ಸರ್ಕಾರಿ ಉದ್ಯೋಗಿಗಳು 9.15ರೊಳಗೆ ಕಚೇರಿಗೆ ಹಾಜರಾಗಬೇಕು: ಅವಧಿ ನಿಗದಿಪಡಿಸಿದ ಕೇಂದ್ರ

Date:

Advertisements

ತಡವಾಗಿ ಕಚೇರಿಗೆ ಬರುವ ಸರ್ಕಾರಿ ಉದ್ಯೋಗಿಗಳಿಗೆ ಕಠಿಣ ಶಿಸ್ತು ಅಳವಡಿಸಲು ಕೇಂದ್ರ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಮುಂದಾಗಿದೆ. ಹಿರಿಯ ಅಧಿಕಾರಿಗಳು ಒಳಗೊಂಡು ಎಲ್ಲ ಕೇಂದ್ರ ಸರ್ಕಾರದ ಉದ್ಯೋಗಿಗಳು ಬೆಳಿಗ್ಗೆ 9 ಗಂಟೆಗೆ ಹಾಜರಾಗಬೇಕು. 15 ನಿಮಿಷಗಳು ಮಾತ್ರ ವಿನಾಯಿತಿ ನೀಡಲಾಗಿದ್ದು, 9.15ರೊಳಗೆ ಕಚೇರಿಯಲ್ಲಿ ಹಾಜರಿರಬೇಕು ಎಂದು ಆದೇಶ ಹೊರಡಿಸಲಾಗಿದೆ.

ಮಾಧ್ಯಮವೊಂದರ ಪ್ರಕಾರ, ಹಿರಿಯ ಅಧಿಕಾರಿಗಳನ್ನು ಒಳಗೊಂಡು ಎಲ್ಲ ಉದ್ಯೋಗಿಗಳು ಬಯೋಮೆಟ್ರಿಕ್‌ ಹಾಜರಾತಿ ವ್ಯವಸ್ಥೆಯನ್ನು ಬಳಸಬೇಕು. ಕೋವಿಡ್‌ ಆದ ನಾಲ್ಕು ವರ್ಷಗಳ ನಂತರದಲ್ಲಿ ಹಲವರು ಇದನ್ನು ನಿರ್ಲಕ್ಷಿಸಿದ್ದಾರೆ.

“ಯಾವುದಾದರೂ ಕಾರಣಕ್ಕೆ ನಿರ್ದಿಷ್ಟ ದಿನದಂದು ಉದ್ಯೋಗಿಯು ಕಚೇರಿಗೆ ಸಮಯಕ್ಕೆ ಸರಿಯಾಗಿ ಹಾಜರಾಗದಿದ್ದಲ್ಲಿ, ಸಂಬಂಧಿಸಿದ ಮೇಲಧಿಕಾರಿಗೆ ಮೊದಲೇ ತಿಳಿಸಬೇಕು ಹಾಗೂ ಸಾಮಾನ್ಯ ರಜೆಗೆ ಅನುಮತಿ ಪಡೆದಿರಬೇಕು. ಆಯಾ ವಿಭಾಗದ ಅಧಿಕಾರಿಗಳು ಕೂಡ ಉದ್ಯೋಗಿಗಳ ಹಾಜರಾತಿಯನ್ನು ಹಾಗೂ ಕ್ರಮಬದ್ಧತೆಯನ್ನು ಮೇಲ್ವಿಚಾರಣೆಗೊಳಿಸುತ್ತಿರಬೇಕು” ಎಂದು ತಿಳಿಸಲಾಗಿದೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಳಪೆ ಫಲಿತಾಂಶಕ್ಕೆ ಸಿ ಎಂ ಸಿಟ್ಟಾದರೆ ಸಾಲದು, ಶಿಕ್ಷಣ ಇಲಾಖೆಗೆ ಬಿಸಿ ಮುಟ್ಟಿಸಬೇಕು

ಒಂದು ವೇಳೆ ಹಾಜರಾತಿಯ ಶಿಸ್ತನ್ನು ಮೀರಿ 9.15ಕ್ಕೆ ಕಚೇರಿಗೆ ಹಾಜರಾದ ಉದ್ಯೋಗಿಗಳಿಗೆ ಅವರ ಸಾಮಾನ್ಯ ರಜೆಯಲ್ಲಿ ಅರ್ಧ ದಿನವನ್ನು ಕಡಿತಗೊಳಿಸಬೇಕು. ಸರ್ಕಾರಿ ಕಚೇರಿಗಳು 9 ರಿಂದ 5.30ರವರೆಗೂ ಕಾರ್ಯನಿರ್ವಹಿಸುತ್ತವೆ.

ಹಾಜರಾತಿಯ ಕ್ರಮಬದ್ಧತೆಗೆ ಆಧಾರ್‌ ಚಾಲಿತ ಬಯೋಮೆಟ್ರಿಕ್‌ ವ್ಯವಸ್ಥೆಯನ್ನು ಈ ಮೊದಲು ಅಳವಡಿಸಲಾಗಿತ್ತು. ಕೋವಿಡ್‌ ನಂತರ ಇದನ್ನು ಸ್ಥಗಿತಗೊಳಿಸಲಾಗಿತ್ತು.2022ರ ಫೆಬ್ರವರಿಯಲ್ಲಿ ಪುನಃ ಅಳವಡಿಲಾಗಿತ್ತು. ನಂತರದ ದಿನಗಳಲ್ಲಿ ಉದ್ಯೋಗಿಗಳು ಬಯೋಮೆಟ್ರಿಕ್‌ ಯಂತ್ರಕ್ಕೆ ಮುದ್ರೆಯೊತ್ತುವುದನ್ನು ನಿರ್ಲಕ್ಷಿಸುತ್ತಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X