ಬೀದರ್‌ | ಕಳವು ಪ್ರಕರಣ: 75.13 ಲಕ್ಷ ರೂ. ಮೌಲ್ಯದ ವಸ್ತುಗಳು ಜಪ್ತಿ; 36 ಆರೋಪಿಗಳ ಬಂಧನ

Date:

Advertisements
ಬೀದರ ಜಿಲ್ಲೆಯ 8 ಪೊಲೀಸ್ ಠಾಣೆಗಳಲ್ಲಿ ದಾಖಲಾದ ವಿವಿಧ 30 ಪ್ರಕರಣಗಳಲ್ಲಿ ಭಾಗಿಯಾದ 36 ಜನ ಆರೋಪಿತರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್.ಹೇಳಿದರು.
ಶನಿವಾರ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,”ಬಂಧಿತ ಆರೋಪಿಗಳಿಂದ ಒಟ್ಟು 75.13 ಲಕ್ಷ ರೂ. ಮೌಲ್ಯದ ವಸುಗಳನ್ನು ಜಪ್ತಿ ಮಾಡಿ ಆರೋಪಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ” ಎಂದರು.
ಜಿಲ್ಲೆಯ ಜನವಾಡಾ ಪೊಲೀಸ್ ಠಾಣೆ, ನೂತನ ನಗರ ಪೊಲೀಸ್ ಠಾಣೆ, ಗಾಂಧಿ ಗಂಜ್ ಪೊಲೀಸ್ ಠಾಣೆ, ಹುಮನಾಬಾದ ಪೊಲೀಸ್ ಠಾಣೆ, ಚಿಟಗುಪ್ಪಾ ಪೊಲೀಸ್ ಠಾಣೆ, ಬಸವಕಲ್ಯಾಣ ನಗರ ಪೊಲೀಸ್ ಠಾಣೆ, ಹುಲಸೂರ ಪೊಲೀಸ್ ಠಾಣೆ, ಭಾಲ್ಕಿ ನಗರ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಪ್ರಕರಣಗಳನ್ನು ಬೇಧಿಸಿ ಅಂದಾಜು 26.77 ಲಕ್ಷ ರೂ. ಮೌಲ್ಯದ 495 ಗ್ರಾಂ.ಬಂಗಾರ, 18,600 ರೂ. ಮೌಲ್ಯದ 330 ಗ್ರಾಂ. ಬೆಳ್ಳಿ, 34,400 ರೂ. ನಗದು ಹಣ, 1 ಮೊಬೈಲ್, 10 ದ್ವಿಚಕ್ರ ವಾಹನ ಮತ್ತು 02 ನಾಲ್ಕು ಚಕ್ರದ ವಾಹನಗಳು ಸೇರಿದಂತೆ ಸೆಂಟ್ರೀಂಗ್ ಪ್ಲೇಟ್‌, ಪ್ರಿಂಟ್ ಸೂಟ್ ಬಟ್ಟೆ, ನೀರಿನ ಪಂಪ್‌ಸೆಟ್, ಮೈಕ್ ಸೇಟ್, ಸೌಂಡ ಮಿಕ್ಸರ್ ಸೇರಿ ಒಟ್ಟು 75.13 ಬೆಲೆಯುಳ್ಳ ಸ್ವತ್ತನ್ನು ಜಪ್ತಿ ಮಾಡಿ ಒಟ್ಟು 36 ಜನ ಆರೋಪಿತರನ್ನು ಬಂಧಿಸಲಾಗಿದೆ ಎಂದು ಮಾಹಿತಿ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಹೇಶ ಮೇಘಣ್ಣನವರ, ಚಂದ್ರಕಾಂತ ಪೂಜಾರಿ, ಬೀದರ್‌ ಡಿವೈಎಸ್‌ಪಿ ಶಿವಣ್ಣಗೌಡ ಪಾಟೀಲ, ಹುಮನಾಬಾದ ಡಿವೈಎಸ್‌ಪಿ ಸೇರಿದಂತೆ ವಿವಿಧ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

ತುಮಕೂರು | ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ : ಡಿಕೆಶಿ ವಿರುದ್ಧ ಕೆ. ಎನ್ ರಾಜಣ್ಣ ವಾಗ್ದಾಳಿ

ಡಿ.ಕೆ.ಶಿವಕುಮಾ‌ರ್ ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ ಹಾಡಿದ ಬಗ್ಗೆ  ಮಾಜಿ ಸಚಿವ ಕೆ...

Download Eedina App Android / iOS

X