ತುಮಕೂರಿನ ವಸಂತನರಸಾಪುರದ ಬಳಿ ಇಂಟಿಗ್ರೇಟೆಡ್ ಟೌನ್‌ಶಿಪ್‌ ನಿರ್ಮಾಣ; ಯೋಜನೆ ಕೈಗೊಳ್ಳುವಂತೆ ಸಚಿವ ಬೈರತಿ ಸುರೇಶ್ ಸೂಚನೆ

Date:

Advertisements

ತುಮಕೂರು ಜಿಲ್ಲೆಯ ವಸಂತನರಸಾಪುರದ ಕೈಗಾರಿಕಾ ಪ್ರದೇಶಕ್ಕೆ ಹೊಂದಿಕೊಂಡಂತೆ ನಗರಾಭಿವೃದ್ಧಿ ಇಲಾಖೆಯಿಂದ Integrated Township ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಿ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ ಎಸ್ ಸುರೇಶ್(ಬೈರತಿ) ಅವರು ನಗರಾಭಿವೃದ್ದಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಬೆಂಗಳೂರು ನಗರದ ವಿಧಾನಸೌಧದ ತಮ್ಮ ಕಚೇರಿಯಲ್ಲಿ ನಗರಾಭಿವೃದ್ದಿ ಇಲಾಖೆಯ ಅಡಿಯಲ್ಲಿ ಬರುವ ಹತ್ತು ಮಹಾನಗರ ಪಾಲಿಕೆಗಳು, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಹಣಕಾಸು ನಿಗಮ, ನಗರಾಭಿವೃದ್ಧಿ ಪ್ರಾಧಿಕಾರಗಳು ಹಾಗೂ ನಗರ ಮತ್ತು ಗ್ರಾಮಾಂತರ ಯೋಜನಾ ಆಯುಕ್ತಾಲಯದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕಳೆದ 3 ತಿಂಗಳಿನಿಂದ ಇವುಗಳಲ್ಲಿ ನಡೆದಿರುವ ಕಾಮಗಾರಿಗಳು ಹಾಗೂ ಕೈಗೊಂಡಿರುವ ಯೋಜನೆಗಳ ಕುರಿತಂತೆ ಸಭೆ ನಡೆಸಿದರು.

“ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈಗಾಗಲೇ ಮಂಡಿಸಿರುವ ಆಯವ್ಯಯದಲ್ಲಿ ವಸಂತನರಸಾಪುರದ ಬಳಿ ಸುಮಾರು 500 ಎಕರೆ ಪ್ರದೇಶದಲ್ಲಿ Integrated Township ನಿರ್ಮಾಣ ಮಾಡುವುದಾಗಿ ಘೋಷಿಸಿದ್ದಾರೆ. ಲೋಕಸಭಾ ಚುನಾವಣೆಗಳಿಂದಾಗಿ ಈವರೆಗೂ ನೀತಿ ಸಂಹಿತೆ ಜಾರಿಯಲ್ಲಿತ್ತು. ಈಗ ಅದು ಮುಕ್ತಾಯವಾಗಿರುವುದರಿಂದ Township ನಿರ್ಮಾಣದ ಬಗ್ಗೆ ಗಮನ ಹರಿಸಬೇಕು” ಎಂದು ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಗಳು ಸೇರಿದಂತೆ ಇತರೆ ಹಿರಿಯ ಅಧಿಕಾರಿಗಳಿಗೆ ಸಚಿವ ಬೈರತಿ ಸುರೇಶ್ ಅವರು ಸೂಚಿಸಿದರು.

Advertisements

“ಹಾಸನ, ಚಿಕ್ಕಮಗಳೂರು, ಬೆಳಗಾವಿ ಮತ್ತು ಕೋಲಾರ ನಗರ ಪ್ರದೇಶದ ವ್ಯಾಪ್ತಿಯಲ್ಲಿ ಮೂಲಸೌಕರ್ಯ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿದ್ದು, ರಸ್ತೆಗೆ ಡಾಂಬರೀಕರಣ, ರಸ್ತೆ ನಿರ್ಮಾಣ ಹಾಗೂ ರಿಂಗ್ ರಸ್ತೆ ನಿರ್ಮಾಣ ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಹೇಳಿದರು. ಅಲ್ಲದೆ ಮೈಸೂರು ರಿಂಗ್ ರಸ್ತೆ ನಿರ್ಮಾಣ ಮಾಡಲು ಕೆಲ ಅಡೆತಡೆಗಳು ಎದುರಾಗಿದ್ದು, ಮತ್ತೆ Short time Re-tender ಕರೆಯಬೇಕು” ಎಂದು ಅಧಿಕಾರಿಗಳಿಗೆ ಸೂಚಿಸಿದರು.

“ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಇರುವಂತೆಯೇ ಇತರೆ ಮಹಾನಗರ ಪಾಲಿಕೆಗಳಲ್ಲಿಯೂ Corporation ಶಾಲೆಗಳನ್ನು ತೆರೆಯಲು ಸರ್ಕಾರ ಚಿಂತನೆ ನಡೆಸಿದ್ದು, ಎಲ್ಲೆಲ್ಲಿ ತೆರೆಯಲು ಸಾಧ್ಯವಿದೆ ಎನ್ನುವುದನ್ನು ಪರಿಶೀಲಿಸಿ. ಅಲ್ಲದೇ, ಸ್ಮಾರ್ಟ್ ಸಿಟಿ ಯೋಜನೆಯಡಿ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ Corporation ಶಾಲೆಗಳನ್ನು ತೆರೆಯಲು ಸಾಧ್ಯವೇ ಎನ್ನುವುದನ್ನು ಪರಿಶೀಲಿಸಿ ತಿಳಿಸಿ” ಎಂದು ಸಚಿವ ಬೈರತಿ ಸುರೇಶ್‌ ಅಧಿಕಾರಿಗಳಿಗೆ ತಿಳಿಸಿದರು.

