ತೆಲಂಗಾಣ | 12 ಬಿಆರ್‌ಎಸ್ ಶಾಸಕರು ಕಾಂಗ್ರೆಸ್ ಸೇರುವ ಸಾಧ್ಯತೆ

Date:

Advertisements

ಜುಲೈ ಎರಡನೇ ವಾರದಲ್ಲಿ ತೆಲಂಗಾಣ ಸರ್ಕಾರ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಲು ಸಿದ್ದತೆ ನಡೆಸುತ್ತಿದೆ. ಇದಕ್ಕೂ ಮುನ್ನ 12 ಬಿಆರ್‌ಎಸ್‌ ಶಾಸಕರು ಕಾಂಗ್ರೆಸ್‌ಗೆ ಪಕ್ಷಾಂತರವಾಗುವ ಸಾಧ್ಯತೆ ಇದೆ. ಲೋಕಸಭೆ ಚುನಾವಣೆಗೂ ಮುನ್ನ ಮೂವರು ಬಿಆರ್‌ಎಸ್‌ ಶಾಸಕರನ್ನು ಪಕ್ಷಕ್ಕೆ ಸೇರಿಸಿಕೊಂಡಿದ್ದ ಆಡಳಿತಾರೂಢ ಕಾಂಗ್ರೆಸ್‌, ಇದೀಗ 12 ಶಾಸಕರ ಜೊತೆ ಚರ್ಚೆ ನಡೆಸುತ್ತಿದೆ ಎಂದು ವರದಿಯಾಗಿದೆ.

ಇತ್ತೀಚಿಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ತೆಲಂಗಾಣದ 17 ಸ್ಥಾನಗಳ ಪೈಕಿ ಎಂಟು ಸ್ಥಾನಗಳನ್ನು ಗೆದ್ದಿರುವ ಬಿಜೆಪಿಯಿಂದ ಬೆದರಿಕೆ ಇದೆ. ಅವರು ತೆಲಂಗಾಣದಲ್ಲಿ ಕಾಂಗ್ರೆಸ್‌ ಸರ್ಕಾರವನ್ನು ಪತನಗೊಳಿಸುವ ಮಾತನಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕರೊಬ್ಬರು ಆರೋಪಿಸಿದ್ದಾರೆ. ಅಲ್ಲದೆ, ಮಾಜಿ ಸಚಿವರು ಸೇರಿದಂತೆ ಬಿಆರ್‌ಎಸ್‌ನ ಕೆಲವು ಶಾಸಕರು ತಮ್ಮ ವ್ಯಾಪಾರ-ವಹಿವಾಟುಗಳನ್ನು ರಕ್ಷಿಸಲು ಮತ್ತು ಕೇಂದ್ರೀಯ ಸಂಸ್ಥೆಗಳ ದಾಳಿಯಿಂದ ತಪ್ಪಿಸಿಕೊಳ್ಳಲು ಬಿಜೆಪಿಗೆ ಸೇರುವ ಬಗ್ಗೆ ಯೋಚಿಸುತ್ತಿದ್ದಾರೆ ಎಂದೂ ಅವರು ಹೇಳಿದ್ದಾರೆ. ಈ ನಡುವೆ, ಕಾಂಗ್ರೆಸ್‌ ಆಪರೇಷನ್ ಆಕರ್ಷ್‌ಅನ್ನು ಆರಂಭಿಸಿದೆ ಎನ್ನಲಾಗಿದೆ. ದೆ.

