ರಾಯಚೂರು | ಯಲಗಟ್ಟಾ ಪ್ರೌಢಶಾಲೆ ಮುಖ್ಯಶಿಕ್ಷಕ ನಾಗನಗೌಡರ ಅಮಾನತಿಗೆ ಎಸ್‌ಎಫ್‌ಐ ಆಗ್ರಹ

Date:

Advertisements

ರಾಯಚೂರು ಜಿಲ್ಲೆಯ ಯಲಾಗಟ್ಟಾ ಗ್ರಾಮದ ಸರ್ಕಾರಿ ಪ್ರೌಢಶಾಲೆ ಮುಖ್ಯಶಿಕ್ಷಕ ನಿರಂತರ ಗೈರಾಗುತ್ತಿರುವುದರಿಂದ ಅವರನ್ನು ಸೇವೆಯಿಂದ ಅಮಾನತುಗೊಳಿಸುವಂತೆ ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ಲಿಂಗಸಗೂರು ತಾಲೂಕು ಸಮಿತಿ ನೇತೃತ್ವದಲ್ಲಿ ಶಾಲೆ ಎದುರು ಅನಿರ್ಧಿಷ್ಟಾವಧಿ ಧರಣಿ ನಡೆಸಿದರು.

ಎಸ್ಎಫ್ಐ ಜಿಲ್ಲಾಧ್ಯಕ್ಷ ರಮೇಶ ವೀರಾಪೂರು ಮಾತನಾಡಿ, “ಜಿಲ್ಲೆಯ ಲಿಂಗಸಗೂರು ತಾಲೂಕಿನ ಯಲಗಟ್ಟಾ ಗ್ರಾಮದ ಸರ್ಕಾರಿ ಪ್ರೌಢಶಾಲೆ ಮುಖ್ಯಶಿಕ್ಷಕ ನಾಗನಗೌಡ ಅವರು ಎರಡು ವರ್ಷಗಳಿಂದ ಶಾಲೆಗೆ ನಿರಂತರವಾಗಿ ಅನಧಿಕೃತವಾಗಿ ಗೈರಾಗುತ್ತಿದ್ದು, ಶಾಲೆಯ ಮಕ್ಕಳ ವಿದ್ಯಾಭ್ಯಾಸದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ. ಈ ಬಗ್ಗೆ ಅನೇಕ ಬಾರಿ ಎಸ್ಎಫ್ಐ, ಎಸ್‌ಡಿಎಂಸಿ ಹಾಗೂ ಅನೇಕ ಸಂಘಟನೆಗಳು ದೂರು ನೀಡಿದರೂ ಕೂಡ ಯಾವುದೇ ಪ್ರಯೋಜನವಾಗಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಶಿಕ್ಷಣ ಇಲಾಖೆ ರಾಜಕೀಯ ಒತ್ತಡಕ್ಕೆ ಮಣಿದಿದ್ದು, ತಪ್ಪತಸ್ತ ಮುಖ್ಯಶಿಕ್ಷಕರ ವಿರುದ್ಧ ಯಾವುದೇ  ಕ್ರಮ ಕೈಗೊಳ್ಳಲು ಹಿಂದೇಟು ಹಾಕುತ್ತಿದೆ” ಎಂದು ಆರೋಪಿಸಿದರು.

Advertisements

“ಯಲಗಟ್ಟಾ ಗ್ರಾಮದ ಸರ್ಕಾರಿ ಪ್ರೌಢಶಾಲೆಗೆ ಮುಖ್ಯ ಗುರುಗಳಾಗಿ ಬಂದ ದಿನದಿಂದಲೂ ಅವರು ನಿರಂತರ ಗೈರಾಗಿದ್ದಾರೆ. ಕೇವಲ ಧ್ವಜಾರೋಹಣ ಹಾಗೂ ಕೆಲವೊಂದು ಜಯಂತಿಗಳನ್ನು ಆಚರಿಸಲು ಮಾತ್ರ ಹಾಜರಿರುತ್ತಾರೆ. ಕೆಲ ಹೊತ್ತಿನಲ್ಲೇ ತರಾತುರಿಯಲ್ಲಿ ಜಾಗ ಖಾಲಿ ಮಾಡುತ್ತಾರೆ. ಇದರಿಂದ ಈ ಬಾರಿಯ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ 68 ವಿದ್ಯಾರ್ಥಿಗಳ ಪೈಕಿ 33 ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ. ಇದರಿಂದ ಗ್ರಾಮದ ಶಾಲೆ ಅಳಿವಿನ ಅಂಚಿಗೆ ಹೋಗುತ್ತಿದೆ” ಎಂದು ಕಳವಳ ವ್ಯಕ್ತಪಡಿಸಿದರು.