“ಮಹಾನಗರ ಪಾಲಿಕೆಗಳಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಒಂದು ವೇಳೆ ಹೆಚ್ಚು ಇದ್ದರೆ, ಕಡಿಮೆ ಮಾನವ ಸಂಪನ್ಮೂಲ ಇರುವ ಜಾಗಕ್ಕೆ ನಿಯೋಜನೆ ಮಾಡಲು ಸಾಧ್ಯವೇ ಎನ್ನುವುದನ್ನು ತಿಳಿಸಬೇಕು” ಎಂದು ಕಾರ್ಯದರ್ಶಿಗಳಿಗೆ ಸೂಚಿಸಿದರು.

“ಸಹಾಯಕ ಅಭಿಯಂತರರು, ಕಿರಿಯ ಅಭಿಯಂತರರು ಸೇರಿದಂತೆ ತಾಂತ್ರಿಕ ಸಿಬ್ಬಂದಿಗಳನ್ನು ಎರವಲು ಸೇವೆ ಅಥವಾ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಂಡು ಬಾಕಿ ಉಳಿದಿರುವ ಕಾಮಗಾರಿಗಳು ಹಾಗೂ ಯೋಜನೆಗಳನ್ನು ಪೂರ್ಣಗೊಳಿಸಬೇಕು” ಎಂದು ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

“ಅಮೃತ್ 2.0 ಯೋಜನೆಯಡಿಯಲ್ಲಿ ರಾಜ್ಯದ ನಗರ ಪ್ರದೇಶಗಳಲ್ಲಿ ಕೈಗೊಳ್ಳಬೇಕಾಗಿರುವ ಅಭಿವೃದ್ಧಿ ಕಾಮಗಾರಿಗಳಿಗೆ ತಗುಲುವ ಹಣದ ವೆಚ್ಚ ಕುರಿತಂತೆ ಕ್ರಿಯಾಯೋಜನೆ ರೂಪಿಸಬೇಕು” ಎಂದು ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗೆ ಸೂಚಿಸಿದರು.

ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | ಮನರೇಗಾ ಅಡಿ ಕೆಲಸ ನೀಡುವಂತೆ ಆಗ್ರಹ; ಗ್ರಾ.ಪಂ. ಎದುರು ಗ್ರಾಕೂಸ ಪ್ರತಿಭಟನೆ 

ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ದೀಪ ಚೋಳನ್, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವ್ಯವಸ್ಥಾಪಕ ನಿರ್ದೇಶಕ ಶರತ್ ಬಿ, ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಹಾಗೂ ಹಣಕಾಸು ನಿಗಮದ ವ್ಯವಸ್ಥಾಪಕ ನಿರ್ದೇಶಕ ಜಿ ಲಕ್ಷ್ಮೀಕಾಂತ ರೆಡ್ಡಿ, ನಗರಾಭಿವೃದ್ಧಿ ಪ್ರಾಧಿಕಾರಗಳು ಹಾಗೂ ನಗರ ಮತ್ತು ಗ್ರಾಮಾಂತರ ಯೋಜನಾ ಆಯುಕ್ತಾಲಯದ ಆಯುಕ್ತ ವೆಂಕಟಾಚಲಪತಿ, ನಗರ ಮತ್ತು ಗ್ರಾಮಾಂತರ ಯೋಜನೆ ನಿರ್ದೇಶಕರಾದ ತಿಪ್ಪೇಸ್ವಾಮಿ, ಪೌರಾಡಳಿತ ನಿರ್ದೇಶನಲಾಯದ ಜಂಟಿ ನಿರ್ದೇಶಕ ವಿಜಯ ಕುಮಾರ್, ಮುಖ್ಯ ಅಭಿಯಂತರ ಚಂದ್ರಪ್ಪ ಸೇರಿದಂತೆ ಕೆಲ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ‘ವೇಮಗಲ್ – ಕುರುಗಲ್ ಪಟ್ಟಣ ಪಂಚಾಯತಿ ಚುನಾವಣೆಯಲ್ಲಿ ದಲಿತರನ್ನು ಕಡೆಗಣಿಸಿಲ್ಲ’

ಇತ್ತೀಚೆಗೆ ಕೋಲಾರ ಜಿಲ್ಲೆಯ ವೇಮಗಲ್- ಕುರುಗಲ್ ಪಟ್ಟಣ ಪಂಚಾಯತಿ ಚುನಾವಣೆಯಲ್ಲಿ 6...

ಧಾರವಾಡ | ಬೆಣ್ಣೆಹಳ್ಳ ಸೇತುವೆ ದುರಸ್ತಿಗೆ ಮುಂದಾಗಲು ಸಚಿವ ಸಂತೋಷ್ ಲಾಡ್ ಸೂಚನೆ

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ತಡಹಾಳ ಹತ್ತಿರದ ದೊಡ್ಡಹಳ್ಳ ಹಾಗೂ ಬೆಣ್ಣೆಹಳ್ಳ...

ಧರ್ಮಸ್ಥಳ ಪ್ರಕರಣ | ನನ್ನ ಬಂಧನ ರಾಜಕೀಯ ಪಿತೂರಿಯ ಭಾಗ: ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಧಾರವಾಡ | ಮಕ್ಕಳ ಸಮಗ್ರ ಅಭಿವೃದ್ಧಿಗೆ ಪೂರಕ ವಾತಾವರಣ ನಿರ್ಮಿಸುವುದು ಎಲ್ಲರ ಕರ್ತವ್ಯ: ಕೆ. ನಾಗಣ್ಣಗೌಡ

ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ....

Download Eedina App Android / iOS

X