ರಾಯಚೂರು | ವಾಲ್ಮೀಕಿ ಆಭಿವೃದ್ದಿ ನಿಗಮ ಅನುದಾನ ದುರ್ಬಳಕೆ ಪ್ರಕರಣ; ಸಿಬಿಐಗೆ ವಹಿಸಲು ಆಗ್ರಹ

Date:

Advertisements

ವಾಲ್ಮೀಕಿ ಅಭಿವೃದ್ದಿ ನಿಗಮದಲ್ಲಿ ನಡೆದಿದೆ ಎನ್ನಲಾಗಿರುವ 187 ಕೋಟಿ ರೂ. ಅಕ್ರಮ ವ್ಯವಹಾರ ಪ್ರಕರಣವನ್ನು ಸಿಬಿಐ ತನಿಖೆಗೆ ಒಳಪಡಿಸಬೇಕು. ಅಕ್ರಮದಲ್ಲಿ ಭಾಗಿಯಾಗಿರುವ ಸಚಿವರು, ನಿಗಮದ ಅಧ್ಯಕ್ಷರೂ ಸೇರಿದಂತೆ ಅಧಿಕಾರಿಗಳ ವಿರುದ್ದ ಸಮಗ್ರ ತನಿಖೆ ನಡೆಸಬೇಕು ಎಮದು ಹೈದ್ರಾಬಾದ್ ಕರ್ನಾಟಕ ಪ್ರದೇಶ ವಾಲ್ಮೀಕಿ ನಾಯಕ ಸಂಘದ ಮುಖಂಡ ಎನ್ ರಘುವೀರ ನಾಯಕ ಆಗ್ರಹಿಸಿದರು.

ರಾಯಚೂರಿನಲ್ಲಿ ಪ್ರತಿಕಾಗೋಷ್ಟಿ ನಡೆಸಿ ಅವರು ಮಾತನಾಡಿದರು. “ವಾಲ್ಮೀಕಿ ನಿಗಮದಲ್ಲಿ ನಿರಂತರ ಅವ್ಯವಹಾರಗಳು ನಡೆಯುತ್ತಿದು ಅಪಖ್ಯಾತಿಗೆ ಗುರಿಯಾಗಿದೆ. ಪ್ರತಿ ಆರ್ಥಿಕ ವರ್ಷಕ್ಕೆ ಬಿಡುಗಡೆಯಾದ ಅನುದಾನ ಪೂರ್ಣ ಪ್ರಮಾಣದಲ್ಲಿ ಸದ್ಭಳಕೆ ಮಾಡಿಕೊಳ್ಳದೇ ನಿಗಮದ ಬ್ಯಾಂಕಿನಲ್ಲಿಟ್ಟು ಅವ್ಯವಹಾರ ಮಾಡಲಾಗಿದೆ” ಎಂದು ದೂರಿದ್ದಾರೆ.

“ಸರ್ಕಾರ ತಾನೇ ರಚಿಸಿರುವ ಎಸ್‌ಐಟಿಯಿಂದ ಸಚಿವರು, ಶಾಸಕರ ವಿರುದ್ದ ಕ್ರಮ ಕೈಗೊಳ್ಳಲು ಆಗುವದಿಲ್ಲ. ಇಷ್ಡೊಂದು ದೊಡ್ಡ ಮಟ್ಟ ಅನುದಾನ ಬೇರೆ ಖಾತೆಗಳಿಗೆ ವರ್ಗಾಯಿಸಿರುವ ಕುರಿತು ಮುಖ್ಯಮಂತ್ರಿಗಳು, ನಿಗಮದ ಅಧ್ಯಕ್ಷರಿಗೆ ಗೊತ್ತಿಲ್ಲದೇ ನಡೆಯಲು ಸಾಧ್ಯವಿಲ್ಲ. ಎಸ್‌ಟಿ ಸಮುದಾಯ ಸಚಿವರು, ಶಾಸಕರುಗಳೇ ಅಕ್ರಮದ ಆರೋಪ ಎದುರಿಸುತ್ತಿರುವದು ನೋವಿನ ಸಂಗತಿ. ಸಮೂದಾಯ ಅಭಿವೃದ್ದಿಗೆ ಬದ್ದತೆ ತೋರಬೇಕಿದ್ದ ಸಮೂದಾಯ ಶಾಸಕರುಗಳೇ ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗುತ್ತಿದ್ದು, ಅದು ಸಮುದಾಯಕ್ಕೆ ಮಾಡಿದ ಅಪಮಾನ” ಎಂದಿದ್ದಾರೆ.

Advertisements

“ಸಿಬಿಐ ತನಿಖೆಗೆ ಒತ್ತಾಯಿಸಿ ರಾಜ್ಯ ಮಟ್ಟದಲ್ಲಿ ಹೋರಾಟ ರೂಪಿಸುವ ಕುರಿತಂತೆ ಸಮೂದಾಯ ಸ್ವಾಮೀಜಿಗಳು ಸೇರಿದಂತೆ ಮುಖಂಡರೊಂದಿಗೆ ಚರ್ಚಿಸಲಾಗುತ್ತದೆ. ನಂತರ ಹೋರಾಟ ರೂಪಿಸಲಾಗುತ್ತದೆ. ಸರ್ಕಾರವೇ ಸಿಬಿಐ ತನಿಖೆಗೆ ವಹಿಸುವ ಮೂಲಕ ಸಮೂದಾಯ ಅಭಿವೃದ್ದಿಗೆ ಬಳಕೆಯಾಗಬೇಕಿದ್ದ ಹಣವನ್ನು ದುರ್ಬಳಕೆ ಮಾಡಲು ಕಾರಣವಾಗಿರುವ ಜನಪ್ರತಿನಿಧಿಗಳು, ಆಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ರಮೇಶ ನಾಯಕ, ರಾಮಕೃಷ್ಣ ನಾಯಕ ಉಪಸ್ಥಿತರಿದ್ದರು.

ವರದಿ : ಹಫಿಜುಲ್ಲ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X