ಪಾವೊ ನೂರ್ಮಿ ಅಥ್ಲೆಟಿಕ್ಸ್ ಕೂಟ: ಚಿನ್ನ ಗೆದ್ದ ಭಾರತದ ಜಾವೆಲಿನ್‌ ತಾರೆ ನೀರಜ್ ಚೋಪ್ರಾ

Date:

Advertisements

ಫಿನ್‌ಲ್ಯಾಂಡ್‌ನ ತುರ್ಕುನಲ್ಲಿ ಮಂಗಳವಾರ ನಡೆದ ಪಾವೊ ನೂರ್ಮಿ ಅಥ್ಲೆಟಿಕ್ಸ್ ಕೂಟದಲ್ಲಿ ವಿಶ್ವ ಚಾಂಪಿಯನ್ ಭಾರತದ ಜಾವೆಲಿನ್ ತಾರೆ ನೀರಜ್ ಚೋಪ್ರಾ ತಮ್ಮ ಚೊಚ್ಚಲ ಚಿನ್ನದ ಪದಕವನ್ನು ಗೆದ್ದಿದ್ದಾರೆ.

ಈ ಹಿಂದೆ 2022ರಲ್ಲಿ ಪಾವೊ ನೂರ್ಮಿ ಅಥ್ಲೆಟಿಕ್ಸ್‌ನಲ್ಲಿ ಚೋಪ್ರಾ ಬೆಳ್ಳಿ ಪದಕ ಗೆದ್ದಿದ್ದರು. ಆದರೆ ಈ ವರ್ಷ ನಡೆದ ಭಾರೀ ಪೈಪೋಟಿಯ ಸ್ಪರ್ಧೆಯಲ್ಲಿ ಕೊನೆಯಲ್ಲಿ 85.97 ಮೀಟರ್​ ಎಸೆತದ ಮೂಲಕ ನೀರಜ್ ಚೋಪ್ರಾ ಅಗ್ರಸ್ಥಾನವನ್ನು ಅಲಂಕರಿಸಿದ್ದಾರೆ.

ಆರಂಭದಲ್ಲಿ 83. 62 ಮೀ ಎಸೆದ ನೀರಜ್ ಮುನ್ನಡೆಯಲ್ಲಿದ್ದರು. ಆದರೆ ಎರಡನೇ ಸುತ್ತಿನ ನಂತರ ಫಿನ್‌ಲ್ಯಾಂಡ್‌ನ ಆಲಿವರ್ ಹೆಲಾಂಡರ್ 83.96 ಮೀಟರ್‌ ಎಸೆದು ಮೊದಲ ಸ್ಥಾನಕ್ಕೆ ಏರಿದ್ದರು.

Advertisements

ಇದನ್ನು ಓದಿದ್ದೀರಾ?  ಏಷ್ಯನ್ ಗೇಮ್ಸ್ | ಜಾವೆಲಿನ್‌ನಲ್ಲಿ ಚಿನ್ನಕ್ಕೆ ಗುರಿ ಇಟ್ಟ ನೀರಜ್ ಚೋಪ್ರಾ, ಕಿಶೋರ್ ಜೆನಾಗೆ ಬೆಳ್ಳಿ

ಮೂರನೇ ಪ್ರಯತ್ನದಲ್ಲಿ 85.97 ಮೀಟರ್ ಎಸೆಯುವ ಮೂಲಕ ಚೋಪ್ರಾ ಮುನ್ನಡೆ ಸಾಧಿಸಿದ್ದಾರೆ. ಮೂರನೇ ಪ್ರಯತ್ನದಲ್ಲಿ ಇತರ ಏಳು ಸ್ಪರ್ಧಿಗಳು ಕೂಡಾ ಚೋಪ್ರಾರನ್ನು ಹಿಂದಿಕ್ಕುವುದರಲ್ಲಿ ವಿಫಲರಾದರು.

ಇನ್ನು 84.19 ಮೀಟರ್ ಎಸೆದ ಟೋನಿ ಕೆರಾನೆನ್ ಬೆಳ್ಳಿ ಪದಕ ಪಡೆದಿದ್ದರೆ, 2022ರಲ್ಲಿ ಚಿನ್ನದ ಪದಕಕ್ಕೆ ತನ್ನ ಕೊರಳೊಡ್ಡಿದ್ದ ಒಲಿವರ್ ಹೆಲಾಂಡರ್ 83.96 ಮೀಟರ್ ಎಸೆದು ಮೂರನೇ ಸ್ಥಾನ ಗಳಿಸಿದ್ದಾರೆ.

ಪಾವೊ ನೂರ್ಮಿ ಗೇಮ್ಸ್ ನಂತರ ಮುಂದಿನ ಜುಲೈ 7ರಂದು ಪ್ಯಾರಿಸ್ ಡೈಮಂಡ್ ಲೀಗ್‌ನಲ್ಲಿ ನೀರಜ್ ಚೋಪ್ರಾ ಕಾಣಿಸಿಕೊಳ್ಳಲಿದ್ದಾರೆ.

 

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

Download Eedina App Android / iOS

X