ಗೃಹ ಮಂಡಳಿ ಅಧಿಕಾರಿಗಳ ಕಾರ್ಯವೈಖರಿಗೆ ಅಸಮಾಧಾನ ಹೊರಹಾಕಿದ ಸಚಿವ ಝಮೀರ್

Date:

Advertisements

ಕರ್ನಾಟಕ ಗೃಹ ಮಂಡಳಿ ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ವಸತಿ ಸಚಿವ ಝಮೀರ್ ಅಹಮದ್ ಖಾನ್ ಅಸಮಾಧಾನ ವ್ಯಕ್ತಪಡಿಸಿ, ಇಲಾಖೆಯಲ್ಲಿ ನಿರೀಕ್ಷಿತ ಮಟ್ಟದಲ್ಲಿ ಸಾಧನೆಯಾಗದ ಬಗ್ಗೆ ಬೇಸರ ವ್ಯಕ್ತಪಡಿಸಿದರು.

ಗೃಹಮಂಡಳಿ ಅಧ್ಯಕ್ಷ ಶಿವಲಿಂಗೇಗೌಡ ಅವರ ಜತೆಗೂಡಿ ಮಂಡಳಿಯ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಅವರು, ಚಿಕ್ಕಜಾಲ ಇಂಟಿಗ್ರಟೇಡ್ ಟೌನ್ ಶಿಪ್ ಹಾಗೂ ಕುಂಬಳಗೋಡು ಉಪನಗರ ಯೋಜನೆ ನಿಧಾನಗತಿಯಲ್ಲಿ ಸಾಗುತ್ತಿರುವ ಬಗ್ಗೆ ಗರಂ ಆದರು. ಯೋಜನೆ ಅನುಷ್ಠಾನಕ್ಕೆ ಪ್ರತ್ಯೇಕ ಅಧಿಕಾರಿಗಳನ್ನು ನಿಯೋಜಿಸಿ ಮೂರು ತಿಂಗಳಲ್ಲಿ ಪ್ರಗತಿ ತೋರಿಸುವಂತೆ ನಿರ್ದೇಶನ ನೀಡಿದರು.

ಮಂಡಳಿ ಜಮೀನು ಸ್ವಾಧೀನ ಸೇರಿ ನ್ಯಾಯಾಲಯದಲ್ಲಿರುವ ಪ್ರಕರಣಗಳ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳದ ಹಾಗೂ ಲಕ್ಷಾಂತರ ರೂ. ವ್ಯಯ ಆದರೂ ಒಂದೇ ಒಂದು ಪ್ರಕರಣ ಇತ್ಯರ್ಥವಾಗದ ಬಗ್ಗೆ ಸಿಡಿಮಿಡಿಗೊಂಡ ಸಚಿವರು, ಸದ್ಯದಲ್ಲೇ ಅಡ್ವೋಕೆಟ್ ಜನರಲ್ ಜತೆ ಸಭೆ ನಿಗದಿ ಮಾಡುವುದಾಗಿ ಸಚಿವರು ತಿಳಿಸಿದರು.

Advertisements

ಗೃಹಮಂಡಳಿ ಮೂಲೆ ನಿವೇಶನ ಹರಾಜು ಹಾಕಿ ಸಂಪನ್ಮೂಲ ಸಂಗ್ರಹಕ್ಕೆ ಒತ್ತು ಕೊಡಬೇಕು. ಮೂರು ತಿಂಗಳಲ್ಲಿ ಒಂದು ಸಾವಿರ ಕೋಟಿ ರೂ. ಕ್ರೋಢೀಕರಿಸಿ ಹೊಸ ಬಡಾವಣೆ ನಿರ್ಮಿಸಲು ಜಾಮೀನು ಗುರುತಿಸಬೇಕು ಎಂದು ಝಮೀರ್ ಅಹಮದ್ ಖಾನ್ ಸೂಚನೆ ನೀಡಿದರು.

