ಬೆಂಗಳೂರು | ಆರ್ಡರ್ ಮಾಡಿದ ಗ್ರಾಹಕರ ಮನೆಗೆ ಜೀವಂತ ಹಾವು ಕಳುಹಿಸಿದ ಅಮೆಜಾನ್

Date:

Advertisements

ಅಮೆಜಾನ್‌ನಲ್ಲಿ ‘ಎಕ್ಸ್‌ ಬಾಕ್ಸ್‌ ಕಂಟ್ರೋಲರ್’ ಆರ್ಡರ್‌ ಮಾಡಿದವರಿಗೆ ಅಮೆಜಾನ್ ಕಂಪನಿ ಉಚಿತವಾಗಿ ಜೀವಂತ ಹಾವು ಪಾರ್ಸೆಲ್ ಕಳಿಸಿರುವ ಘಟನೆ ಬೆಂಗಳೂರಿನ ಸರ್ಜಾಪುರದಲ್ಲಿ ನಡೆದಿದೆ.

ಹೌದು, ತಾವು ಆರ್ಡರ್ ಮಾಡಿದ ಪಾರ್ಸೆಲ್‌ನಲ್ಲಿ ಎಕ್ಸ್‌ ಬಾಕ್ಸ್‌ ಕಂಟ್ರೋಲರ್ ಜತೆಗೆ ಜೀವಂತ ಹಾವು ಇರುವುದನ್ನು ತನ್ವಿ ಅವರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಸದ್ಯ ಈ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.

ತನ್ವಿ ಅವರು ಅಮೆಜಾನ್‌ನಲ್ಲಿ ಎಕ್ಸ್ಬಾಕ್ಸ್ಕಂಟ್ರೋಲರ್ ಬುಕ್ ಮಾಡಿದ್ದಾರೆ. ಪಾರ್ಸಲ್ ಮನೆಗೆ ಬಂದ ಬಳಿಕ ಅದನ್ನು ತೆರೆಯಲು ಮುಂದಾಗಿದ್ದಾರೆ. ಈ ವೇಳೆ, ಬಾಕ್ಸ್‌ನಿಂದ ಶಬ್ದ ಬರುತ್ತಿತ್ತು. ಮುಂದಾಗಿ ಬಾಕ್ಸ್‌ ತೆರೆದು ನೋಡಿದಾಗ ಎಕ್ಸ್ಬಾಕ್ಸ್ಕಂಟ್ರೋಲರ್ ಜತೆಗೆ ಅದರೊಳಗೆ ಜೀವಂತ ಹಾವು ಇರುವುದು ಕಂಡುಬಂದಿದೆ.

Advertisements

ಪ್ಯಾಕೇಜಿಂಗ್ ಟೇಪ್ನಲ್ಲಿ ಸಿಲುಕಿಕೊಂಡಿದ್ದ ಹಾವು ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಅಲ್ಲದೇ, ಟೇಪ್‌ಗೆ ಸಿಲುಕಿಕೊಂಡಿರುವ ಹಾವನ್ನು ಬಕೆಟ್‌ನಲ್ಲಿ ಇಟ್ಟು ವಿಡಿಯೋ ಮಾಡಿದ್ದಾರೆ.

ಇದನ್ನು ಕಂಡು ದಂಗಾದ ಅವರು ತಮ್ಮ ಅನುಭವವನ್ನು ಸೋಶಿಯಲ್ಮೀಡಿಯಾಗಳಲ್ಲಿ ಹಂಚಿಕೊಂಡಿದ್ದಾರೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗುತ್ತಿದೆ.

ಘಟನೆಯ ಬಳಿಕ ಅಮೇಜಾನ್ ಕಂಪೆನಿ ಗ್ರಾಹಕರಿಗೆ ಎಕ್ಸ್ಬಾಕ್ಸ್ಕಂಟ್ರೋಲರ್ಗೆ ನೀಡಿದ್ದ ಹಣವನ್ನು ಸಂಪೂರ್ಣವಾಗಿ ಮರುಪಾವತಿ ಮಾಡಿದೆ.

