‘ಚುನಾವಣೆ ಯುದ್ಧವಲ್ಲ ಸ್ಪರ್ಧೆ’: ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್

Date:

Advertisements

ಚುನಾವಣೆ ಯುದ್ಧವಲ್ಲ ಸ್ಪರ್ಧೆ. ಚುನಾವಣೆಗಳು ಮುಗಿದಿವೆ. ಈಗ ರಾಷ್ಟ್ರ ನಿರ್ಮಾಣದತ್ತ ಗಮನ ಹರಿಸಬೇಕು ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.

ಮಧ್ಯಪ್ರದೇಶದ ನಾಗ್ಪುರದಲ್ಲಿ ಆರ್‌ಎಸ್‌ಎಸ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ಚುನಾವಣೆಯು ಒಮ್ಮತ ಮೂಡಿಸುವ ಪ್ರಕ್ರಿಯೆಯಾಗಿದೆ. ಸಂಸತ್ತಿಗೆ ಎರಡು ಬದಿಗಳಿವೆ. ಆದ್ದರಿಂದ ಯಾವುದೇ ಪ್ರಶ್ನೆಯ ಎರಡೂ ಅಂಶಗಳನ್ನು ಪರಿಗಣಿಸಬಹುದು. ಪ್ರತಿಯೊಂದು ಸಮಸ್ಯೆಯು ಎರಡು ಆಯಾಮಗಳನ್ನು ಹೊಂದಿರುತ್ತದೆ. ಒಂದು ಪಕ್ಷವು ಒಂದು ಆಯಾಮವನ್ನು ತಿಳಿಸಿದರೆ, ವಿರೋಧ ಪಕ್ಷವು ಇನ್ನೊಂದು ಆಯಾಮವನ್ನು ತಿಳಿಸಬೇಕು. ಆದ್ದರಿಂದ ನಾವು ಸರಿಯಾದ ನಿರ್ಧಾರವನ್ನು ತೆಗೆದುಕೊಳ್ಳಲು ಸಾಧ್ಯವಾಗುತ್ತದೆ” ಎಂದರು.

“ಸಂಘವು ಪ್ರತಿ ಚುನಾವಣೆಯಲ್ಲಿ ಸಾರ್ವಜನಿಕ ಅಭಿಪ್ರಾಯವನ್ನು ಪರಿಷ್ಕರಿಸಲು ಕೆಲಸ ಮಾಡುತ್ತದೆ. ಈ ಬಾರಿಯೂ ಆ ಕೆಲಸವನ್ನು ಮಾಡಿದೆ. ಆದರೆ, ಫಲಿತಾಂಶದ ವಿಶ್ಲೇಷಣೆಯಲ್ಲಿ ಸಿಕ್ಕಿಹಾಕಿಕೊಳ್ಳುವುದಿಲ್ಲ. ವಿವಿಧ ವಿಷಯಗಳಲ್ಲಿ ಜಮ್ಮತವನ್ನು ರೂಪಿಸಲು ಜನರು ಸಂಸತ್ತಿಗೆ ಆಯ್ಕೆಯಾಗುತ್ತಾರೆ? ಚುನಾಔಣೆಯು ಯುದ್ಧವಲ್ಲ ಸ್ಪರ್ಧೆ” ಎಂದಿದ್ದಾರೆ.

Advertisements

“ಚುನಾವಣಾ ಪ್ರಚಾರದಲ್ಲಿ ಬಂದ ವಿಷಯಗಳು ಎರಡೂ ಬದಿಯಿಂದ ತುಚ್ಚಮಟ್ಟದಲ್ಲಿತ್ತು. ಪರಸ್ಪರರ ವಿರುದ್ಧದ ದಾಳಿಯು ವಿಭಜನೆಗೆ ಕಾರಣವಾಗುವ ತಂತ್ರಗಳ ಪ್ರಭಾವವನ್ನು ಸಂಪೂರ್ಣ ನಿರ್ಲಕ್ಷಿಸಿತ್ತು. ಸಾಮಾಜಿಕ ಮತ್ತು ಮಾನಸಿಕವಾಗಿ ಪ್ರಭಾವಿಸುವ ಅಂಶಗಳನ್ನು ಬಳಸಿಕೊಂಡು ಆರ್‌ಎಸ್ಎಸ್‌ನಂತಹ ಸಂಸ್ಥೆಗಳನ್ನು ಅಗತ್ಯವಾಗಿ ಚರ್ಚೆಗೆ ತರಲಾಯಿತು. ಸುಳ್ಳುಗಳನ್ನು ಹರಡಲಾಯಿತು” ಎಂದು ದೂರಿದ್ದಾರೆ.

“ಮಣಿಪುರದಲ್ಲಿ ಹಿಂಸಾಚಾರವನ್ನು ಆದ್ಯತೆಯ ಆಧಾರದ ಮೇಲೆ ಕೊನೆಗೊಳಿಸಬೇಕಾಗಿದೆ. ಮಣಿಪುರವು ಒಂದು ವರ್ಷದಿಂದ ಶಾಂತಿಗಾಗಿ ಕಾಯುತ್ತಿದೆ. ಹಿಂಸಾಚಾರವನ್ನು ನಿಲ್ಲಿಸಬೇಕು” ಎಂದಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X