ಶೆಟ್ಟರ್‌ ಬದಲಾಯಿಸಿದ್ದು ಸಂತೋಷ್‌ ಅಲ್ಲ, ಅದು ಮೋದಿ, ಅಮಿತ್ ಶಾ ತೀರ್ಮಾನ: ಪ್ರಲ್ಹಾದ್‌ ಜೋಶಿ

Date:

Advertisements

ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಹೊಸಬರಿಗೆ ಟಿಕೆಟ್‌ ನೀಡುವ ಸಲುವಾಗಿಯೇ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರು ಜಗದೀಶ್‌ ಶೆಟ್ಟರ್‌ ಅವರಿಗೆ ಟಿಕೆಟ್‌ ನಿರಾಕರಿಸಿದ್ದು ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದರು.

ಹುಬ್ಬಳ್ಳಿಯಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ತಮಗೆ ಟಿಕೆಟ್ ತಪ್ಪಿಸಿರುವ ವಿಷಯ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಗಮನಕ್ಕಿಲ್ಲ ಎಂದು ಪಕ್ಷ ತೊರೆದು ಕಾಂಗ್ರೆಸ್‌ ಸೇರಿರುವ ಜಗದೀಶ ಶೆಟ್ಟರ್ ಅವರ ಹೇಳಿಕೆಗೆ ಜೋಶಿ ತಿರುಗೇಟು ನೀಡಿದರು.

“ಮೋದಿ, ಅಮಿತ್ ಶಾ ವಿರುದ್ಧ ಆಪಾದನೆ ಮಾಡಿದರೆ ಜನ ತಮಗೆ ಮತ ಹಾಕಲ್ಲ ಎಂಬುದು ಅವರಿಗೂ ಗೊತ್ತಿದೆ. ಈ ಕಾರಣಕ್ಕೆ ಅವರು ಮೋದಿ, ಅಮಿತ್ ಶಾ ಅವರಿಗೆ ಈ ವಿಷಯ ಗೊತ್ತಿಲ್ಲ ಎನ್ನುವ ಮೂಲಕ ತಮ್ಮ ರಾಜಕೀಯ ಸ್ಥಾನದ ರಕ್ಷಣೆ ಪಡೆಯಲು ಪ್ರಯತ್ನಿಸುತ್ತಿದ್ದಾರೆ” ಎಂದು ಟೀಕಿಸಿದರು.

Advertisements

“ಖುದ್ದು ಅಮಿತ್ ಶಾ ಅವರೇ ಶೆಟ್ಟರ್ ಅವರಿಗೆ ಕಾಲ್‌ ಮಾಡಿ, ರಾಜ್ಯಸಭಾ ಸದಸ್ಯ ಸ್ಥಾನ ಅಥವಾ ನೀವು ಕೇಳುವ ಬೇರೆ ಯಾವುದಾದರೂ ಸ್ಥಾನ ನೀಡುತ್ತೇವೆ. ಚುನಾವಣೆಗೆ ಸ್ಪರ್ಧಿಸಲು ಹೊಸಬರಿಗೆ ಅವಕಾಶ ಮಾಡಿಕೊಡಿ. ನೀವು ಹೇಳುವ ಕಾರ್ಯಕರ್ತನಿಗೇ ಟಿಕೆಟ್ ನೀಡುತ್ತೇವೆ ಎಂದು ಮನವಿ ಮಾಡಿದ್ದರು. ಆದರೆ, ಇದ್ಯಾವುದನ್ನು ಲೆಕ್ಕಿಸದೇ ಶೆಟ್ಟರ್‌ ಕಾಂಗ್ರೆಸ್‌ ಸೇರಿದ್ದಾರೆ” ಎಂದು ತಿಳಿಸಿದರು.

“ಬಿ ಎಲ್ ಸಂತೋಷ ಅವರು ನಮ್ಮ ಪಕ್ಷದ ಸಂಘಟನಾ ಕಾರ್ಯದರ್ಶಿ. ಪಕ್ಷ ಕಟ್ಟುವ ಕೆಲಸದಲ್ಲಿ ಅವರು ನಿರತರಾಗಿದ್ದಾರೆ. ಅವರ ಹೆಸರನ್ನು ಉದ್ದೇಶಪೂರ್ವಕವಾಗಿ ಶೆಟ್ಟರ್ ಎಳೆದು ತಂದಿದ್ದಾರೆ. ಶೆಟ್ಟರ್ ಅವರಿಗೆ ಟಿಕೆಟ್‌ ತಪ್ಪಲು ಸಂತೋಷ ಕಾರಣರಲ್ಲ. ಶೆಟ್ಟರ್ ಒಬ್ಬರೇ ಈ ರೀತಿ ಸಂತೋಷ್‌ ಹೆಸರು ಹೇಳುತ್ತಿರುವುದು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X