ಜುಲೈ ಅಂತ್ಯದ ವೇಳೆಗೆ ಬೇಳೆಕಾಳುಗಳ ಬೆಲೆ ಇಳಿಯುವ ನಿರೀಕ್ಷೆ: ಸರ್ಕಾರ

Date:

Advertisements

ಜುಲೈ ಅಂತ್ಯದಿಂದ ತೊಗರಿ ಬೇಳೆ, ಕಡ್ಳೆ ಬೇಳೆ ಮತ್ತು ಉದ್ದಿನಬೇಳೆ ಸೇರಿದಂತೆ ಪ್ರಮುಖ ಬೇಳೆಕಾಳುಗಳ ಬೆಲೆಗಳು ಇಳಿಕೆಯಾಗುವ ಸಾಧ್ಯತೆಯಿದೆ ಎಂದು ಕೇಂದ್ರ ಗ್ರಾಹಕರ ವ್ಯವಹಾರಗಳ ಕಾರ್ಯದರ್ಶಿ ನಿಧಿ ಖರೆ ಹೇಳಿದ್ದಾರೆ.

ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಉತ್ತಮ ಮಾನ್ಸೂನ್ ಮಳೆಯಾಗುತ್ತಿದೆ ಮತ್ತು ಬೇಳೆಕಾಳುಗಳ ಆಮದು ಕೂಡ ಹೆಚ್ಚಿದ್ದು, ಬೇಡಿಕೆಗೆ ತಕ್ಕಷ್ಟು ಲಭ್ಯತೆ ಇರಲಿದೆ. ಹೀಗಾಗಿ, ಬೆಲೆಗಳು ಕಡಿಮೆಯಾಗುವ ನಿರೀಕ್ಷೆಯಿದೆ ಎಂದು ಅವರು ಹೇಳಿದ್ದಾರೆ.

ಗ್ರಾಹಕ ವ್ಯವಹಾರಗಳ ಇಲಾಖೆಯ ಅಂಕಿಅಂಶಗಳ ಪ್ರಕಾರ, ಭಾರತದಲ್ಲಿ ಶುಕ್ರವಾರದಂದು ತೊಗರಿ ಬೇಳೆಯ ಚಿಲ್ಲರೆ ದರವು ಕೆಜಿಗೆ 160 ರೂ.ಗಳಷ್ಟಿತ್ತು. ಇದು ಕಳೆದ ವರ್ಷದ ಕೆಜಿಗೆ 126.61 ರೂ.ಗೆ ಹೋಲಿಸಿದರೆ ಶೇ.26.66 ರಷ್ಟು ಹೆಚ್ಚಾಗಿದೆ.

ಅದೇ ರೀತಿ, ಒಂದು ವರ್ಷದ ಹಿಂದಿನ ಬೆಲೆಗೆ ಹೋಲಿಸಿದರೆ, ಕಡ್ಳೆ ಬೇಳೆ ಮತ್ತು ಉದ್ದಿನ ಬೇಳೆ ಚಿಲ್ಲರೆ ಬೆಲೆಗಳು ಕ್ರಮವಾಗಿ ಶೇ.17.21 ಮತ್ತು ಶೇ.13.30 ರಷ್ಟು ಹೆಚ್ಚಾಗಿದೆ.

ಬೇಳೆಕಾಳುಗಳ ಬೆಲೆ ಏರಿಕೆಯು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ತೀವ್ರ ವಾಗ್ದಾಳಿ ನಡೆಸಲು ಕಾರಣವಾಗಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿಯೂ ಬೆಲೆ ಏರಿಕೆ ಪ್ರಮುಖ ಚರ್ಚಾ ವಿಷಯವೂ ಆಗಿತ್ತು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ 1% ಪ್ರತ್ಯೇಕ ಮೀಸಲಾತಿಗೆ ಆಗ್ರಹ; ದೆಹಲಿಯಲ್ಲಿ ಪ್ರತಿಭಟನೆ

ಕರ್ನಾಟಕ ಸರ್ಕಾರವು ಒಳಮೀಸಲಾತಿಯನ್ನು ಜಾರಿಗೊಳಿಸಿದೆ. ಆದರೆ, ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ 1%...

‘ನನ್ನ ಗಂಡನನ್ನು ಭೇಟಿಯಾಗುವ ಅರ್ಹತೆ ನನಗಿಲ್ಲವೇ?’: ರಾಷ್ಟ್ರಪತಿ, ಮೋದಿಗೆ ಪತ್ರ ಬರೆದ ವಾಂಗ್ಚುಕ್ ಪತ್ನಿ

ಲಡಾಖ್‌ಗೆ ರಾಜ್ಯ ಸ್ಥಾನಮಾನ ನೀಡಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆಗಳನ್ನು ಇಟ್ಟುಕೊಂಡು...

ಯುವಜನರಿಗಾಗಿ ಪ್ರಾಣವನ್ನೇ ತ್ಯಾಗ ಮಾಡುತ್ತೇನೆ: ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ

ಸುಡುವ ಬಿಸಿಲಿನಲ್ಲಿ ಕುರಿತು ಯುವಜನರು ತಮ್ಮ ಹಕ್ಕೊತ್ತಾಯಗಳ ಈಡೇರಿಕೆಗಾಗಿ ಹೋರಾಟ ನಡೆಸುತ್ತಿದ್ದಾರೆ....

ದೆಹಲಿ ಶಾಲೆಗಳಲ್ಲಿ RSS ಬೋಧನೆ: ಮಕ್ಕಳ ಎಳೆ ಮನಸ್ಸಲ್ಲಿ ಕೋಮುದ್ವೇಷ ಬಿತ್ತುವ ಹುನ್ನಾರ!

ಕೋಮುವಾದಿ, ಕೋಮುದ್ವೇಷಿ, ಸಮಾಜಘಾತುಕ ಸಂಘಟನೆಯ ಬಗ್ಗೆ ಶಾಲೆಗಳಲ್ಲಿ ಬೋಧಿಸುವುದು ಎಳೆ ಮನಸ್ಸುಗಳಲ್ಲಿ...

Download Eedina App Android / iOS

X