ದಲಿತ ಯುವಕರ ದಾರಿ ತಪ್ಪಿಸುತ್ತಿದೆ ಕೋಮುವಾದಿ ಸಂಘಟನೆ; ಮುತ್ತು ಬಿಳಿಯಲಿ ಆರೋಪ

Date:

Advertisements

ಗದಗ ಜಿಲ್ಲಾಧಿಕಾರಿ ಕಚೇರಿ ಮುಂದೆ ‘ದಲಿತ ಮಿತ್ರ ಮೇಳ ಗದಗ’ ಎಂಬ ಬ್ಯಾನರ್ ಅಡಿಯಲ್ಲಿ ತೋಂಟದಾರ್ಯ ಮಠದ ವಿರುದ್ಧ ಕೆಲವರು ಪ್ರತಿಭಟನೆ ಮಾಡುತ್ತಿದ್ದಾರೆ. ಅವರು ತಮ್ಮ ಸಂಘಟನೆ ಅಡಿಯಲ್ಲಿ ಪ್ರತಿಭಟನೆ ಮಾಡುವುದು ಬಿಟ್ಟು, ದಲಿತ ಯುವಜನರ ಹೆಸರಿನಲ್ಲಿ ಪ್ರತಿಭಟನೆ ಮಾಡುತ್ತಿರುವುದು ದಲಿತ ಸಮಾಜ ತೋಂಟದಾರ್ಯ ಮಠದ ವಿರುದ್ಧ ಇದೆ ಎಂಬ ತಪ್ಪು ಸಂದೇಶ ನೋಡುತ್ತದೆ ಎಂದು ಹೋರಾಟಗಾರ ಮುತ್ತು ಬಿಳಿಯಲಿ ಕಿಡಿಕಾರಿದ್ದಾರೆ.

“ಗದಗನಲ್ಲಿರುವ ಯಾವುದೇ ದಲಿತ ಸಂಘಟನೆಗಳು ಈ ಪ್ರತಿಭಟನೆಯ ಪರವಾಗಿಲ್ಲ. ದಲಿತರ ಹೆಸರಿನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ನಮ್ಮ ವಿರೋಧವಿದೆ. ಇಂದು ಪ್ರತಿಭಟನೆ ಮಾಡುವ ಸಂದರ್ಭದಲ್ಲಿ ಡಾ. ಬಾಬಾ ಸಾಹೇಬ ಅಂಬೇಡ್ಕರ್ ಅವರ ಫೋಟೋ ಜೊತೆಗೆ ಈ ದೇಶದ ದೇಶದ್ರೋಹಿ ಸಾವರ್ಕರ್ ಫೋಟೊ ಇಟ್ಟಿದ್ದರು. ಇದರಿಂದಲೇ ತಿಳಿಯುತ್ತದೆ ಅವರು ದಲಿತ ಸಂಘಟನೆಯವರಲ್ಲ ಕೋಮುವಾದಿ ಸಂಘಟನೆಯವರು” ಎಂದು ಆರೋಪಿಸಿದ್ದಾರೆ.

“ನಾನು ಬಾಲರಾಜ್ ಅರಬರ, ಆನಂದ ಸಿಂಗಾಡಿ, ಯಲ್ಲಪ್ಪ ರಾಮಗಿರಿ,ಅನಿಲ ಕಾಳೆ,ಪರಶು ಕಾಳೆ,ಪೊಕ್ಕು ರಾಮಗಿರಿ, ಬಸೂ ಬಿಳೆಯಲಿ ಎಲ್ಲರೂ ಒಂದೆಡೆ ಸೇರಿ ಈ ಪ್ರತಿಭಟನೆಯನ್ನು ಖಂಡಿಸಿ, ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನೇಮಗೌಡ ಅವರಿಗೆ ಫೋನ್ ಮುಖಾಂತರ ಸಂಪರ್ಕಿಸಿ ಡಾ. ಬಾಬಾ ಸಾಹೇಬ ಅಂಬೇಡ್ಕರ್ ಫೋಟೊ ಜೊತೆಗೆ ಸಾವರ್ಕರ್ ಫೋಟೊ ಯಾವುದೇ ಕಾರಣಕ್ಕೂ ಇರಬಾರದು. ಕೂಡಲೇ ಸಾವರ್ಕರ್ ಫೋಟೊ ತೆರವುಗೊಳಿಸುವಂತೆ ಆಗ್ರಹಿಸಿದೆವು. ಎಚ್ಚೆತ್ತ ಪೊಲೀಸರು ಸಾವರ್ಕರ್ ಫೋಟೋ ತೆರವುಗೊಳಿಸಿದ್ದಾರೆ” ಎಂದು ಹೇಳಿದರು.

Advertisements

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X