ಬಾಗಲಕೋಟೆ | ಶಾಂತಿ-ಸೌಹಾರ್ದವಾಗಿ ಬಕ್ರಿದ್ ಆಚರಿಸಲು ಪಿಎಸ್‌ಐ ನೇತೃತ್ವದಲ್ಲಿ ಸಭೆ

Date:

Advertisements

ಭಾರತವು ವಿವಿಧತೆಯಲ್ಲಿ ಏಕತೆ ಕಂಡ ದೇಶವಾಗಿದೆ. ಹಿಂದು ಮುಸ್ಲಿಮರು ಶಾಂತಿ ಮತ್ತು ಸೌಹಾರ್ದದಿಂದ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಕ್ರಿದ್ ಹಬ್ಬ ಆಚರಿಸಬೇಕು ಎಂದು ಪಿಎಸ್‌ಐ ಲಕ್ಕಪ್ಪ ಜೋಡಹಟ್ಟಿ ಹೇಳಿದರು.

ಬಾಗಲಕೋಟೆ ಜಿಲ್ಲೆಯ ಹುನಗುಂದ ಪೊಲೀಸ್ ಠಾಣೆಯಲ್ಲಿ ಬಕ್ರೀದ್ ಹಬ್ಬದ ಅಂಗವಾಗಿ ಪಿಎಸ್‌ಐ ನೇತೃತ್ವದಲ್ಲಿ ಸಭೆ ನಡೆದಿದೆ. ಸಭೆಯಲ್ಲಿ ಮಾತನಾಡಿದ ಪಿಎಸ್‌ಐ ಲಕ್ಕಪ್ಪ, “ಎಲ್ಲ ಹಬ್ಬಗಳನ್ನು ಸೌಹಾರ್ದ ಭಾವದಿಂದ ಆಚರಿಸುತ್ತಾರೆ. ಅದು ಈ ಮಣ್ಣಿನ ಗುಣವಾಗಿದೆ. ಇದಕ್ಕೆಲ್ಲ ಹಿರಿಯರ ಮಾರ್ಗದರ್ಶನ ಕಾರಣ” ಎಂದರು.

“ಪ್ರತಿಯೊಬ್ಬರು ಯಾವುದೇ ಧರ್ಮಕ್ಕೆ ತೊಂದರೆಯಾಗದಂತೆ ತಮ್ಮ ತಮ್ಮ ಧರ್ಮದ ಪದ್ಧತಿಯಂತೆ ಹಾಗೂ ಕೋರ್ಟ್ ನೀಡಿದ ಮಾರ್ಗಸೂಚಿಯಂತೆ ಬಕ್ರೀದ್ ಹಬ್ಬವನ್ನು ಆಚರಿಸಬೇಕು” ಎಂದು ತಿಳಿಸಿದರು.

ಮುಸ್ಲಿಂ ಸಮುದಾಯದ ಮುಖಂಡ ಶಬ್ಬೀರ್ ಮೌಲ್ವಿ ಮಾತನಾಡಿ, “ಪಟ್ಟಣದಲ್ಲಿ ನಾವೆಲ್ಲರೂ ಅಣ್ಣತಮ್ಮಂದಿರಂತೆ ಬಾಳು ಬದುಕುತ್ತಿದ್ದೇವೆ. ನಮ್ಮ ಪಟ್ಟಣವು ಸಾಮರಸ್ಯಕ್ಕೆ ಹೆಸರಾಗಿದೆ ಅನೇಕ ವರ್ಷಗಳಿಂದ ಹಿಂದು-ಮುಸ್ಲಿಮರು ಅಣ್ಣ ತಮ್ಮಂದಿರಂತೆ ಬಾಳಿದ್ದು ಮುಂದೆಯೂ ಕೂಡ ಅದೇ ಮಾರ್ಗದಲ್ಲಿ ನಡೆಯುತ್ತೇವೆ” ಎಂದರು.

ಸಭೆಯಲ್ಲಿ ಸ್ಥಳೀಯ ನ್ಯಾಯವಾದಿ ಮಹಾಂತೇಶ ಅವಾರಿ, ರೈತ ಮುಖಂಡ ಅಮರೇಶ ನಾಗೂರ, ಅಪ್ಪು ಆಲೂರ ಶಾಂತಿ ಸಭೆ ಕುರಿತು ಮಾತನಾಡಿದರು. ಸಭೆಯಲ್ಲಿ ಮುನ್ನಾ ಭಗವಾನ, ಮಹಾಂತೇಶ ಮದುರಿ, ಪರ್ವೀಜ್ ಖಾಜಿ, ಫಕ್ರುದ್ದೀನ್ ತಾಳಿಕೋಟಿ, ಶಿವಾನಂದ ಕಂಠಿ, ಇತರರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕೊಲೆಗೈದು ಅಸಹಜ ಸಾವು ಎಂದು ಬಿಂಬಿಸಿದ ತಾಯಿ : ಪೊಲೀಸರಿಂದ ಬಂಧನ

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಕಾನಂಗಿಯಲ್ಲಿ ಬೆಚ್ಚಿಬೀಳಿಸುವಂತಹ ಘಟನೆಯೊಂದು...

ಶಿವಮೊಗ್ಗ | ಟೈಮ್ ಪಾಸ್ ಜಾಬ್ ಆಸೆಗೆ 6.78 ಲಕ್ಷ ರುಪಾಯಿ ಕಳೆದುಕೊಂಡ ಮಹಿಳೆ ; ಪ್ರಕರಣ ದಾಖಲು

ಶಿವಮೊಗ್ಗ ನಗರದ ಮಹಿಳೆಯೊಬ್ಬರು ಹೆಚ್ಚು ಹಣ ಗಳಿಸುವ ಉದ್ದೇಶದಿಂದ ಪಾರ್ಟ್‌ ಟೈಮ್‌...

Download Eedina App Android / iOS

X