆ ಯಾರೂ ಸ್ಪಂದಿಸುತ್ತಿಲ್ಲ. ರಾಜಕಾಲುವೆ ಹೂಳು ತೆಗೆದು ಮೂರು ವರ್ಷವಾಗಿದೆ. ಪ್ರತಿದಿನ ಎಷ್ಟು ಸಾಧ್ಯವೋ ಅಷ್ಟು ಕೆಲಸ ಮಾಡುತ್ತಿದ್ದೇನೆ. ನಮ್ಮ ಕೆಲಸವನ್ನು ನಾವೇ ಮಾಡಿಕೊಳ್ಳಬೇಕು” ಎನ್ನುತ್ತಾರೆ ರೈತ ಲಕ್ಷ್ಮಯ್ಯ.

Advertisements

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಸಹಾಯಕ ಪ್ರಾಧ್ಯಾಪಕ ಅಭ್ಯರ್ಥಿಗಳ ನೇಮಕಾತಿ ವಿಳಂಬ; ಆದೇಶಪ್ರತಿ, ಗೆಜೆಟ್‌ಗಾಗಿ ಅಭ್ಯರ್ಥಿಗಳ ಪಟ್ಟು

“ಜಿಲ್ಲಾಡಳಿತ ಇನ್ನಾದರೂ ಎಚ್ಚೆತ್ತುಕೊಂಡು ರಾಜಕಾಲುವೆ ಹೂಳು ತೆಗೆಸಲು ಮುಂದಾಗಬೇಕಿದೆ” ಎಂಬುದು ಸಾರ್ವಜನಿಕರ ಅಭಿಪ್ರಾಯವಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಅಧಿಕ ಮಳೆಯಿಂದ ಹಾನಿಗೀಡಾದ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಿ : ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್

 "ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಿಂದ ಸಾಕಷ್ಟು ಮಳೆಯಾಗುತ್ತಿದ್ದು, ಮಳೆಯಿಂದ ಹಾನಿಗೊಳಗಾಗುವ ಪ್ರದೇಶಗಳ ಸಾರ್ವಜನಿಕರ...

ಬೀದರ್‌ | ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಸಚಿವದ್ವಯರ ಭೇಟಿ; ಪರಿಶೀಲನೆ

ಕಮಲನಗರ ಹಾಗೂ ಔರಾದ್‌ ತಾಲೂಕಿನಲ್ಲಿ ಅಧಿಕ ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಉಸ್ತುವಾರಿ...

ಹಾವೇರಿ | ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಅರ್ಜಿ ಆಹ್ವಾನ

"ಪರಿಶಿಷ್ಟ ವರ್ಗದ ಜನಾಂಗದ ಏಳಿಗಾಗಿ ಶ್ರಮಿಸಿದ ಅರ್ಹ ವ್ಯಕ್ತಿಗಳಿಗೆ ಶ್ರೀ ಮಹರ್ಷಿ...

ಉಡುಪಿ | ಶಾಸಕ ಯಶ್ಪಾಲ್ ಸುವರ್ಣರವರ ಮೇಲೆ ಕಠಿಣ ಸಾಂವಿಧಾನಿಕ ಕ್ರಮ ಜರುಗಿಸಿ – ಕೆ ಫಣಿರಾಜ್

ತಮ್ಮ ಶಾಸಕ ಸ್ಥಾನದ ಸಂವಿಧಾನಿಕ ಮರ್ಯಾದೆಯನ್ನು ಮೀರಿ ವರ್ತಿಸಿರುವ ಉಡುಪಿಯ ಶಾಸಕ...

Download Eedina App Android / iOS

X