ಈ ಸುದ್ದಿ ಓದಿದ್ದೀರಾ? ಭೀಕರ ಹಲ್ಲೆಯ ಪರಿಣಾಮ, ರೇಣುಕಾಸ್ವಾಮಿ ಸಾವು ; ಮರಣೋತ್ತರ ಪರೀಕ್ಷಾ ವರದಿ

ವಿಡಿಯೊವನ್ನು ಎಕ್ಸ್‌/ಟ್ವಿಟರ್ನಲ್ಲಿ ಹಂಚಿಕೊಂಡಿರುವ ತನ್ವಿ ಎಂಬವರು, “ಅಮೆಜಾನ್ನಲ್ಲಿ ಎಕ್ಸ್ಬಾಕ್ಸ್ಕಂಟ್ರೋಲರ್ಗಾಗಿ ಆರ್ಡರ್ಮಾಡಿದೆ. ಅದರೊಂದಿಗೆ ಹಾವನ್ನು ಉಚಿತವಾಗಿ ಪಡೆದೆಎಂದು ಬರೆದುಕೊಂಡಿದ್ದಾರೆ. ತನ್ವಿ ಅವರ ಖಾತೆಯಲ್ಲಿ ಬೆಂಗಳೂರಿನವರು ಎಂಬ ಮಾಹಿತಿ ಇದೆ.

ವಿಡಿಯೊ ಹಂಚಿಕೊಂಡಿರುವ ಪ್ರಕಾಶ್ಎಂಬವರು, ‘ಸರ್ಜಾಪುರ ರಸ್ತೆಯಲ್ಲಿರುವ ಕುಟುಂಬವೊಂದು, ಅಮೆಜಾನ್ನಲ್ಲಿ ತಾವು ಆರ್ಡರ್ಮಾಡಿದ್ದ ಎಕ್ಸ್ಬಾಕ್ಸ್ಕಂಟ್ರೋಲರ್ಜೊತೆಗೆ ಜೀವಂತ ಹಾವನ್ನೂ ಸ್ವೀಕರಿಸಿರುವ ಆಘಾತಕಾರಿ ಘಟನೆ ನಡೆದಿದೆ. ಅದೃಷ್ಟವಶಾತ್‌, ವಿಷಕಾರಿ ಹಾವು ಪ್ಯಾಕಿಂಗ್ಟೇಪ್ನಲ್ಲೇ ಸಿಲುಕಿದ್ದರಿಂದ ಯಾವುದೇ ಅಪಾಯ ಸಂಭವಿಸಿಲ್ಲಎಂದು ತಿಳಿಸಿದ್ದಾರೆ.

ಅಮೆಜಾನ್ ಆರ್ಡರ್ನಲ್ಲಿ ನಿಮಗೆ ಆದ ಅನಾನುಕೂಲತೆಯ ಬಗ್ಗೆ ವಿಷಾದಿಸುತ್ತೇವೆ. ಈ ಬಗ್ಗೆ ನಾವು ಪರಿಶೀಲನೆ ಮಾಡುತ್ತೇವೆ. ದಯವಿಟ್ಟು ಅಗತ್ಯವಿರುವ ವಿವರಗಳನ್ನು ಹಂಚಿಕೊಳ್ಳಿ. ನಮ್ಮ ತಂಡವು ನವೀಕರಣದೊಂದಿಗೆ ಶೀಘ್ರದಲ್ಲೇ ನಿಮ್ಮನ್ನು ಸಂಪರ್ಕಿಸುತ್ತದೆ” ಎಂದು ಅಮೆಜಾನ್‌ ಟ್ವೀಟ್ ಮಾಡಿದೆ.

ಆದರೆ, ಅಮೆಜಾನ್ ವಿಷಪೂರಿತ ಹಾವಿನ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಬದಲಾಗಿ ತಪ್ಪಾಗಿ ಪಾರ್ಸೆಲ್​​​ ಬಂದಿರುವುದಕ್ಕೆ ವಿಷಾದ ವ್ಯಕ್ತಪಡಿಸುವುದಾಗಿ ಹೇಳಿಕೊಂಡಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X