ಟಿ20 ವಿಶ್ವಕಪ್‌ | ಭಾರತಕ್ಕೆ ಗೆಲ್ಲಲು 111 ರನ್‌ಗಳ ಗುರಿ ನೀಡಿದ ಆತಿಥೇಯ ಅಮೆರಿಕ: ಮಿಂಚಿದ ಅರ್ಷ್‌ದೀಪ್ ಸಿಂಗ್

Date:

Advertisements

ನ್ಯೂಯಾರ್ಕ್‌ನ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2024ರ ಐಸಿಸಿ ಟಿ20 ವಿಶ್ವಕಪ್‌ನ 25ನೇ ಪಂದ್ಯದಲ್ಲಿ ಟೀಮ್ ಇಂಡಿಯಾಗೆ ಗೆಲ್ಲಲು ಆತಿಥೇಯ ಅಮೆರಿಕ ತಂಡವು 111 ರನ್‌ಗಳ ಸಾಧಾರಣ ಗುರಿ ನೀಡಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ಹಂಗಾಮಿ ನಾಯಕ ಆ್ಯರನ್ ಜೋನ್ಸ್‌ ನೇತೃತ್ವದ ಯುಎಸ್‌ಎ ತಂಡ ಟೀಮ್ ಇಂಡಿಯಾ ಬೌಲರ್ ಅರ್ಷ್‌ದೀಪ್ ಸಿಂಗ್ ಅವರ ದಾಳಿಗೆ ಸಿಲುಕಿ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 110 ರನ್ ಗಳಿಸಲಷ್ಟೇ ಶಕ್ತವಾಯಿತು.

ಟೀಮ್ ಇಂಡಿಯಾ ಪರ ಮೊದಲ ಓವರ್ ಎಸೆದ ಅರ್ಷ್‌ದೀಪ್ ಸಿಂಗ್, ಮೊದಲ ಓವರ್‌ನ ಮೊದಲ ಎಸೆತದಲ್ಲಿ ಶಯಾನ್ ಜಹಾಂಗೀರ್ ಅವರನ್ನು ಎಲ್‌ಬಿಡಬ್ಲ್ಯೂ ಬಲೆಗೆ ಬೀಳಿಸಿದರೆ, ಕೊನೆಯ ಎಸೆತದಲ್ಲಿ ಆ್ಯಂಡ್ರಿಸ್ ಗೌಸ್ ಅವರ ವಿಕೆಟ್ ಪಡೆಯುವಲ್ಲಿ ಸಫಲರಾದರು.

Advertisements

ಕಳೆದ ಎರಡು ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಜೋನ್ಸ್‌ ಇಂದಿನ ಪಂದ್ಯದಲ್ಲಿ ವಿಫಲರಾದರು. 22 ಎಸೆತಗಳಲ್ಲಿ 11 ರನ್ ಗಳಿಸಿ ಹಾರ್ದಿಕ್ ಪಾಂಡ್ಯಾ ಎಸೆತದಲ್ಲಿ ಸಿರಾಜ್‌ಗೆ ಕ್ಯಾಚಿತ್ತು ನಿರ್ಗಮಿಸಿದರು. ಬಳಿಕ ಮೆಲ್ಲಗೆ ತಂಡದ ಮೊತ್ತವನ್ನು ಸೇರಿಸುವಲ್ಲಿ ಸಫಲರಾದ ಅಮೆರಿಕ ಬ್ಯಾಟರ್‌ ಸ್ಟೀವನ್ ಟೇಲರ್ 24 ರನ್ ಗಳಿಸಿದ್ದಾಗ ಅಕ್ಸರ್ ಪಟೇಲ್ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆದರು.

ಬಳಿಕ ಅಮೆರಿಕ ಪರ ಆಟವಾಡುತ್ತಿರುವ ಭಾರತೀಯ ಮೂಲದ ನಿತೀಶ್ ಕುಮಾರ್ 23 ಎಸೆತಗಳಲ್ಲಿ 2 ಬೌಂಡರಿ ಹಾಗೂ 1 ಸಿಕ್ಸ್‌ನ ನೆರವಿನಿಂದ 27 ರನ್ ಗಳಿಸಿ, ಅರ್ಷ್‌ದೀಪ್‌ಗೆ ವಿಕೆಟ್ ಒಪ್ಪಿಸಿದರು. ಬೌಂಡರಿ ಲೈನ್‌ನಲ್ಲಿ ಫೀಲ್ದಿಂಗ್ ಮಾಡುತ್ತಿದ್ದ ಮೊಹಮ್ಮದ್ ಸಿರಾಜ್ ಹಿಡಿದ ಅದ್ಭುತ ಕ್ಯಾಚ್‌ಗೆ ಬಲಿಯಾದರು.

ಉಳಿದಂತೆ ಅಮೆರಿಕ ಪರ ಕೋರಿ ಆ್ಯಂಡರ್‌ಸನ್ 15 ರನ್, ಶ್ಯಾಡ್ಲಿ 11, ಹರ್ಮೀತ್ ಸಿಂಗ್ 10 ರನ್‌ಗಳ ಕೊಡುಗೆ ನೀಡಿದರು. ಕೊನೆಯಲ್ಲಿ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 110 ರನ್ ಗಳಿಸಲಷ್ಟೇ ಶಕ್ತವಾಯಿತು. ಆ ಮೂಲಕ ರೋಹಿತ್ ಶರ್ಮಾ ಪಡೆಗೆ ಗೆಲ್ಲಲು 111 ರನ್‌ಗಳ ಸಾಧಾರಣ ಗುರಿ ನೀಡಿದೆ.

ಟೀಮ್ ಇಂಡಿಯಾ ಪರ ಉತ್ತಮ ಬೌಲಿಂಗ್ ಪ್ರದರ್ಶನ ನೀಡಿದ ಎಡಗೈ ಬೌಲರ್ ಅರ್ಷ್‌ದೀಪ್ ಸಿಂಗ್ 4 ಓವರ್‌ಗಳನ್ನು ಎಸೆದು ಕೇವಲ 9 ರನ್ ನೀಡಿ 4 ವಿಕೆಟ್ ಕಿತ್ತು ಮಿಂಚಿದರು. ಉಳಿದಂತೆ ಹಾರ್ದಿಕ್ ಪಾಂಡ್ಯಾ 2 ವಿಕೆಟ್ ಗಳಿಸಿದರೆ, ಅಕ್ಸರ್ ಪಟೇಲ್ ಒಂದು ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

Download Eedina App Android / iOS

X