ಬೆಂಗಳೂರು | 15 ದಿನದ ಮಗುವಿಗೆ ‘ಹಾರ್ಟ್ ಆಪರೇಷನ್’ ಮಾಡಿ ಯಶಸ್ವಿಯಾದ ಸರ್ಕಾರಿ ಆಸ್ಪತ್ರೆ ವೈದ್ಯರು

Date:

Advertisements

ರಾಜ್ಯ ರಾಜಧಾನಿ ಬೆಂಗಳೂರಿನ ಇಂದಿರಾ ಗಾಂಧಿ ಮಕ್ಕಳ ಆಸ್ಪತ್ರೆಯಲ್ಲಿ 15 ದಿನದ ಎಳೆ ಮಗುವಿಗೆ ವೈದ್ಯರು ‘ಹಾರ್ಟ್ ಆಪರೇಷನ್’ (ಹೃದಯ ಶಸ್ತ್ರಚಿಕಿತ್ಸೆ) ಮಾಡಿದ್ದು, ಚಿಕಿತ್ಸೆ ಯಶಸ್ವಿಯಾಗಿದೆ.

15 ದಿನದ ಎಳೆಯ ಕಂದ ಹೃದಯ ಸಮಸ್ಯೆಯಿಂದ ಬಳಲುತ್ತಿತ್ತು. ಈ ಹಿನ್ನೆಲೆ, ಪೋಷಕರು ಮಗುವನ್ನು ಇಂದಿರಾ ಗಾಂಧಿ ಮಕ್ಕಳ ಆಸ್ಪತ್ರೆಗೆ ದಾಖಲು ಮಾಡಿದ್ದರು.

ಆರು ತಿಂಗಳಿಗೆ ಮಗುವಿನ ಜನನವಾಗಿತ್ತು. ಅಲ್ಲದೇ, ಮಗುವಿನ ಹೃದಯದಲ್ಲಿ ರಂಧ್ರವಿದ್ದ ಕಾರಣ ಉಸಿರಾಟಕ್ಕೆ ತೊಂದರೆಯಾಗಿತ್ತು. ಮಗುವನ್ನು ಹುಟ್ಟಿದಾಗಿನಿಂದಲೇ ವೆಂಟಿಲೇಶನ್‌ನಲ್ಲಿ ಇರಿಸಲಾಗಿತ್ತು. ಮಗು ಬದುಕುವುದೇ ಕಷ್ಟಕರ ಎಂದು ಪೋಷಕರು ಹೆದರಿದ್ದರು. ಮಗುವನ್ನು ಉಳಿಸಿಕೊಳ್ಳಲು ಪೋಷಕರು ಹಲವು ಆಸ್ಪತ್ರೆಗಳಿಗೆ ಸುತ್ತಾಟ ನಡೆಸಿ, ಕೊನೆಗೆ ಇಂದಿರಾ ಗಾಂಧಿ ಆಸ್ಪತ್ರೆಗೆ ದಾಖಲು ಮಾಡಿದ್ದರು.

Advertisements

ಸದ್ಯ, ಮಗುವಿನ ಹೃದಯ ಸಮಸ್ಯೆಗೆ ಪಿಡಿಎ ಲೈಗೇಷನ್ ಸರ್ಜರಿ ಮಾಡಿರುವ ವೈದ್ಯರು, ಮಗುವಿನ ಜೀವ ಉಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ದರ್ಶನ್ ಪ್ರಕರಣ | ತನಿಖಾಧಿಕಾರಿಯಾಗಿ ಗಿರೀಶ್ ನಾಯ್ಕ್ ಮರು ನೇಮಕ

“ಮಗುವಿನ ಸಮಸ್ಯೆ ಬಗ್ಗೆ ಖಾಸಗಿ ಆಸ್ಪತ್ರೆಯಲ್ಲಿ ಕೇಳಿದಾಗ ₹30 ಲಕ್ಷ ಖರ್ಚಾಗುತ್ತದೆ ಎಂದಿದ್ದರು. ಈಗ ಇಂದಿರಾ ಗಾಂಧಿ ಆಸ್ಪತ್ರೆಯಲ್ಲಿ ಕೇವಲ ₹7 ಸಾವಿರಕ್ಕೆ ಸರ್ಜರಿ ಮಾಡಿದ್ದಾರೆ. ಈ ಹಿಂದೆ ಸರ್ಕಾರಿ ಆಸ್ಪತ್ರೆ ಮೇಲೆ ಅಷ್ಟೊಂದು ನಂಬಿಕೆ ಇರಲಿಲ್ಲ. ಇದೀಗ, ತುಂಬಾ ಖುಷಿಯಾಯಿತು. ಮಗುವನ್ನ ಆಸ್ಪತ್ರೆಯ ಕರೆದುಕೊಂಡು ಬಂದಾಗ 800 ಗ್ರಾಂ ಇತ್ತು. ಸರ್ಕಾರಿ ಆಸ್ಪತ್ರೆಯಲ್ಲಿ ಬಡವರ ಜೀವ ಉಳಿಯುತ್ತೆ‌ ಎನ್ನುವ ನಂಬಿಕೆ ಜಾಸ್ತಿಯಾಗಿದೆ” ಎಂದು ಮಗುವಿನ ಪೋಷಕರು ಸಂತಸ ವ್ಯಕ್ತಪಡಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

Download Eedina App Android / iOS

X