ಬಿಆರ್‌ಎಸ್‌ ವರಿಷ್ಠ ಕೆ ಚಂದ್ರಶೇಖರ್ ರಾವ್ ಅವರ ನಿರ್ದೇಶನದಂತೆ ಪ್ರಮುಖ ಬಿಆರ್‌ಎಸ್ ನಾಯಕರು ತಮ್ಮ ಶಾಸಕರ ನಿವಾಸಗಳಿಗೆ ಭೇಟಿ ನೀಡಿ ಮನವೊಲಿಸಲು ಪ್ರಯತ್ನಿಸುತ್ತಿದ್ದಾರೆ. ಈವರೆಗೆ, ನಾಲ್ವರು ಶಾಸಕರೊಂದಿಗೆ ಮಾತನಾಡಿದ್ದು, ಮುಂದಿನ ಚುನಾವಣೆಯಲ್ಲಿ ಬಿಆರ್‌ಎಸ್ ಅಧಿಕಾರಕ್ಕೆ ಬರಲಿದೆ ಎಂದು ಭರವಸೆ ನೀಡಿದ್ದಾರೆ ಎನ್ನಲಾಗಿದೆ. ಆದರೆ, ಶಾಸಕರು ಕಳೆದ 10 ವರ್ಷಗಳಿಂದ ತಮ್ಮ ಕ್ಷೇತ್ರಗಳಿಗೆ ಸರ್ಕಾರದಿಂದ ಯಾವುದೇ ಹಣಕಾಸಿನ ನೆರವು ಪಡೆದಿಲ್ಲ ಎಂದು ಪ್ರತಿಕ್ರಿಯಸಿದ್ದಾರೆ ಎಂದು ವರದಿಯಾಗಿದೆ.

Advertisements

ಕೆಸಿಆರ್ ಕ್ಯಾಬಿನೆಟ್‌ನಲ್ಲಿ ಸಚಿವರಾಗಿಯೂ ಸೇವೆ ಸಲ್ಲಿಸಿದ್ದ ಹಿರಿಯ ಬಿಆರ್‌ಎಸ್ ಶಾಸಕರೊಬ್ಬರು, ಪಕ್ಷದ ನಾಯಕತ್ವವು ಅವರ ಬೆಂಬಲಿಗರಿಗೆ ಯಾವುದೇ ನೆರವು ನೀಡಿಲ್ಲ. ಹೀಗಾಗಿ, ಕಾಂಗ್ರೆಸ್‌ ಸೇರಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ.

ಸಿಎಂ ಎ ರೇವಂತ್ ರೆಡ್ಡಿ ಅವರ ಆಪ್ತರಾಗಿರುವ ಪಕ್ಷದ ಮುಖಂಡರೊಬ್ಬರು ಬಿಆರ್‌ಎಸ್ ಶಾಸಕರೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ.

2023ರ ವಿಧಾನಸಭಾ ಚುನಾವಣೆಯಲ್ಲಿ ಬಿಆರ್‌ಎಸ್‌ 39 ಸ್ಥಾನಗಳನ್ನು ಗೆದ್ದಿತ್ತು. ಬಿಆರ್‌ಎಸ್ ಶಾಸಕರೊಬ್ಬರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದು, ಉಪಚುನಾವಣೆಯಲ್ಲಿ ಆ ಕ್ಷೇತ್ರವನ್ನು ಕಾಂಗ್ರೆಸ್ ತನ್ನ ಪಾಲಿಗೆ ಪಡೆದುಕೊಂಡಿತು. ಮೂವರು ಶಾಸಕರು ಈಗಾಗಲೇ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದರೆ, ಇನ್ನೂ 12 ಮಂದಿ ಶೀಘ್ರದಲ್ಲೇ ಸೇರುವ ಸಾಧ್ಯತೆಯಿದೆ. ಪಕ್ಷಾಂತರಿಗಳ ಸಂಖ್ಯೆ ಒಟ್ಟು 15ಕ್ಕೆ ಏರಿಕೆಯಾಗಲಿದೆ. ಪಕ್ಷಾಂತರ ನಿಷೇಧ ಕಾಯ್ದೆಯ ನಿಯಮಗಳಿಂದ ತಪ್ಪಿಸಿಕೊಳ್ಳಲು ಕಾಂಗ್ರೆಸ್‌ ಇನ್ನೂ 10 ಬಿಆರ್‌ಎಸ್‌ ಶಾಸಕರನ್ನು ಪಕ್ಷಕ್ಕೆ ಕರೆತರಬೇಕಾಗುತ್ತದೆ. ಅದನ್ನೂ ಮಾಡಲು ಪಕ್ಷವು ಚಿಂತಿಸಿದೆ ಎನ್ನಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X