ಲಲಿತ್‌ ಮೋದಿ ನ್ಯಾಯಾಂಗ ನಿಂದನೆ | ಬೇಷರತ್‌ ಕ್ಷಮೆ ನಂತರ ವಿಚಾರಣಾ ಪ್ರಕ್ರಿಯೆ ತೆರವುಗೊಳಿಸಿದ ‘ಸುಪ್ರೀಂ’

Date:

Advertisements
  • ಲಲಿತ್‌ ಮೋದಿ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿದ್ದ ಹಿರಿಯ ವಕೀಲ ಸಿ.ಯು ಸಿಂಗ್
  • ನ್ಯಾಯಮೂರ್ತಿಗಳಾದ ಎಂ.ಆರ್‌.ಶಾ ಮತ್ತು ಸಿ.ಟಿ.ರವಿಕುಮಾರ್‌ ಅವರ ದ್ವಿಸದಸ್ಯ ಪೀಠ ವಿಚಾರಣೆ

ಲಲಿತ್‌ ಮೋದಿ ಅವರ ವಿರುದ್ಧದ ನ್ಯಾಯಾಂಗ ನಿಂದನೆ ವಿಚಾರಣೆ ಪ್ರಕ್ರಿಯೆಗಳನ್ನು ಸುಪ್ರೀಂ ಕೋರ್ಟ್‌ ಸೋಮವಾರ (ಏಪ್ರಿಲ್‌ 24) ಮುಕ್ತಾಯಗೊಳಿಸಿದೆ.

ಸಾಮಾಜಿಕ ಮಾಧ್ಯಮಗಳಲ್ಲಿ ನ್ಯಾಯಾಂಗ ನಿಂದನೆ ಪೋಸ್ಟ್‌ಗಳನ್ನು ಮಾಡಿದ್ದ ಮಾಜಿ ಐಪಿಎಲ್‌ ಆಯುಕ್ತ ಲಲಿತ್‌ ಅವರು ಬೇಷರತ್‌ ಕ್ಷಮೆಯಾಚಿಸಿದ್ದರಿಂದ ಅವರ ವಿರುದ್ಧದ ಆರೋಪಗಳನ್ನು ಸುಪ್ರೀಂ ಕೋರ್ಟ್‌ ತೆರವುಗೊಳಿಸಿದೆ.

ನ್ಯಾಯಮೂರ್ತಿಗಳಾದ ಎಂ.ಆರ್‌.ಶಾ ಮತ್ತು ಸಿ.ಟಿ.ರವಿಕುಮಾರ್‌ ಅವರ ದ್ವಿಸದಸ್ಯ ಪೀಠ ಲಲಿತ್‌ ಮೋದಿ ಅವರು ನ್ಯಾಯಾಂಗ ನಿಂದನೆ ಆರೋಪದ ಅರ್ಜಿ ವಿಚಾರಣೆ ನಡೆಸಿತು.

Advertisements

ಆರೋಪಕ್ಕೆ ಸಂಬಂಧಿಸಿ ಲಲಿತ್‌ ಅವರು ಸಲ್ಲಿಸಿದ ಬೇಷರತ್‌ ಕ್ಷಮೆಯ ಪ್ರಮಾಣಪತ್ರವನ್ನು ಪೀಠ ಪರಿಗಣಿಸಿತು. ಲಲಿತ್‌ ಮೋದಿ ಅವರು ತಾವು ಇನ್ನೆಂದೂ ನ್ಯಾಯಾಂಗ ವಿರುದ್ಧ ಹೇಳಿಕೆ ನೀಡುವುದಿಲ್ಲ ಎಂದು ಹೇಳಿದ್ದಾರೆ.

“ಭವಿಷ್ಯದಲ್ಲಿ ನಾನು ಯಾವುದೇ ರೀತಿಯಲ್ಲಿ ಭಾರತೀಯ ನ್ಯಾಯಾಂಗ ಅಥವಾ ನ್ಯಾಯಾಲಯಗಳ ಘನತೆಗೆ ಧಕ್ಕೆ ತರುವಂತಹ ಯಾವುದೇ ಕಾರ್ಯ ಮಾಡುವುದಿಲ್ಲ” ಎಂದು ಉಲ್ಲೇಖಿಸಿದ್ದಾರೆ.

“ನಾವು ಬೇಷರತ್‌ ಕ್ಷಮೆಯನ್ನು ಅಂಗೀಕರಿಸಿದ್ದೇವೆ. ಭವಿಷ್ಯದಲ್ಲಿ ಲಲಿತ್‌ ಅವರು ಭಾರತೀಯ ನ್ಯಾಯಾಂಗ ವ್ಯವಸ್ಥೆಯ ಘನತೆಗೆ ಕಳಂಕ ತರುವಂತಹ ಯಾವುದೇ ಪ್ರಯತ್ನವನ್ನು ಮಾಡಿದರೆ ಅದನ್ನು ಗಂಭೀರವಾಗಿ ಪರಿಗಣಿಸಲಾಗುತ್ತದೆ” ಎಂದು ಪೀಠ ಎಚ್ಚರಿಕೆ ನೀಡಿದೆ.

