ದೆಹಲಿಯಲ್ಲಿ ತೀವ್ರ ನೀರಿನ ಬಿಕ್ಕಟ್ಟಿನ ನಡುವೆ ಬಿಜೆಪಿಯ ಮಹಿಳಾ ಪ್ರತಿಭಟನಾಕಾರರು ಚತ್ತರ್ಪುರದಲ್ಲಿರುವ ದೆಹಲಿ ಜಲ ಮಂಡಳಿ (ಡಿಜೆಬಿ) ಕಚೇರಿಯನ್ನು ಧ್ವಂಸಗೊಳಿಸಿದ್ದಾರೆ. ದೆಹಲಿಯಲ್ಲಿ ತಾಪಮಾಣ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದ್ದು ನೀರಿನ ಸಮಸ್ಯೆಯೂ ಕೂಡಾ ಕಾಣಿಸಿಕೊಂಡಿದೆ. ಈ ನಡುವೆ ಭಾನುವಾರ ನೀರು ನಿರ್ವಹಣಾ ಸಂಸ್ಥೆಯ ಮೇಲೆ ಬಿಜೆಪಿ ಕಾರ್ಯಕರ್ತರು ದಾಳಿ ನಡೆಸಿದ್ದಾರೆ.
ನೀರಿನ ಸಮಸ್ಯೆ ಸಂಬಂಧಿ ಎಎಪಿ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಿದ್ದು, ಎಎಪಿ ವಿರುದ್ಧ ವಾಗ್ದಾಳಿ ನಡೆಸಿದ ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್ದೇವ, ಅರವಿಂದ್ ಕೇಜ್ರಿವಾಲ್ ಮುಖ್ಯಮಂತ್ರಿಯಾದಾಗ ದೆಹಲಿ ಜಲ ಮಂಡಳಿ ಕೋಟ್ಯಂತರ ರೂಪಾಯಿ ಲಾಭದಲ್ಲಿತ್ತು ಎಂದು ಹೇಳಿದ್ದಾರೆ.
ಇದನ್ನು ಓದಿದ್ದೀರಾ? ದೆಹಲಿ ಜಲ ವಿವಾದ | ನಮ್ಮಲ್ಲಿ ಸಾಕಷ್ಟು ನೀರಿಲ್ಲ; ಸುಪ್ರೀಂಗೆ ಹಿಮಾಚಲ ಸರ್ಕಾರ ಮಾಹಿತಿ
“ಕೇಜ್ರಿವಾಲ್ ಅವರಿಗೆ ಒಂದು ವರ್ಷಕ್ಕೂ ಹೆಚ್ಚು ಕಾಲ ಡಿಜೆಬಿ ಅಧ್ಯಕ್ಷರಾಗಿ ಅಧಿಕಾರ ನೀಡಲಾಗಿದೆ. ಒಂದು ವರ್ಷಕ್ಕೂ ಹೆಚ್ಚಿನ ಆಡಿಟ್ ವರದಿ ಕಾಣೆಯಾಗಿದೆ. ಡಿಜೆಬಿ ಭಾರಿ ಸಾಲದಲ್ಲಿದೆ ಎಂಬುದು ವಿಚಿತ್ರ. ಎಎಪಿಯ ಎಲ್ಲ ಸಚಿವರು ದೆಹಲಿಯಲ್ಲಿ ನೀರು ಕದಿಯುತ್ತಿದ್ದಾರೆ, ಟ್ಯಾಂಕರ್ ಮಾಫಿಯಾ ಮಾಡುತ್ತಿದ್ದಾರೆ” ಎಂದು ಆರೋಪಿಸಿದರು.
They jailed Arvind Kejriwal and they even tried to kill him. Look at their HATRED.
BJP Goons destroying Delhi Jal Board Office; pic.twitter.com/VfaraaO44f
— Dr Ranjan (@AAPforNewIndia) June 16, 2024
ಇನ್ನು ನೀರಿನ ಪೈಪ್ಲೈನ್ಗಳನ್ನು ಕಾಪಾಡುವಂತೆ ದೆಹಲಿ ಸಚಿವೆ ಅತಿಶಿ ಪೊಲೀಸರಿಗೆ ಮನವಿ ಮಾಡಿದ್ದಾರೆ. ದೆಹಲಿ ಜಲ ಸಚಿವೆ ಅತಿಶಿ ಭಾನುವಾರ ಪೊಲೀಸ್ ಕಮಿಷನರ್ ಸಂಜಯ್ ಅರೋರಾ ಅವರಿಗೆ ಪತ್ರ ಬರೆದಿದ್ದಾರೆ. ಮುಂದಿನ 15 ದಿನಗಳವರೆಗೆ ಪ್ರಮುಖ ಪೈಪ್ಲೈನ್ಗಳಲ್ಲಿ ಗಸ್ತು ತಿರುಗುವಂತೆ, ರಕ್ಷಣಾ ಸಿಬ್ಬಂದಿಗಳನ್ನು ನಿಯೋಜಿಸುವಂತೆ ವಿನಂತಿಸಿದ್ದಾರೆ.
“ಯಮುನಾದಲ್ಲಿ ನೀರಿನ ಕೊರತೆಯಿಂದಾಗಿ, ನೀರಿನ ಉತ್ಪಾದನೆಯು ಸುಮಾರು 70 ಎಂಜಿಡಿಯಷ್ಟು ಕುಸಿದಿದೆ. ದೆಹಲಿಯ ಅನೇಕ ಭಾಗಗಳು ನೀರಿನ ಕೊರತೆಯನ್ನು ಅನುಭವಿಸುತ್ತಿವೆ. ಈ ಪರಿಸ್ಥಿತಿಯಲ್ಲಿ, ಪ್ರತಿ ಹನಿ ನೀರು ಅಮೂಲ್ಯವಾಗುತ್ತದೆ” ಎಂದು ಪತ್ರದಲ್ಲಿ ತಿಳಿಸಲಾಗಿದೆ.