ದೆಹಲಿ ಜಲ ವಿವಾದ | ನಮ್ಮಲ್ಲಿ ಸಾಕಷ್ಟು ನೀರಿಲ್ಲ; ಸುಪ್ರೀಂಗೆ ಹಿಮಾಚಲ ಸರ್ಕಾರ ಮಾಹಿತಿ

Date:

Advertisements

ದೆಹಲಿಯಲ್ಲಿ ಪ್ರಸ್ತುತ ನಡೆಯುತ್ತಿರುವ ನೀರಿನ ಸಂಕಷ್ಟದ ನಡುವೆ ಹಿಮಾಚಲ ಪ್ರದೇಶ ಸರ್ಕಾರ ತಾನು ಹಿಂದೆ ನೀಡಿದ ಹೇಳಿಕೆಯನ್ನು ಹಿಂಪಡೆದಿದ್ದು, ದೆಹಲಿಗೆ ಬಿಡಬೇಕಾದ 136 ಕ್ಯೂಸೆಕ್ಸ್ ಹೆಚ್ಚುವರಿ ನೀರು ನಮ್ಮ ಬಳಿ ಇಲ್ಲ ಎಂದು ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದೆ.

ಈ ಹಿನ್ನೆಲೆಯಲ್ಲಿ ನೀರು ಸರಬರಾಜಿಗಾಗಿ ಯಮುನಾ ನದಿ ಉನ್ನತ ಮಂಡಳಿ(ಯುವೈಆರ್‌ಬಿ)ಗೆ ಮನವಿ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ದೆಹಲಿ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ರಾಷ್ಟ್ರ ರಾಜಧಾನಿಯಲ್ಲಿ ನೀರಿನ ಸಮಸ್ಯೆ ಉದ್ಭವಿಸಿರುವ ಹಿನ್ನೆಲೆಯಲ್ಲಿ ಹಿಮಾಚಲ ಪ್ರದೇಶದಿಂದ ಬಿಡಲಾಗುವ ಹೆಚ್ಚುವರಿ ನೀರನ್ನು ಬಿಡುಗಡೆ ಮಾಡುವಂತೆ ಹರಿಯಾಣ ಸರ್ಕಾರಕ್ಕೆ ನಿರ್ದೇಶಿಸುವಂತೆ ದೆಹಲಿ ಸರ್ಕಾರ ಮನವಿ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿದ ಸಂದರ್ಭದಲ್ಲಿ ಈ ಬೆಳವಣಿಗೆ ನಡೆದಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೊಡುವ ಸ್ಥಾನದಲ್ಲಿರುವವರು ಒಳ್ಳೆಯದನ್ನೇ ಕೊಡಬೇಕು ಎಂದು ರಾಜ್ ಹೇಳಿದ್ದು ಯಾರಿಗೆ?

ರಜಾ ಕಾಲ ಪೀಠದ ನ್ಯಾಯಮೂರ್ತಿಗಳಾದ ಪ್ರಶಾಂತ್ ಕುಮಾರ್ ಮಿಶ್ರಾ ಹಾಗೂ ಪ್ರಸನ್ನ ಬಿ ವರಾಳೆ ಅವರು ರಾಷ್ಟ್ರೀಯ ರಾಜಧಾನಿಗೆ ಮಾನವೀಯ ಆಧಾರದ ಮೇಲೆ ನೀರು ಬಿಡುಗಡೆ ಮಾಡುವಂತೆ ವೈಯುಆರ್‌ಬಿಗೆ ಇಂದು ಸಂಜೆ 5 ಗಂಟೆಯೊಳಗೆ ಮನವಿ ಸಲ್ಲಿಸುವಂತೆ ದೆಹಲಿ ಸರ್ಕಾರಕ್ಕೆ ಸೂಚಿಸಿದರು.

ಉಭಯ ರಾಜ್ಯಗಳ ನಡುವಿನ ಯಮುನಾ ನದಿಯ ನೀರಿನ ಹಂಚಿಕೆ ಸಂಕೀರ್ಣ ಹಾಗೂ ಸೂಕ್ಷ್ಮ ವಿಷಯವಾಗಿದೆ. ಮಧ್ಯಂತರ ಆಧಾರದ ಮೇಲೆ ನಿರ್ಧರಿಸಲು ನ್ಯಾಯಾಲಯವು ಯಾವುದೇ ತಾಂತ್ರಿಕ ಪರಿಣಿತಿಯನ್ನು ಹೊಂದಿಲ್ಲ ಎಂದು ಪೀಠ ತಿಳಿಸಿದೆ.

“1994ರಲ್ಲಿ ಎರಡೂ ರಾಜ್ಯಗಳ ನಡುವೆ ಆಗಿರುವ ಒಪ್ಪಂದದಂತೆ ನಿರ್ಮಾಣವಾಗಿರುವ ಸಂಸ್ಥೆಯ ಮೂಲಕ ಈ ಸಮಸ್ಯೆಯನ್ನು ಇತ್ಯರ್ಥಗೊಳಿಸಿಕೊಳ್ಳಬೇಕು” ಎಂದು ನ್ಯಾಯಮೂರ್ತಿಗಳು ತಿಳಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಜಾತಿ ಧರ್ಮ ಭಾಷೆಗಳ ಸಂಘರ್ಷ ತಡೆಗೆ ಗಾಂಧೀಜಿ ದಾರಿ ಮುಖ್ಯ: ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ

ʼʼಜಾತಿ,ಧರ್ಮಗಳ, ಮಧ್ಯೆ, ಭಾಷೆ ಮತ್ತು ಪ್ರದೇಶಗಳ ಮಧ್ಯೆ ವೈಷಮ್ಯ ಮಾಡಿಕೊಂಡು ಸಂಘರ್ಷ...

ಒಳ ಮೀಸಲಾತಿ | ಎಐಸಿಸಿ ಹಸ್ತಕ್ಷೇಪಕ್ಕೆ ಹೆಚ್ಚಿದ ಆಗ್ರಹ, ದೆಹಲಿ ಬಿಡದಿರಲು ಅಲೆಮಾರಿ ಸಂಸತ್ತು ತೀರ್ಮಾನ

ಒಳ ಮೀಸಲಾತಿ ವಿತರಣೆಯಲ್ಲಿ ಕರ್ನಾಟಕದ ಅಸ್ಪೃಶ್ಯ ದಲಿತ ಅಲೆಮಾರಿ ಸಮುದಾಯಗಳಿಗೆ ಆಗಿರುವ...

RSSಅನ್ನು ‘ಸರ್ವಾಧಿಕಾರಿ ದೃಷ್ಟಿಕೋನ ಹೊಂದಿರುವ ಕೋಮುವಾದಿ ಸಂಸ್ಥೆ’ ಎಂದಿದ್ದರು ಗಾಂಧಿ

ಆರ್‌ಎಸ್‌ಎಸ್‌ ತನ್ನ ಶತಮಾನೋತ್ಸವ ಆಚರಿಸಿಕೊಳ್ಳುತ್ತಿದೆ. ಆರ್‌ಎಸ್‌ಎಸ್‌ಅನ್ನು ಹೊಗಳಿರುವ ಪ್ರಧಾನಿ ಮೋದಿ ಅವರು,...

Download Eedina App Android / iOS

X