ವಿಜಯಪುರ | ಅಕ್ರಮವಾಗಿ ಮದ್ಯ ಮಾರಾಟ; ಪಾನಮುಕ್ತ ಗ್ರಾಮ ಮಾಡಲು ಸಹಕರಿಸುವಂತೆ ಮನವಿ

Date:

Advertisements

ನಾಲತವಾಡ ಸಮೀಪದ ನೆರಬೆಂಚಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವುದನ್ನು ತಡೆಗಟ್ಟುವ ಮೂಲಕ ಪಾನಮುಕ್ತ ಗ್ರಾಮಕ್ಕೆ ಪಣ ತೊಡಲು ಗ್ರಾಮಸ್ಥರೆಲ್ಲರೂ ಸಹಕಾರ ನೀಡಬೇಕು ಎಂದು ನಿವೃತ್ತ ಶಿಕ್ಷಕ ವೈ ಬಿ ತಳವಾರ ಮನವಿ ಮಾಡಿದರು.

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನೆರಬೆಂಚಿ ಗ್ರಾಮದಲ್ಲಿ ಪ್ರಜ್ಞಾವಂತರು, ಕೆಸಾಪುರದ ಮದ್ಯಪಾನ ವಿರೋಧಿ ತಂಡದವರು, ಮಹಿಳಾ ಸಂಘಟನೆಯವರು ಜಂಟಿಯಾಗಿ ಹಮ್ಮಿಕೊಂಡಿದ್ದ ಮದ್ಯ ಮಾರಾಟ ನಿಷೇಧ ಅಭಿಯಾನ, ಜನಜಾಗೃತಿ ಮೂಡಿಸುವ ಕಾಲ್ನಡಿಗೆ ಜಾಥಾದಲ್ಲಿ ಮಾತನಾಡಿದರು.

“ಈಗಾಗಲೇ ಕೆಸಾಪುರದಿಂದ ಪ್ರಾರಂಭಗೊಂಡಿರುವ ಪಾನಮುಕ್ತ ಗ್ರಾಮ ಮಾಡುವ ಸಂಕಲ್ಪ ಯಾತ್ರೆಯೂ ಕೆಸಾಪುರ ಮತ್ತು ಆಲೂರು ಗ್ರಾಮಗಳಲ್ಲಿ ಅಕ್ರಮ ಮದ್ಯ ಮಾರಾಟ ತಡೆಗಟ್ಟುವಲ್ಲಿ ಯಶಸ್ವಿಯಾಗಿದೆ” ಎಂದು ತಿಳಿಸಿದರು.

Advertisements

“ಅಕ್ರಮವಾಗಿ ಮದ್ಯ ಮಾರಾಟ ಮಾಡುವುದು ನಡೆಯುತ್ತಿಲ್ಲ. ಆದರೆ ಕೆಸಾಪುರದ ಕುಡುಕರು ಸಮೀಪದ ನೆರಬೆಂಚಿಗೆ ಬಂದು ಮದ್ಯ ಸೇವಿಸಿ ಇತರೆ ಗ್ರಾಮಗಳಲ್ಲಿ ಅಶಾಂತಿ ಸೃಷ್ಟಿಸುತ್ತಿರುವ ವಿಷಯ ಗೊತ್ತಾಗಿದೆ. ನೆರಬೆಂಚಿಯಲ್ಲಿ ಅಕ್ರಮ ಮದ್ಯ ಮಾರಾಟಗಾರರು ಉದ್ರಿ(ಕಡ)ಯಾಗಿ ಮದ್ಯ ಕೊಡುತ್ತಿರುವುದು ಗಮನಕ್ಕೆ ಬಂದಿದೆ”‌ ಎಂದರು.

“ಹೋಟೆಲ್, ಕಿರಾಣಿ ಅಂಗಡಿ, ಪಾನ್‌ಶಾಪ್ ಮುಂತಾದೆಡೆ ಈಗಾಗಲೇ ಗ್ರಾಮೀಣ ಭಾಗದಲ್ಲಿ ಅಕ್ರಮ ಮದ್ಯ ಮಾರಾಟ ತಡೆಗಟ್ಟುವಂತೆ ತಹಶೀಲ್ದಾರ್, ಪೊಲೀಸರು, ಅಬಕಾರಿ ಅಧಿಕಾರಿಗಳು ಮತ್ತು ಸ್ಥಳೀಯ ಶಾಸಕ ಸಿ ಎಸ್ ನಾಡಗೌಡರಿಗೆ ಮನವಿ ಸಲ್ಲಿಸಿದ್ದೇವೆ. ಅವರೂ ಕೂಡಾ ಸಕಾರಾತ್ಮಕವಾಗಿ
ಸ್ಪಂದಿಸಿದ್ದಾರೆ. ಅಕ್ರಮ ಮುಂದುವರೆದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು. ಅಕ್ರಮವಾಗಿ ಮದ್ಯ ಮಾರಾಟ ಮಾಡುವ ದಂಧೆಯನ್ನು ಕೈಬಿಡಬೇಕು. ಇಲ್ಲವಾದಲ್ಲಿ ಅಂಥವರ ವಿರುದ್ಧ ನಾವೇ ದೂರು ಕೊಡಬೇಕಾಗುತ್ತದೆ” ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | ಜನಸ್ಪಂದನ ಕಾರ್ಯಕ್ರಮ; ಸಮಸ್ಯೆ ಬಗೆಹರಿಸದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಕಸಾಪುರದ ಜಿ ಜಿ ಗೌಡರ, ಶ್ರೀನಿವಾಸ ಗೌಂಡಿ, ಭಾಷಾ ತಾಳಿಕೋಟಿ, ದ್ಯಾಮಣ್ಣ ಹಿರೇಕುರುಬರ, ಸುರೇಶ ಭೈರವಾಡಗಿ, ನಾಗರಾಜ ಹಿರೇಕುರುಬರ, ಅಶೋಕ ಹಗರಗೊಂಡ, ಸಂಗನಗೌಡ ಪಾಟೀಲ, ಪರಸಪ್ಪ ಗೌಡ್ರ, ಸಂಗಣ್ಣ ಭೋವಿ, ಶಾಂತಗೌಡ ನಾಡಗೌಡ, ಗದ್ದೆಪ್ಪ ಭೋಯೇರ ಮತ್ತು ಮಹಿಳಾ ಸಂಘಟನೆಗಳ ಸದಸ್ಯರು, ನೆರಬೆಂಚಿಯ ಮಲ್ಲಿಕಾರ್ಜುನ ಬಿರಾದಾರ, ಶಿದ್ರಾಮ ಬಿರಾದಾರ, ಮಲ್ಲನಗೌಡ ಬಿರಾದಾರ, ನಿಂಗನಗೌಡ ಪಾಟೀಲ, ನಾಗಪ್ಪ ನಾಯ್ಕಮಕ್ಕಳ, ನಾಗರಾಜ ಬಿರಾದಾರ, ನಾಗಪ್ಪ ಹಳ್ಳೆಪ್ಪನರ್ವ, ರುದ್ರಮ್ಮ ಬಿರಾದಾರ ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X