ತೆಲಂಗಾಣ | ಮದರಸಾ ಮೇಲೆ ದಾಳಿ; ನಾಲ್ವರಿಗೆ ಗಾಯ

Date:

Advertisements

ತೆಲಂಗಾಣದ ಮೇಡಕ್‌ ಜಿಲ್ಲೆಯಲ್ಲಿ ಶನಿವಾರ ರಾತ್ರಿ ಬಲಪಂಥೀಯ ಗುಂಪು ಮದರಸಾ ಮೇಲೆ ದಾಳಿ ನಡೆಸಿದ ಪರಿಣಾಮ ನಾಲ್ವರು ಗಾಯಗೊಂಡಿದ್ದಾರೆ. ವರದಿಗಳ ಪ್ರಕಾರ ಮಿನಜ್‌ ಉಲ್‌ ಮದರಸಾ ಬಕ್ರೀದ್‌ ಪ್ರಯುಕ್ತ ಜಾನುವಾರುಗಳನ್ನು ಸಾಗಣೆ ಮಾಡುತ್ತಿದೆ ಎಂಬ ಆರೋಪದ ಮೇಲೆ ವಾಹನವನ್ನು ತಡೆದಾಗ ಎರಡು ಗುಂಪುಗಳ ನಡುವೆ ಕಲ್ಲುಗಳ ತೂರಾಟ ಶುರುವಾಗಿದೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ.

ಮದರಸಾ ಮೇಲೆ ದಾಳಿ ನಡೆದಿದೆ ಎಂಬ ಸುದ್ದಿ ಹರಡಿದ ಒಂದು ಗಂಟೆಯಲ್ಲಿ ಮತ್ತೊಂದು ಗುಂಪು ಜಮಾವಣೆಗೊಂಡಿದೆ. ದೊಣ್ಣೆಗಳನ್ನು ಹಿಡಿದು ಜೈ ಶ್ರೀರಾಮ್‌ ಎಂದು ಘೋಷಣೆ ಕೂಗುತ್ತ ಹೋಗುತ್ತಿದ್ದ ಗುಂಪು ಕಾರುಗಳು ಹಾಗೂ ಇತರ ಸ್ವತ್ತುಗಳ ಮೇಲೆ ದಾಳಿ ನಡೆಸಿದೆ. ದಾಳಿಯ ಸಂದರ್ಭದಲ್ಲಿ ಮದರಸಾದಲ್ಲಿದ್ದ ಹಲವರಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಬಲಪಂಥೀಯ ಗುಂಪು ಚಿಕಿತ್ಸೆ ಪಡೆಯುತ್ತಿದ್ದ ಆಸ್ಪತ್ರೆಯ ಮೇಲೂ ದಾಳಿ ನಡೆಸಿದೆ. ಗಲಭೆ ತೀವ್ರಗೊಂಡ ನಂತರ ಗುಂಪನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿಯಾಗಿ ಪವನ್ ಕಲ್ಯಾಣ್ ನೇಮಕ

Advertisements

ಮೇಡಕ್‌ ಎಸ್‌ಪಿ ಬಿ ಬಾಲ ಸ್ವಾಮಿ ಮಾತನಾಡಿ, ಘಟನೆಗೆ ಸಂಬಂಧಿಸಿದಂತೆ 8 ಮಂದಿಯನ್ನು ಬಂಧಿಸಲಾಗಿದ್ದು, ಅವರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಘಟನೆಗೆ ರಾಜಕೀಯ ಸಂಬಂಧವಿದೆಯೆ ಎಂಬುದು ದೃಢಪಟ್ಟಿಲ್ಲ. ಗಲಭೆಗಳಿಗೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.

ಎಐಎಂಐಎಂ ಅಧ್ಯಕ್ಷ ಅಸಾದ್ದುದೀನ್‌ ಓವೈಸಿ ಅವರು ತೆಲಂಗಾಣ ಡಿಜಿಪಿ ರವಿ ಗುಪ್ತ ಅವರೊಂದಿಗೆ ಮಾತನಾಡಿ ಘಟನೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಗಲಭೆ ಉಂಟಾಗಲು ಹಿಂದೂ ವಾಹಿನಿ ಹಾಗೂ ಬಿಜೆಪಿ ಕಾರಣರಾಗಿದ್ದು, ಮುಸ್ಲಿಂ ಸಮುದಾಯದವರಿಗೆ ಸೇರಿದ ಆಸ್ತಿಪಾಸ್ತಿಗಳ ಮೇಲೆ ಗುಂಪು ದಾಳಿ ನಡೆಸುತ್ತಿದೆ ಎಂದು ಕಾರವಾನ್‌ ಶಾಸಕ ಕಸೂರ್‌ ಮೋಹಿದ್ದೀನ್‌ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ 144 ಸೆಕ್ಷನ್‌ ಜಾರಿಗೊಳಿಸಲಾಗಿದ್ದು,ಪೊಲೀಸರು ಪ್ರದೇಶದ ಸುತ್ತಲು ಗಸ್ತು ತಿರುಗುತ್ತಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

Download Eedina App Android / iOS

X