ಜೀವ ಬೆದರಿಕೆ | ನಟ ದರ್ಶನ್ ಅಭಿಮಾನಿಗಳ ವಿರುದ್ಧ ದೂರು ದಾಖಲಿಸಿದ ನಟ ಪ್ರಥಮ್

Date:

Advertisements

ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತನಾಗಿರುವ ನಟ ದರ್ಶನ್ ಅಭಿಮಾನಿಗಳಿಂದ ನಿರಂತರ ಜೀವ ಬೆದರಿಕೆ ಕರೆಗಳು ಬರುತ್ತಿವೆ ಎಂದು ಆರೋಪಿಸಿ ನಟ ಪ್ರಥಮ್ ಜ್ಞಾನ ಭಾರತಿ ನಗರ ಪೊಲೀಸರಿಗೆ ಬುಧವಾರ ದೂರು ನೀಡಿದ್ದಾರೆ.

ಪೊಲೀಸರಿಗೆ ದೂರು ನೀಡಿರುವ ಬಗ್ಗೆ ಪ್ರಥಮ್ ಅವರು ತಮ್ಮ ಎಕ್ಸ್ ಖಾತೆಯ ಮೂಲಕ ಖಚಿತಪಡಿಸಿ ನಟ ದರ್ಶನ್ ಅಭಿಮಾನಿಗಳಿಗೆ ಬುದ್ದಿಮಾತು ಹೇಳಿದ್ದಾರೆ.

“ಜೀವನ ದೊಡ್ಡದು, ಯಾರಿಗೋಸ್ಕರವೋ ಹಾಳು ಮಾಡಿಕೊಳ್ಳಬೇಡಿ. ನಾನು ಶಾಂತಿಯಿಂದಲೇ ಇದ್ದೆ. ಆದರೆ, ನೀವು ಅತಿಯಾಗಿ ನಮ್ಮ”ಕರ್ನಾಟಕದ ಅಳಿಯ” ಸಿನಿಮಾ ತಂಡದ ಕಚೇರಿ ನಂಬರ್‌ಗೆ ಕರೆ ಮಾಡಿ ಬೆದರಿಕೆ ಹಾಕುತಿದ್ದೀರಾ! ಇನ್ಮೇಲೆ ನನಗೆ ಬರುವ ಕರೆ, ಮೆಸೇಜ್ ಮತ್ತು ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆಗಳು ಸೇರಿದಂತೆ ಎಲ್ಲವನ್ನು ಪೊಲೀಸರು ನೋಡಿಕೊಳ್ಳುತ್ತಾರೆ. ಬದುಕು ಸುಂದರವಾದದ್ದು ಅಂಧಾಭಿಮಾನಿಗಳೇ ಅದನ್ನು ನಿಮ್ಮ ತಂದೆ ತಾಯಿಗಳಿಗೆ ಮೀಸಲಿಡಿ” ಎಂದು ಪ್ರಥಮ್ ಹೇಳಿದ್ದಾರೆ.

Advertisements

ಪ್ರಥಮ್ ಮೇಲೇಕೆ ಸಿಟ್ಟು?

ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಮ್ಮ ಬಾಸ್ ದರ್ಶನ್ ಅವರದ್ದು ಏನು ತಪ್ಪಿಲ್ಲ ಎಂದು ಅಭಿಮಾನಿಗಳು ಸಮರ್ಥನೆ ಮಾಡಿಕೊಳ್ಳುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ್ದ ಪ್ರಥಮ್, “ಅನ್ನಪೂರ್ಣೇಶ್ವರಿ ನಗರ ಠಾಣೆ ನಮ್ಮ ಮನೆಯಿಂದ ಹತ್ತಿರದಲ್ಲಿದೆ. ಅಲ್ಲಿನ ಇನ್ಸ್‌ಪೆಕ್ಟರ್ ಅಥವಾ ಎಸಿಪಿಗೆ ಹೇಳಿ ಒಂದು ವಾರದ ಮಟ್ಟಿಗೆ ಪೊಲೀಸ್ ಕಾನ್‌ಸ್ಟೆಬಲ್ ಆಗಲು ನನಗೆ ಅನುಮತಿ ಕೊಡಿಸಿ, ನನಗೆ ಸಂಬಳ ಕೊಡಬೇಕಾಗಿಲ್ಲ, ಒಂದು ದೊಣ್ಣೆ ಸಿಕ್ಕಿದರೆ ಸಾಕು. ಸ್ಟೇಷನ್ ಮುಂದೆ ನಿಂತಿರುವವರಿಗೆಲ್ಲರಿಗೂ ನಾಯಿಗೆ ಹೊಡೆದಂಗೆ ಹೊಡೆಯುತ್ತೇನೆ” ಎಂದಿದ್ದರು.

ಪ್ರಥಮ್ ಅವರ ಮಾತುಗಳಿಂದ ರೊಚ್ಚಿಗೆದ್ದಿರುವ ದರ್ಶನ್ ಅಭಿಮಾನಿಗಳು ಇದೀಗ ಪ್ರಥಮ್ ಅವರಿಗೆ ಜೀವ ಬೆದರಿಕೆ ಹಾಕುತ್ತಿದ್ದು, ತಕ್ಷಣ ಜ್ಞಾನ ಭಾರತಿ ನಗರ ಪೊಲೀಸ್‌ ಠಾಣೆಗೆ ತೆರಳಿ ದರ್ಶನ್ ಅಭಿಮಾನಿಗಳ ವಿರುದ್ಧ ಪ್ರಥಮ್ ದೂರು ದಾಖಲಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X