ತುಮಕೂರು | ನಿವೇಶನ-ಹಕ್ಕುಪತ್ರದ ಹಕ್ಕಿಗಾಗಿ ಹೋರಾಟ; ನಾಲ್ಕನೇ ದಿನಕ್ಕೆ ಕಾಲಿಟ್ಟ ಧರಣಿ

Date:

Advertisements

ತುಮಕೂರು ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ವಾಸಿಸುತ್ತಿರುವ ಹಂದಿ ಜೋಗಿ ಸಮುದಾಯ, ಅಲ್ಪಸಂಖ್ಯಾತರು ಮತ್ತು ದಲಿತ ಸಮುದಾಯ ಸೇರಿದಂತೆ ಹಲವು ಜಾತಿ-ಜನಾಂಗದ ಜನರು ಸ್ವಂತ ನಿವೇಶನ ಹಾಗೂ ಭೂಮಿ ಹಕ್ಕು ಪತ್ರಗಳಿಲ್ಲದೆ ನಿರ್ಗತಿಕಾರಾಗಿ ಜೀವನ ನಡೆಸುತ್ತಿದ್ದಾರೆ. ಅವರೆಲ್ಲರಿಗೂ ನಿವೇಶನ ಹಂಚಿಕೆ ಮಾಡಿ, ವಸತಿ ನೀಡಿ, ಹಕ್ಕು ಪತ್ರಗಳನ್ನು ವಿತರಿಸಬೇಕೆಂದು ಆಗ್ರಹಿಸಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಆಗ್ರಹಿಸಿದೆ. ತುಮಕೂರಿನಲ್ಲಿ ಸಮಿತಿಯ ನೇತೃತ್ವದಲ್ಲಿ ಸಮುದಾಯಗಳ ಜನರು ಧರಣಿ ನಡೆಸುತ್ತಿದ್ದು, ಧರಣಿ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ.

ತುಮಕೂರು ಜಿಲ್ಲಾಧಿಕಾರಿ ಕಚೇರಿ ಎದುರು ಜೂನ್ 18ರಿಂದ ಮಧುಗಿರಿ ತಾಲೂಕಿನ ಜನಕಲೋಟಿ, ತಿಗಳರಹಳ್ಳಿ, ಐಡಿಹಳ್ಳಿ, ವಿರುಪಗೊಂಡನಹಳ್ಳಿ, ಬ್ಯಾಲ್ಯ ಹಾಗೂ ಕೊರಟಗೆರೆ ತಾಲೂಕಿನ ಹೊಳವನಹಳ್ಳಿ, ಹುಲಿಕುಂಟೆ ಗ್ರಾಮ, ಇರಕಸಂಸ್ರ ಕಾಲೋನಿ, ಓಬನಹಳ್ಳಿ ಮತ್ತು ತುಮಕೂರು ತಾಲೂಕಿನ ಅಮಲಾಪುರ, ಗಂಗಸಂದ್ರ, ಕೌತಮಾರನಹಳ್ಳಿಯ ನಿವೇಶನ ರಹಿತ ಸಂತ್ರಸ್ತರು ಕುಟುಂಬಗಳು ಧರಣಿ ನಡೆಸುತ್ತಿದ್ದಾರೆ.

“ನಿವೇಶನಗಳನ್ನು ಒದಗಿಸಿಕೊಡುವಂತೆ ಹಲವು ಬಾರಿ ಪ್ರತಿಭಟನೆಗಳನ್ನು ನಡೆದರೂ ಸರ್ಕಾರ ತಮ್ಮ ಕಷ್ಟಗಳಿಗೆ ಸ್ಪಂದಿಸುತ್ತಿಲ್ಲ. ತಮ್ಮ ಬೇಡಿಕೆಗಳನ್ನು ಈಡೇರಿಸುತ್ತಿಲ್ಲ. ಮೂಲಭೂತ ಸೌಲಭ್ಯಗಳನ್ನು ಪಡೆಯುವುದು ಪ್ರತಿಯೊಬ್ಬ ನಾಗರಿಕರ ಹಕ್ಕು. ಆದರೆ, ಜಿಲ್ಲಾಡಳಿತವು ಜನರ ಹಕ್ಕುಗಳನ್ನು ಕಸಿದುಕೊಳ್ಳುತ್ತಿದೆ” ಎಂದು ಧರಣಿ ನಿರತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisements

ಒಂದು ಚಿಕ್ಕ ಪೆಂಡಾಲ್‌ನಲ್ಲಿಯೇ 100 ಜನ ಕುಳಿತು ತಮ್ಮ ಹಕ್ಕುಗಳಿಗಾಗಿ ಹೋರಾಟ ನಡೆಸುತ್ತಿದ್ದಾರೆ. ಪೆಂಡಾಲ್ ಕಂಬಿಗಳಿಗೆ ಜೋಕಾಲಿ ಹಾಕಿ ಎಳೆ ಕಂದಮ್ಮಗಳೊಂದಿಗೆ ತಾಯಂದಿರು ಕೂಡ ಧರಣಿಯಲ್ಲಿದ್ದಾರೆ. ಮಳೆ, ಗಾಳಿಗೂ ಜಗ್ಗದೆ ಪ್ರತಿಭಟಿಸುತ್ತಿದ್ದಾರೆ. ಆರೂ, ಅವರ ಹೋರಾಟಕ್ಕೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಅವರ ಅಳಲನ್ನು ಕೇಳುತ್ತಿಲ್ಲ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

Download Eedina App Android / iOS

X