ಎಸ್ಎಫ್ಐ ತಾಲೂಕು ಕಾರ್ಯದರ್ಶಿ ಪವನ್ ಕಮದಾಳ ಮಾತನಾಡಿ, “ಈ ಹಿಂದೆ ಬಿಇಒ ಅವರಿಗೆ ದೂರು ನೀಡಿದಾಗ ಆತನಿಗೆ ನಾವು ಏನೂ ಮಾಡೋಕೆ ಆಗುವುದಿಲ್ಲ. ಆತ ರಾಜಕೀಯ ಒತ್ತಡ ತರುತ್ತಾನೆ. ಆತನ ಸಮಸ್ಯೆ ಬಿಟ್ಟು ಬೇರೆ ಏನು ಬೇಕಾದರೂ ಹೇಳಿ ಎಂದು ಉಡಾಫೆ ಉತ್ತರ ನೀಡಿದ್ದರು. ಇಂತಹ ಬೇಜವಾಬ್ದಾರಿ ಅಧಿಕಾರಿಯಿಂದ ನಮ್ಮ ತಾಲೂಕಿನಲ್ಲಿ ಶಿಕ್ಷಣ ವ್ಯವಸ್ಥೆ ಹದಗೆಟ್ಟು ಹೋಗಿದೆ. ಆದ್ದರಿಂದ ಈ ಕೂಡಲೇ ಮುಖ್ಯಶಿಕ್ಷಕ ನಾಗನಗೌಡ ಅವರನ್ನು ಸೇವೆಯಿಂದ ಅಮಾನತು ಮಾಡಬೇಕು” ಎಂದು ಆಗ್ರಹಿಸಿದರು.

“ಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆಗೆ ತಕ್ಕಂತೆ ಅಗತ್ಯ ಖಾಯಂ ಶಿಕ್ಷಕರನ್ನು ನೇಮಕ ಮಾಡಬೇಕು. ಶಾಲೆಗೆ ಬೇಕಾದ ಎಲ್ಲ ಅಗತ್ಯ ಮೂಲ ಸೌಕರ್ಯಗಳನ್ನು ನೀಡಬೇಕು” ಎಂದು ಭಾರತ ವಿದ್ಯಾರ್ಥಿ ಫೆಡರೇಷನ್(ಎಸ್ಎಫ್ಐ) ಪರವಾಗಿ ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ದರ್ಶನ್ ಪ್ರಕರಣ | ಕಾನೂನು ಉಲ್ಲಂಘಿಸೋರು ಶ್ರೀಮಂತರು – ನರಳೋರು ಬಡವರು; ನಟಿ ರಮ್ಯ ಟ್ವೀಟ್

ಈ ಸಂದರ್ಭದಲ್ಲಿ ಎಸ್‌ಎಫ್‌ಐ ಲಿಂಗಸಗೂರು ತಾಲೂಕು ಮುಖಂಡರಾದ ವಿನಯ್ ಕುಮಾರ, ಮಹಾಲಿಂಗ, ಬಸವರಾಜ, ಒಡಕೇಶ್, ಶ್ರೀನಿವಾಸ್, ಕರಿಯಪ್ಪ ವಾಡಿಗೇರಿ, ವಿನೋದ್ ರಾಜ್, ಕೆಪಿಆರ್‌ಎಸ್ ತಾಲೂಕು ಮುಖಂಡ ನಿಂಗಪ್ಪ ಎಂ, ವಿವಿಧ ಸಂಘಟನೆಗಳ ಮುಖಂಡರಾದ ಅಣ್ಣಯ್ಯ, ಶಿವಶಂಕರ, ರಾಜು ನಾಯಕ, ಅಮರೇಶ, ಗ್ರಾಮಸ್ಥರಾದ ವೆಂಕಣ್ಣ ಕೋಲ್ಕರ್, ಶಿವು ಪಿ ಜಿ ಸೇರಿದಂತೆ ಬಹುತೇಕರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

Download Eedina App Android / iOS

X