ನೀಟ್ ಅಕ್ರಮ: ಹೈಕೋರ್ಟ್ ವಿಚಾರಣೆಗಳಿಗೆ ಸುಪ್ರೀಂ ತಡೆ, ಕೌನ್ಸೆಲಿಂಗ್ ಪ್ರಕ್ರಿಯೆ ಮುಂದುವರಿಕೆ

Date:

Advertisements

ನೀಟ್ ಪರೀಕ್ಷೆಯ ಅಕ್ರಮಗಳಿಗೆ ಸಂಬಂಧಿಸಿದಂತೆ ಹೈಕೋರ್ಟ್‌ಗಳಿಂದ ಸುಪ್ರೀಂ ಕೋರ್ಟ್‌ಗೆ ವಿಚಾರಣೆಗಳನ್ನು ವರ್ಗಾಯಿಸಬೇಕೆಂದು ರಾಷ್ಟ್ರೀಯ ಪರೀಕ್ಷಾ ಮಂಡಳಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

ವಿಚಾರಣೆ ನಡೆಸಿದ ರಜಾ ಪೀಠದ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಹಾಗೂ ಎಸ್‌ವಿಎನ್‌ ಭಟ್ಟಿ ಅವರು ಇದೇ ಸಂದರ್ಭದಲ್ಲಿ ವಿವಿಧ ಹೈಕೋರ್ಟ್‌ಗಳಲ್ಲಿರುವ ನೀಟ್ ಸಂಬಂಧದ ವಿಚಾರಣೆಗಳಿಗೆ ತಡೆ ನೀಡಿ ಕೌನ್ಸೆಲಿಂಗ್ ಪ್ರಕ್ರಿಯೆಗಳಿಗೆ ತಡೆ ನೀಡುವುದಿಲ್ಲ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

ನೀಟ್‌ಗೆ ಸಂಬಂಧಿಸಿದಂತೆ ಅರ್ಜಿಯ ವಿಚಾರಣೆಗಳನ್ನು ಜುಲೈ 8ರಂದು ಪರಿಗಣಿಸುವುದಾಗಿ ಸುಪ್ರೀಂ ಪೀಠ ತಿಳಿಸಿತು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಒಂದೆಡೆ ವಂದೇ ಭಾರತ್- ಬುಲೆಟ್ ಟ್ರೇನ್ ವಿಲಾಸ; ಮತ್ತೊಂದೆಡೆ ಬಡವರ ಜೀವಗಳ ಅಪಹಾಸ

ಮೇಘಾಲಯದ ಪರೀಕ್ಷಾ ಕೇಂದ್ರದಲ್ಲಿ 45 ನಿಮಿಷಗಳ ಕಾಲ ಸಮಯ ಕಳೆದುಕೊಂಡ ವಿದ್ಯಾರ್ಥಿಗಳ ಅರ್ಜಿಗೆ ಪ್ರತಿಕ್ರಿಯೆ ನೀಡಿದ ನ್ಯಾಯಮೂರ್ತಿಗಳು, ಕೌನ್ಸೆಲಿಂಗ್‌ಗೆ ತಡೆ ನೀಡುವುದಿಲ್ಲ. ವಿದ್ಯಾರ್ಥಿಗಳು ಸಲ್ಲಿಸಿದ ಅರ್ಜಿಯ ಮೇರೆಗೆ ಕೇಂದ್ರ ಸರ್ಕಾರ ಮತ್ತು ಎನ್‌ಟಿಎಗೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ತಿಳಿಸಿದರು.

ನೀಟ್‌ – ಯುಜಿ 2024 ಫಲಿತಾಂಶವನ್ನು ರದ್ದುಗೊಳಿಸುವಂತೆ ಮತ್ತು ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿನ ಅಕ್ರಮಗಳ ಬಗ್ಗೆ ನ್ಯಾಯಾಲಯದ ಮೇಲ್ವಿಚಾರಣೆಯ ತನಿಖೆಗೆ ಕೋರಿ ಸಲ್ಲಿಸಲಾದ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ ಇಂದು ಕೇಂದ್ರ ಸರ್ಕಾರ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಮತ್ತು ಇತರರಿಂದ ಪ್ರತಿಕ್ರಿಯೆಗಳನ್ನು ಕೇಳಿತು. ಹಾಗೆಯೇ ಜುಲೈ 8ಕ್ಕೆ ಅರ್ಜಿಗಳನ್ನು ವಿಚಾರಣೆಗೆ ಮುಂದೂಡಿತು.

ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಕಾಣಿಸಿಕೊಂಡ 20 ವಿದ್ಯಾರ್ಥಿಗಳು ಸಲ್ಲಿಸಿದ ಅರ್ಜಿಗಳಲ್ಲಿ ಒಂದಾದ ಎನ್‌ಟಿಎ ಮತ್ತು ಇತರರಿಗೆ ಪರೀಕ್ಷೆಯನ್ನು ಹೊಸದಾಗಿ ನಡೆಸಲು ನಿರ್ದೇಶನವನ್ನು ಕೋರಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X