“ವಿಶಾಲ ಹೃದಯದಿಂದ ನ್ಯಾಯಾಲಯ ಈ ಕ್ಷಮೆಯನ್ನು ಅಂಗೀಕರಿಸಿದೆ. ಕ್ಷಮಾಪಣೆಯನ್ನು ಮನದಾಳದಿಂದ ಬೇಷರತ್ತಾಗಿ ಕೇಳಿದಾಗ ಅದನ್ನು ನ್ಯಾಯಾಲಯ ಯಾವಾಗಲೂ ಪರಿಗಣಿಸುತ್ತದೆ. ಅದಕ್ಕಾಗಿ ಕ್ಷಮೆಯನ್ನು ಅಂಗೀಕರಿಸಿ ವಿಚಾರಣಾ ಪ್ರಕ್ರಿಯೆಗಳನ್ನು ಮುಕ್ತಾಯಗೊಳಿಸುತ್ತದೆ” ಎಂದು ಪೀಠ ಹೇಳಿದೆ.

“ನ್ಯಾಯಾಂಗವನ್ನು ಪ್ರತಿಯೊಬ್ಬರೂ ಗೌರವಿಸಬೇಕು ಎಂಬುದು ನಮ್ಮ ಏಕೈಕ ಕಾಳಜಿಯಾಗಿದೆ” ಎಂದು ಪೀಠ ಹೇಳಿತು.

ಲಲಿತ್‌ ಅವರು ನ್ಯಾಯಾಂಗದ ವಿರುದ್ಧ ನೀಡಿದ ಹೇಳಿಕೆಯನ್ನು ಏಪ್ರಿಲ್‌ 13 ರಂದು ಸುಪ್ರೀಂ ಕೋರ್ಟ್ ಬಲವಾಗಿ ಖಂಡಿಸಿ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿತ್ತು. ಈ ಸಂಬಂಧ ಲಲಿತ್‌ ಅವರು ಸಾಮಾಜಿಕ ಮಾಧ್ಯಮ ವೇದಿಕೆಗಳು ಮತ್ತು ರಾಷ್ಟ್ರೀಯ ಪತ್ರಿಕೆಗಳಲ್ಲಿ ಬೇಷರತ್‌ ಕ್ಷಮೆ ಕೋರುವಂತೆ ಸೂಚಿಸಿತ್ತು. ಲಲಿತ್‌ ಮೋದಿ ಅವರು ನ್ಯಾಯಾಂಗ ಮತ್ತು ಕಾನೂನಿಗಿಂತ ದೊಡ್ಡವರಲ್ಲ. ಮತ್ತೆ ಇಂತಹ ಪ್ರಯತ್ನ ಮಾಡಿದರೆ ಅದನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಪೀಠ ಉಲ್ಲೇಖಿಸಿತ್ತು.

ಈ ಸುದ್ದಿ ಓದಿದ್ದೀರಾ? ದೆಹಲಿ | ಅಪಾರ್ಟ್‌ಮೆಂಟ್‌ಗೆ ನುಗ್ಗಿ ದುಷ್ಕರ್ಮಿಗಳ ಗುಂಡಿನ ದಾಳಿ

ನ್ಯಾಯಾಂಗ ನಿಂದನೆ ಹೇಳಿಕೆ ಸಂಬಂಧ ಬೇಷರತ್‌ ಕ್ಷಮೆ ಹಾಗೂ ಭವಿಷ್ಯದಲ್ಲಿ ಇಂತಹ ಪ್ರಯತ್ನ ಮಾಡುವುದಿಲ್ಲ ಎಂದು ಪ್ರಮಾಣಪತ್ರ ಸಲ್ಲಿಸುವಂತೆ ಸುಪ್ರೀಂ ಕೋರ್ಟ್‌ ಹೇಳಿತ್ತು.

ಲಲಿತ್‌ ಅವರು ಮಾರ್ಚ್‌ 30 ರಂದು ಮಾಡಿದ್ದ ಟ್ವೀಟ್‌ನಲ್ಲಿ ನ್ಯಾಯಾಂಗ ನಿಂದನೆಯ ಹೇಳಿಕೆಗಳಿದ್ದು, ಅವು ನ್ಯಾಯಾಂಗ ಮತ್ತು ನ್ಯಾಯಾಧೀಶರ ಘನತೆಗೆ ಕುಂದು ಉಂಟುಮಾಡುತ್ತವೆ ಎಂದು ಹಿರಿಯ ವಕೀಲ ಸಿ.ಯು ಸಿಂಗ್‌ ಅವರು ಲಲಿತ್‌ ಅವರ ವಿರುದ್ಧ ನ್ಯಾಯಾಂಗ ನಿಂದನೆ ಮೊಕದ್ದಮೆ ದಾಖಲಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X