ಬಳ್ಳಾರಿ ಪಾಲಿಕೆ | ನೂತನ ಮೇಯರ್ ಆಗಿ ಮಾಜಿ ಸಚಿವ ನಾಗೇಂದ್ರ ಆಪ್ತ ನಂದೀಶ್; ಉಪಮೇಯರ್ ಆಗಿ ಡಿ.ಸುಕುಂ

Date:

Advertisements

ಇಂದು ಬಳ್ಳಾರಿ ನಗರ ಪಾಲಿಕೆಯ ನೂತನ ಮೇಯರ್ ಉಪಮೇಯರ್ ಸೇರಿದಂತೆ ವಿವಿಧ ಸ್ಥಾಯಿ ಸಮಿತಿಗಳ ಸದಸ್ಯರುಗಳ ಆಯ್ಕೆಗೆ ಚುನಾವಣೆ ನಡೆದಿದ್ದು, ಮೇಯರ್‌ ಆಗಿ ಮಾಜಿ ಸಚಿವ ಬಿ ನಾಗೇಂದ್ರ ಆಪ್ತ ಕಾಂಗ್ರೆಸ್‌ನ ಮುಲ್ಲಂಗಿ ನಂದೀಶ್ ಬಾಬು ಆಯ್ಕೆಯಾಗಿದ್ದರೆ, ಉಪ ಮೇಯರ್‌ ಆಗಿ ಡಿ. ಸುಕುಂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಬಳ್ಳಾರಿ ನಗರ ಪಾಲಿಕೆಯ 39 ಸದಸ್ಯರಲ್ಲಿ ಕಾಂಗ್ರೆಸ್ ಪಕ್ಷದ 21 ಹಾಗೂ ಪಕ್ಷೇತರರಾಗಿ ಆರಿಸಿ ಬಂದು ಕಾಂಗ್ರೆಸ್ ಬೆಂಬಲಿಸಿರುವ 5 ಜನ ಸದಸ್ಯರು ಸೇರಿದಂತೆ 26 ಜನರ ಬಲವಿತ್ತು. ಬಿಜೆಪಿಯವರು 13 ಸದಸ್ಯರ ಬಲ ಹೊಂದಿದ್ದರು. ಕಾಂಗ್ರೆಸ್ ಪಕ್ಷ ನಿಚ್ಚಳ ಬಹುಮತ ಹೊಂದಿದ್ದರಿಂದ ಅಧಿಕಾರ ಸೂತ್ರ ಹಿಡಿದಿದೆ.

ಮೇಯ‌ರ್ ಸ್ಥಾನವು ಸಾಮಾನ್ಯ ವರ್ಗಕ್ಕೆ ಮೀಸಲಾಗಿರುವುದರಿಂದ ಸಹಜವಾಗಿಯೇ ಆಕಾಂಕ್ಷಿಗಳು ಹೆಚ್ಚಾಗಿದ್ದರು. ಅವರ ಪೈಕಿ ಮಾಜಿ ಸಚಿವ ಬಿ ನಾಗೇಂದ್ರ ಆಪ್ತ ಮುಲ್ಲಂಗಿ ನಂದೀಶ್, ಮುಂಡೂರು ಪ್ರಭಂಜನ್ ಕುಮಾ‌ರ್, ಹಿರಿಯ ಸದಸ್ಯ ಪಿ.ಗಾದೆಪ್ಪನವರು ತಮಗೆ ಅವಕಾಶ ಕಲ್ಪಿಸುವಂತೆ ಕೋರಿದ್ದರು.

Advertisements

ಕಳೆದ ಎರಡು ಬಾರಿ ಮೇಯರ್ ಹಾಗೂ ಉಪಮೇಯರ್ ಆಯ್ಕೆಗೆ ಚುನಾವಣೆ ನಿಗದಿ ಮಾಡಿ ನೀತಿ ಸಂಹಿತೆ ಕಾರಣದಿಂದ ಮುಂದೂಡಲಾಗಿತ್ತು. ಅಂತೆಯೇ ಇಂದು ಚುನಾವಣೆ ನಡೆದಿದ್ದು, ಮೇಯರ್ ಆಗಿ ಮುಲ್ಲಂಗಿ ನಂದೀಶ್ ಹಾಗೂ ಉಪಮೇಯರ್ ಆಗಿ ಡಿ.ಸುಕುಂ ಅವರು ಆಯ್ಕೆಯಾಗಿದ್ದಾರೆ.

ಈ ಬಗ್ಗೆ ಕಾಂಗ್ರೆಸ್ ಮುಖಂಡರ ಸಮ್ಮುಖದಲ್ಲಿ ಸಭೆ ನಡೆಸಿ, ಒಮ್ಮತದ ಅಭ್ಯರ್ಥಿಯನ್ನು ಆಯ್ಕೆ ಮಾಡಲು ತೀರ್ಮಾನ ಮಾಡಲಾಯಿತು. ಆ ಪ್ರಕಾರ ಮೇಯರ್ ಆಗಿ ಮುಲ್ಲಂಗಿ ನಂದೀಶ್‌ ಅವರನ್ನು ಆಯ್ಕೆ ಮಾಡಲಾಗಿದ್ದು, ಉಪಮೇಯರ್ ಆಗಿ ಡಿ.ಸುಕುಂ ಅವರು ಆಯ್ಕೆಯಾಗಿದ್ದಾರೆ.

ಮೇಯರ್ ಆಗಿ ಆಯ್ಕೆಯಾಗಿರುವ ನಂದೀಶ್ ಪಾಲಿಕೆಯ 18ನೇ ವಾರ್ಡಿನ್ ಕಾಂಗ್ರೆಸ್ ಸದಸ್ಯನಾಗಿದ್ದರೆ, ಉಪಮೇಯರ್ ಸುಕುಂ 26ನೇ ವಾರ್ಡ್ ಸದಸ್ಯೆಯಾಗಿದ್ದಾರೆ.

ಬಿಜೆಪಿಯಿಂದ ಶ್ರೀನಿವಾಸ್‌ ಮೋತ್ಕರ್ ಮೇಯ‌ರ್ ಸ್ಥಾನಕ್ಕೆ ಸ್ಪರ್ಧಿಸಿದ್ದರೆ, ಉಪಮೇಯರ್ ಸ್ಥಾನಕ್ಕೆ ಯಾರೂ ನಾಮಪತ್ರ ಸಲ್ಲಿಸಿರಲಿಲ್ಲ.

ಇದನ್ನು ಓದಿದ್ದೀರಾ? ‘ಅರಿವು ವಿದ್ಯಾಭ್ಯಾಸ ಸಾಲ ಯೋಜನೆ’ಗೆ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ

ಪಾಲಿಕೆ ಚುನಾವಣೆಯ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಬೆಳಗ್ಗೆಯಿಂದಲೇ ಆರಂಭಗೊಂಡ ಚುನಾವಣೆ ಪ್ರಕ್ರಿಯೆ ಹಿನ್ನೆಲೆಯಲ್ಲಿ ಸಾರ್ವಜನಿಕರನ್ನು ಯಾರನ್ನೂ ಪಾಲಿಕೆ ಕಚೇರಿಯೊಳಗೆ ಬಿಟ್ಟಿರಲಿಲ್ಲ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X