ಕಾಂಚನಜುಂಗಾ ಎಕ್ಸ್‌ಪ್ರೆಸ್ ಅಪಘಾತ: ಬಕ್ರೀದ್ ಸಂಭ್ರಮಾಚರಣೆ ಮರೆತು ಪ್ರಯಾಣಿಕರ ರಕ್ಷಣೆಗಿಳಿದ ಮುಸ್ಲಿಮರು

Date:

Advertisements

ಪಶ್ಚಿಮ ಬಂಗಾಳದ ಐಕಾನಿಕ್ ಗಿರಿಧಾಮ ಡಾರ್ಜಿಲಿಂಗ್ ಬಳಿ ನಡೆದ ಕಾಂಚನಜುಂಗಾ ಎಕ್ಸ್‌ಪ್ರೆಸ್ ರೈಲು ಅಪಘಾತದಲ್ಲಿ ಈವರೆಗೆ ಕನಿಷ್ಠ 15 ಜನರು ಸಾವನ್ನಪ್ಪಿದ್ದಾರೆ. 60ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಈ ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳೀಯ ಜನರು ಈದ್ ಆಚರಣೆಯನ್ನು ಮರೆತು ಜೀವ ಉಳಿಸುವ ಕಾಯಕದಲ್ಲಿ ತೊಡಗಿದ್ದರು.

ಸೋಮವಾರ ಈದ್-ಅಲ್-ಅಧಾ (ಬಕ್ರೀದ್) ಹಬ್ಬವನ್ನು ಎಲ್ಲೆಡೆ ಆಚರಿಸಲಾಗಿದೆ. ಆದರೆ, ಕಾಂಚನಜುಂಗಾ ಎಕ್ಸ್‌ಪ್ರೆಸ್ ಅಪಘಾತ ನಡೆದ ಸ್ಥಳದಲ್ಲಿ ಎಂಡಿ ಶಾಹಿಬ್, ಎಂಡಿ ರಾಜು, ಮೊಹಮ್ಮದ್ ಮೊಮಿರುಲ್‌ರಂತಹ ಅದೆಷ್ಟೋ ಮಂದಿ ಈದ್ ಆಚರಣೆಯನ್ನು ಮರೆತು ರಕ್ಷಣೆ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

ನಿರ್ಮಲ್ ಜೋಟೆ ಗ್ರಾಮದ 150ಕ್ಕೂ ಹೆಚ್ಚು ನಿವಾಸಿಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು. ಬಕ್ರೀದ್ ಹಬ್ಬದ ಸಂಭ್ರಮಾಚರಣೆ ಮರೆತು ಗ್ರಾಮಸ್ಥರು ಪ್ರಯಾಣಿಕರನ್ನು ರಕ್ಷಿಸಲು ಮತ್ತು ಗಾಯಾಳುಗಳಿಗೆ ಸಹಾಯ ಮಾಡಲು ಧಾವಿಸಿದರು. ಆಂಬ್ಯುಲೆನ್ಸ್ ಇಲ್ಲದ ಕಾರಣ ಹಲವರು ತಮ್ಮ ಸ್ವಂತ ವಾಹನಗಳಲ್ಲಿ ಪ್ರಯಾಣಿಕರನ್ನು ಸಮೀಪದ ಆಸ್ಪತ್ರೆಗಳಿಗೆ ಕರೆದೊಯ್ದಿದ್ದಾರೆ. ಇನ್ನು ಸಣ್ಣ ಪುಟ್ಟ ಗಾಯಗೊಂಡ ಪ್ರಯಾಣಿಕರು ಸ್ಥಳೀಯರ ಮನೆಯಲ್ಲಿಯೇ ಆಶ್ರಯ ಪಡೆದುಕೊಂಡು, ಚೇತರಿಸಿಕೊಳ್ಳುತ್ತಿದ್ದಾರೆ.

