ಅಜಿತ್ ದೋವಲ್ ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ಮುಂದುವರಿಕೆ

Date:

Advertisements

ಅಜಿತ್ ದೋವಲ್ ಅವರನ್ನು ರಾಷ್ಟ್ರೀಯ ಭದ್ರತಾ ಸಲಹೆಗಾರರನ್ನಾಗಿ ಕೇಂದ್ರ ಸರ್ಕಾರ ಪುನರ್‌ನೇಮಕ ಮಾಡಿದೆ. ಹಾಗೆಯೇ ಸಂಪುಟದ ನೇಮಕಾತಿ ಸಮಿತಿ ಡಾ. ಪಿ ಕೆ ಮಿಶ್ರಾ ಅವರನ್ನು ಪ್ರಧಾನ ಮಂತ್ರಿಗಳ ಪ್ರಧಾನ ಕಾರ್ಯದರ್ಶಿಗಳಾಗಿ ಮುಂದುವರೆಸಿದೆ.

ಇಬ್ಬರು ನಿವೃತ್ತ ಲೋಕಸೇವಾ ಆಯೋಗದ ಅಧಿಕಾರಿಗಳು ದೀರ್ಘ ಕಾಲದಿಂದ ಪ್ರಧಾನ ಮಂತ್ರಿಗಳ ಸಲಹೆಗಾರರಾಗಿ ಮುಂದುವರೆಯುತ್ತಿದ್ದಾರೆ.

ಮಿಶ್ರಾ ಅವರು ಪ್ರದಾನ ಮಂತ್ರಿ ಕಾರ್ಯಾಲಯದ ಆಡಳಿತಾತ್ಮಕ ವಿಷಯಗಳು ಹಾಗೂ ನೇಮಕಾತಿಗಳನ್ನು ನಿರ್ವಹಿಸಿದರೆ, ದೋವಲ್‌ ಅವರು ರಾಷ್ಟ್ರೀಯ ಭದ್ರತೆ, ಮಿಲಿಟರಿ ವ್ಯವಹಾರ ಹಾಗೂ ಗುಪ್ತಚರ ವಿಭಾಗಗಳನ್ನು ನಿರ್ವಹಿಸುತ್ತಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೊಡುವ ಸ್ಥಾನದಲ್ಲಿರುವವರು ಒಳ್ಳೆಯದನ್ನೇ ಕೊಡಬೇಕು ಎಂದು ರಾಜ್ ಹೇಳಿದ್ದು ಯಾರಿಗೆ?

1968 ಬ್ಯಾಚಿನ ಐಪಿಎಸ್‌ ಅಧಿಕಾರಿಯಾದ ಅಜಿತ್‌ ದೋವಲ್ ಭಯೋತ್ಪಾದನಾ ನಿಗ್ರಹ ತಜ್ಞ ಹಾಗೂ ಪರಮಾಣು ಸಮಸ್ಯೆಗಳ ಪರಿಣಿತರಾಗಿದ್ದಾರೆ. ವಿವಿಧ ರೀತಿಯ ಭದ್ರತೆ ವಿಷಯಗಳ ಬಗ್ಗೆ ಪ್ರಧಾನಿಯ ಸಲಹೆಗಾರರಾಗಿದ್ದಾರೆ. ಈ ಮೊದಲು ಗುಪ್ತಚರ ಅಧಿಕಾರಿಯಾಗಿ ಪಾಕಿಸ್ತಾನ, ಅಫ್ಘಾನಿಸ್ತಾನ ಹಾಗೂ ಮಧ್ಯ ಏಷ್ಯಾದ ರಾಷ್ಟ್ರಗಳಲ್ಲಿ ಕೆಲಸ ಮಾಡಿದ್ದಾರೆ.

ಡಾ. ಪಿ ಕೆ ಮಿಶ್ರಾ ಅವರು 1972ರ ಬ್ಯಾಚಿನ ಅಧಿಕಾರಿಯಾಗಿದ್ದು, ಕಳೆದ ಒಂದು ದಶಕದಿಂದ ಪ್ರಧಾನ ಮಂತ್ರಿಗಳ ಪ್ರಧಾನ ಕಾರ್ಯದರ್ಶಿಗಳಾಗಿದ್ದಾರೆ. ನಿವೃತ್ತಿಯಾಗುವ ಮುನ್ನ ಇವರು ಕೇಂದ್ರ ಸರ್ಕಾರದ ಕೃಷಿ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X