ರಾಯಚೂರು | ಇಂಧನ ಬೆಲೆ ಹೆಚ್ಚಳ – ಸರ್ಕಾರದ ಆತುರದ ನಿರ್ಧಾರ: ಚಾಮರಸ ಮಾಲಿಪಾಟೀಲ್

Date:

Advertisements

ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಹೆಚ್ಚಿಸುವ ಮೂಲಕ ರಾಜ್ಯ ಸರ್ಕಾರ ಆತುರದ ನಿರ್ಧಾರ ಕೈಗೊಂಡಿದೆ. ಸರ್ಕಾರ ತನ್ನ ನಿರ್ಧಾರವನ್ನು ಮರು ಪರಿಶೀಲಿಸಬೇಕು ಎಂದು ಸರ್ವೋದಯ ಕರ್ನಾಟಕ ಪಕ್ಷದ ರಾಜ್ಯಾಧ್ಯಕ್ಷ ಚಾಮರಸ ಮಾಲಿಪಾಟೀಲ್ ಒತ್ತಾಯಿಸಿದ್ದಾರೆ.

ರಾಯಚೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. “ಇಂಧನ ಬೆಲೆ ಏರಿಕೆಯು ರೈತರಿಗೆ ನೇರವಾಗಿ ಹೊರೆಯಾಗುತ್ತಿದೆ. ಕೇಂದ್ರ ಸರ್ಕಾರ ಇಂಧನ ಬೆಲೆ ಹೆಚ್ಚಿಸಿದ್ದನ್ನು ವಿರೋಧಿಸಿದ್ದ ಕಾಂಗ್ರೆಸ್, ಈಗ ಇಂಧನ ಬೆಲೆ ಹೆಚ್ಚಿಸಲು ನಿರ್ಧಸಿದೆ. ಈಗಾಗಲೇ ಬೀಜ, ರಸಗೊಬ್ಬರ ಬೆಲೆ ಹೆಚ್ಚಾಗಿದೆ. ಈಗ ಇಂಧನ ಬೆಲೆ ಹೆಚ್ಚಳದಿಂದ ಉಳುಮೆ, ಕಟಾವು, ಸಾಗಾಣೆ ಬೆಲೆ ಹೆಚ್ಚಳವಾಗಲಿದೆ. ಕೃಷಿ ನಿರ್ವಹಣೆ ಹೆಚ್ಚು ಹೊರೆಯಾಗುತ್ತದೆ. ಕೂಡಲೇ ಆದೇಶವನ್ನು ಮರುಪರಿಶೀಲಿಸಬೇಕು” ಎಂದು ಆಗ್ರಹಿಸಿದರು.

“ವಾಲ್ಮೀಕಿ ಅಭಿವೃದ್ದಿ ನಿಗಮದಲ್ಲಿ 187 ಕೋಟಿ ರೂ. ಅವ್ಯವಹಾರ ನಡೆದಿದ್ದು, ತನಿಖೆ ನಡೆಯುತ್ತಿದೆ. ಭೂ ಒಡೆತನ ಯೋಜನೆಯಡಿ ಭೂಮಿ ಮಾರಿರುವ ಹಾಗೂ ಖರೀದಿಸಿರುವವರಿಗೆ ಅನುದಾನ ನೀಡಲು ಹಣವೇ ಇಲ್ಲ ಎಂದು ಹೇಳುತ್ತಿದ್ದ ನಿಗಮ, ಇಷ್ಟೊಂದು ದೊಡ್ಡ ಮೊತ್ತ ಉಳಿಸಿಕೊಂಡಿದ್ದು ಯಾಕಾಗಿ” ಎಂದು ಪ್ರಶ್ನಿಸಿದರು.

Advertisements

“ನಿಗಮದ ಅಧ್ಯಕ್ಷ ಬಸನಗೌಡ ದದ್ದಲ ಅಕ್ರಮ ಕುರಿತು ನನಗೇನೂ ಗೊತ್ತಿಲ್ಲ ಎನ್ನುತ್ತಿದ್ದಾರೆ. ನಿಗಮದ ಅಧ್ಯಕ್ಷರಾಗಿ ನಿಗಮದಲ್ಲಿ ಏನುನಡೆಯುತ್ತಿದೆ ಎಂಬುದು ಗೋತ್ತಿಲ್ಲದೇ ಇರುವದಿಲ್ಲ. ಎಸ್‌ಟಿ ಮೀಸಲಾತಿಯಿಂದಲೇ ಶಾಸಕರಾಗಿ, ಅಧ್ಯಕ್ಷರಾಗಿದ್ದು, ಅದೇ ಸಮುದಾಯಕ್ಕೆ ಅನ್ಯಾಯ ಮಾಡಿದ್ದರೂ ಸಮ್ಮನಿದ್ದಾರೆ. ಕೂಡಲೇ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಅವರು ರಾಜೀನಾಮೆ ನೀಡಬೇಕು” ಎಂದು ಆಗ್ರಹಿಸಿದರು.

ಕೃಷಿ ಇಲಾಖೆಯಲ್ಲಿ ಅನೇಕ ಅಕ್ರಮಗಳು ನಡೆಯುತ್ತಿವೆ. ಲಿಖಿತವಾಗಿ, ಮೌಖಿಕವಾಗಿ ಅನೇಕ ದೂರುಗಳನ್ನು ಕೊಟ್ಟರೂ ಯಾವುದೇ ಕ್ರಮ ಕೈಗೊಂಡಿಲ್ಲ. ಇಲಾಖೆ ಸಚಿವರು, ಕಾರ್ಯದರ್ಶಿಗಳು ಶಾಮೀಲಾಗಿರುವ ಶಂಕೆಯಿದ್ದು, ಕೂಡಲೇ ಮುಖ್ಯಮಂತ್ರಿಗಳು ಕೃಷಿ ಸಚಿವ ಚಲುವರಾಯಸ್ವಾಮಿ ಅವರನ್ನು ಸಂಪುಟದಿಂದ ಕೈಬಿಡಬೇಕು” ಎಂದು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಭಾಕರ ಪಾಟೀಲ್ ಇಂಗಳಧಾಳ, ಬೂದೆಯ್ಯ ಸ್ವಾಮಿ ಗಬ್ಬೂರು, ದೇವರಾಜನಾಯಕ, ಮಲ್ಲನಗೌಡ ದಿನ್ನಿ, ವೀರೇಶ ಪಾಟೀಲ್, ಅಮರೇಶ, ಹೊನ್ನಪ್ಪ ,ಷಣ್ಮೂಖ ಉಪಸ್ಥಿತರಿದ್ದರು.

ವರದಿ : ಹಫೀಜುಲ್ಲ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

ತುಮಕೂರು | ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ : ಡಿಕೆಶಿ ವಿರುದ್ಧ ಕೆ. ಎನ್ ರಾಜಣ್ಣ ವಾಗ್ದಾಳಿ

ಡಿ.ಕೆ.ಶಿವಕುಮಾ‌ರ್ ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ ಹಾಡಿದ ಬಗ್ಗೆ  ಮಾಜಿ ಸಚಿವ ಕೆ...

Download Eedina App Android / iOS

X