ಇದನ್ನು ಓದಿದ್ದೀರಾ? ಎತ್ತಿನಹೊಳೆ ಕಾಮಗಾರಿಗೆ 500 ಎಕರೆ ನೀಡಲು ಅರಣ್ಯ ಇಲಾಖೆ ಒಪ್ಪಿಗೆ: ಡಿಸಿಎಂ ಡಿ.ಕೆ. ಶಿವಕುಮಾರ್

ಗೃಹ ಮಂಡಳಿ ಅಧ್ಯಕ್ಷ ಶಿವಲಿಂಗೇಗೌಡ ಕೂಡ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದು, “ಸರಿಯಾಗಿ ಕೆಲಸ ಮಾಡದ ಅಧಿಕಾರಿಗಳ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು. ಗೃಹ ಮಂಡಳಿ ನಿವೇಶನಗಳಿಗೆ ಬೇಡಿಕೆ ಇದೆ. ಸೂಕ್ತ ರೀತಿಯಲ್ಲಿ ಹೊಸ ಬಡಾವಣೆ ರಚನೆಗೆ ಕ್ರಮ ಕೈಗೊಳ್ಳಬೇಕು” ಎಂದು ತಾಕೀತು ಮಾಡಿದರು.

ಸಭೆಯಲ್ಲಿ ವಸತಿ ಇಲಾಖೆಯ ಕಾರ್ಯದರ್ಶಿ ನವೀನ್ ರಾಜ್ ಸಿಂಗ್, ಆಯುಕ್ತರಾದ ಕವಿತಾ ಮಣ್ಣಿಕೇರಿ, ಪ್ರಧಾನ ಅಭಿಯಂತರ ಶರಣಪ್ಪ ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಹನುಮಂತ ಮೊದಲ ಬಾಹ್ಯಾಕಾಶ ಯಾತ್ರಿಕ’ ಎಂದ ಬಿಜೆಪಿ ನಾಯಕ ಅನುರಾಗ್ ಠಾಕೂರ್; ಟ್ರೋಲ್‌ಗೆ ಗುರಿ

"ಭಗವಾನ್ ಹನುಮಂತ ಮೊದಲ ಬಾಹ್ಯಾಕಾಶ ಯಾತ್ರಿಕ" ಎಂದು ಹೇಳುವ ಮೂಲಕ ಬಿಜೆಪಿ...

ಡಿ ಕೆ ಶಿವಕುಮಾರ್‌ ಆರ್​ಎಸ್​ಎಸ್ ಗೀತೆ ಹಾಡಿದ್ದಕ್ಕೆ ಕ್ಷಮೆ ಕೇಳಬೇಕು: ಬಿ ಕೆ ಹರಿಪ್ರಸಾದ್ ಆಗ್ರಹ

ಕೆಪಿಸಿಸಿ ಅಧ್ಯಕ್ಷರಾಗಿ ಡಿ ಕೆ ಶಿವಕುಮಾರ್‌ ಆರ್​ಎಸ್​ಎಸ್ ಗೀತೆ ಹಾಡಿದ್ದರೆ ಕ್ಷಮೆ...

ಕಲ್ಯಾಣ ಕರ್ನಾಟಕದಲ್ಲಿ 36 ಪಿಯು ಉಪನ್ಯಾಸಕರ ಹುದ್ದೆ ಭರ್ತಿಗೆ ಸರ್ಕಾರ ಅನುಮತಿ!

ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಾಲಾ ಶಿಕ್ಷಣ ಇಲಾಖೆಯ (ಪದವಿ ಪೂರ್ವ) ಸರ್ಕಾರಿ...

ಆಧಾರ್ ಕಾರ್ಡ್‌ ಪೌರತ್ವದ ಪುರಾವೆಯಲ್ಲ: ಬಿಜೆಪಿಯ ಅಮಿತ್ ಮಾಳವೀಯ

ಆಧಾರ್ ಕಾರ್ಡ್‌ ಪೌರತ್ವದ ಪುರಾವೆಯಲ್ಲ. ಸುಪ್ರೀಂ ಕೋರ್ಟ್ ತನ್ನ ಮಧ್ಯಂತರ ಆದೇಶದಲ್ಲಿ...

Download Eedina App Android / iOS

X