Advertisements

ಇದನ್ನು ಓದಿದ್ದೀರಾ?  ಬಂಗಾಳದಲ್ಲಿ ರೈಲುಗಳ ನಡುವೆ ಭೀಕರ ಅಪಘಾತ: 15 ಸಾವು, 60 ಗಾಯ

ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಮೊಹಮ್ಮದ್ ಮೊಮಿರುಲ್‌, “ನಾನು ನಮಾಜ್ ಸಲ್ಲಿಸಿದ ನಂತರ ಹಿಂದಿರುಗಿದ್ದೆ. ಮನೆಯಲ್ಲಿ ಎಲ್ಲರೂ ಸಂಭ್ರಮದಲ್ಲಿದ್ದರು. ಇದ್ದಕ್ಕಿದ್ದಂತೆ ದೊಡ್ಡ ಶಬ್ದ ಕೇಳಿಸಿತು. ಕೂಡಲೇ ಮನೆಯ ಸಮೀಪವಿರುವ ರೈಲು ಹಳಿಗಳ ಕಡೆಗೆ ಧಾವಿಸಿದರೆ ಅಪಘಾತ ಸಂಭವಿಸಿರುವುದು ತಿಳಿಯಿತು. ಗೂಡ್ಸ್ ರೈಲಿನ ಲೋಕೋ ಪೈಲಟ್ ಪ್ಯಾಸೆಂಜರ್ ರೈಲಿನ ಚಕ್ರದಲ್ಲಿ ಸಿಲುಕಿರುವುದು ನೋಡಿದೆ. ನಾನು ಆತನ ರಕ್ಷಣೆ ಮಾಡಲು ಹೋಗುವಾಗ ಆತ ಸಾವನ್ನಪ್ಪಿದ” ಎಂದು ತನ್ನ ಕಣ್ಣೆದುರೇ ನಡೆದ ಬೆಚ್ಚಿ ಬೀಳಿಸುವ ಘಟನೆಯನ್ನು ವಿವರಿಸಿದ್ದಾರೆ.

ಪ್ರತ್ಯಕ್ಷದರ್ಶಿಗಳ ಪ್ರಕಾರ, ಪೊಲೀಸರು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಮತ್ತು ವಿಪತ್ತು ನಿರ್ವಹಣಾ ತಂಡಗಳು ಒಂದು ಗಂಟೆಗೂ ಅಧಿಕ ಸಮಯ ಕಳೆದ ನಂತರ ಸ್ಥಳಕ್ಕೆ ತಲುಪಿದೆ. ರಕ್ಷಣಾ ತಂಡ ತಲುಪುವ ಮುನ್ನವೇ ರಕ್ಷಣಾ ಕಾರ್ಯಚರಣೆಗಳನ್ನು ಸ್ಥಳೀಯರು ಮಾಡಿದ್ದಾರೆ.

ಇದನ್ನು ಓದಿದ್ದೀರಾ?  ಕಳೆದ 3 ದಶಕಗಳಲ್ಲಿ ದೇಶದಲ್ಲಿ ಸಂಭವಿಸಿದ 7 ಭೀಕರ ರೈಲು ಅಪಘಾತಗಳ ವಿವರ

“ನಮ್ಮ ನಮಾಜ್ ಪೂರ್ಣವಾಗುತ್ತಿದ್ದಂತೆ ಜೋರಾದ ಸದ್ದು ಕೇಳಿತು. ನಾವು ರೈಲು ಹಳಿಯತ್ತ ಓಡಿದೆವು. ನಾವು ಒಬ್ಬೊಬ್ಬರನ್ನು ರಕ್ಷಿಸಿ ಆಸ್ಪತ್ರೆಗೆ ಕರೆದೊಯ್ದೆವು. ಒಟ್ಟು 8 ಮೃತ ದೇಹವನ್ನು ನಾವು ಹೊರತೆಗೆದಿದ್ದೇವೆ. 30-35ರಷ್ಟು ಗಾಯಾಳುಗಳನ್ನು ರಕ್ಷಣೆ ಮಾಡಿದ್ದೇವೆ” ಎಂದು ಸ್ಥಳೀಯರು ಹೇಳಿದ್ದಾರೆ.

“ನಾನು ಹಬ್ಬಕ್ಕೆ ತಯಾರಾಗುತ್ತಿದ್ದಾಗ ಅಪಘಾತದ ಸುದ್ದಿ ನನಗೆ ತಿಳಿದು ಸ್ಥಳಕ್ಕೆ ಧಾವಿಸಿದೆ. ವೃದ್ಧ ಮಹಿಳೆಯೊಬ್ಬರಿಗೆ ನಿಲ್ಲಲು ಕೂಡಾ ಸಾಧ್ಯವಾಗುತ್ತಿರಲಿಲ್ಲ. ನೀರಿಗಾಗಿ ಅವರು ಅಳುತ್ತಿರುವುದು ನೋಡಿದೆ. ಅವರಿಗೆ ಸಾಂತ್ವನಗೊಳಿಸಿದೆ. ನಂತರ ವೃದ್ಧೆಯ ಸಂಬಂಧಿಕರು ಸಿಲಿಗುರಿಯಿಂದ ಬಂದು ಅವರನ್ನು ಕರೆದುಕೊಂಡು ಹೋದರು” ಎಂದು ನಿವಾಸಿ ತಸ್ಲೀಮಾ ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X