ನೀಟ್ ಪಿಜಿ ಪರೀಕ್ಷೆ ಮುಂದೂಡಿಕೆ: ಕೇಂದ್ರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

Date:

Advertisements

ದೇಶದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದಗಳು ನಡೆಯುತ್ತಿರುವ ನಡುವೆ ಜೂನ್ 23ರ ಭಾನುವಾರ ನಡೆಯಬೇಕಾಗಿದ್ದ ನೀಟ್ ಸ್ನಾತಕೋತ್ತರ (ನೀಟ್ ಪಿಜಿ) ಪ್ರವೇಶ ಪರೀಕ್ಷೆಯನ್ನು ದಿಢೀರ್ ಆಗಿ ಮುಂದೂಡಿಕೆ ಮಾಡಲಾಗಿದೆ. ಈ ವಿಚಾರದಲ್ಲಿ ಕೇಂದ್ರ ಸರ್ಕಾರವನ್ನು ಕಾಂಗ್ರೆಸ್ ತರಾಟೆಗೆ ತೆಗೆದುಕೊಂಡಿದೆ.

ಈ ಬಗ್ಗೆ ಎಕ್ಸ್ ಪೋಸ್ಟ್ ಮಾಡಿರುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, “ನೀಟ್ ಹಗರಣವು ಮೋದಿ ಸರ್ಕಾರದ ಮುಂದೆ ಬಂದು ನಿಲ್ಲುತ್ತದೆ. ಬಿಜೆಪಿಯಿಂದ ಕೊಳೆತು ಹೋಗಿರುವ ಶಿಕ್ಷಣ ವ್ಯವಸ್ಥೆಯಲ್ಲಿನ ಸ್ಥಳೀಯ ಸಮಸ್ಯೆಗೆ ಅಧಿಕಾರಿ ಬದಲಾಯಿಸುವುದು ಒಂದೇ ಪರಿಹಾರವಲ್ಲ” ಎಂದು ಹೇಳಿದ್ದಾರೆ.

“ಎನ್‌ಟಿಎಯನ್ನು ಸ್ವಾಯತ್ತ ಸಂಸ್ಥೆ ಎಂದು ಬಿಂಬಿಸಲಾಗಿತ್ತು. ಆದರೆ ವಾಸ್ತವದಲ್ಲಿ ಬಿಜೆಪಿ/ಆರ್‌ಎಸ್‌ಎಸ್‌ನ ವಂಚಕ ಹಿತಾಸಕ್ತಿಗಳನ್ನು ಪೂರೈಸಲು ಮಾಡಲಾಗಿದೆ. ವಿದ್ಯಾರ್ಥಿಗಳಿಗೆ ನ್ಯಾಯ ಸಿಗಬೇಕಾದರೆ ಮೋದಿ ಸರ್ಕಾರ ಜವಾಬ್ದಾರಿ ಹೊರಬೇಕು. ಇದೀಗ ನೀಟ್ ಪಿಜಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಕಳೆದ ಹತ್ತು ದಿನಗಳಲ್ಲಿ ನಾಲ್ಕು ಪರೀಕ್ಷೆಗಳನ್ನು ರದ್ದು ಅಥವಾ ಮುಂದೂಡಲಾಗಿದೆ” ಎಂದು ಎಕ್ಸ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

Advertisements

ಇದನ್ನು ಓದಿದ್ದೀರಾ?  ಭಾನುವಾರ ನಡೆಯಬೇಕಿದ್ದ ನೀಟ್ ಸ್ನಾತಕೋತ್ತರ ಪ್ರವೇಶ ಪರೀಕ್ಷೆ ದಿಢೀರ್ ಮುಂದೂಡಿಕೆ!

“ಪೇಪರ್ ಸೋರಿಕೆ, ಭ್ರಷ್ಟಾಚಾರ, ಅಕ್ರಮಗಳು ಮತ್ತು ಶಿಕ್ಷಣ ಮಾಫಿಯಾ ನಮ್ಮ ಶಿಕ್ಷಣ ವ್ಯವಸ್ಥೆಯಲ್ಲಿ ನುಸುಳಿದೆ. ಅಸಂಖ್ಯಾತ ಯುವಕರು ಬಳಲುತ್ತಿರುವ ಕಾರಣ ಈ ತಡವಾಗಿ ತೇಪೆ ಹಾಕುವ ಕೆಲಸ ಯಾವುದೇ ಪರಿಣಾಮ ಬೀರಲ್ಲ” ಎಂದು ಟೀಕಿಸಿದ್ದಾರೆ.

ಇನ್ನು ಈ ಬಗ್ಗೆ ಎಕ್ಸ್ ಪೋಸ್ಟ್ ಮಾಡಿರುವ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ, “ಈಗ ನೀಟ್ ಪಿಜಿ ಕೂಡ ಮುಂದೂಡಲಾಗಿದೆ. ನರೇಂದ್ರ ಮೋದಿಯವರ ಆಡಳಿತದಲ್ಲಿ ಶಿಕ್ಷಣ ವ್ಯವಸ್ಥೆ ಹಾಳಾಗುತ್ತಿದೆ ಎಂಬುದಕ್ಕೆ ಇದು ಮತ್ತೊಂದು ದುರದೃಷ್ಟಕರ ಉದಾಹರಣೆಯಾಗಿದೆ” ಎಂದು ಹೇಳಿದ್ದಾರೆ.

“ಬಿಜೆಪಿ ಆಡಳಿತದಲ್ಲಿ, ವಿದ್ಯಾರ್ಥಿಗಳು ತಮ್ಮ ವೃತ್ತಿಜೀವನಕ್ಕಾಗಿ ಅಧ್ಯಯನ ಮಾಡುವ ಬದಲಾಗಿ ತಮ್ಮ ಭವಿಷ್ಯವನ್ನು ಉಳಿಸಿಕೊಳ್ಳಲು ಸರ್ಕಾರದ ಜೊತೆ ‘ಹೋರಾಟ’ ಮಾಡಬೇಕಾದ ಸ್ಥಿತಿಯಿದೆ. ಪ್ರತಿ ಬಾರಿಯೂ ಮೌನವಾಗಿ ಕಾರ್ಯಕ್ರಮವನ್ನು ವೀಕ್ಷಿಸುವ ಮೋದಿ, ಪೇಪರ್ ಲೀಕ್ ದಂಧೆ ಮತ್ತು ಶಿಕ್ಷಣ ಮಾಫಿಯಾದ ಮುಂದೆ ಸಂಪೂರ್ಣವಾಗಿ ಅಸಹಾಯಕರಾಗಿದ್ದಾರೆ” ಎಂದು ದೂರಿದರು.

“ನರೇಂದ್ರ ಮೋದಿಯವರ ಅಸಮರ್ಥ ಸರ್ಕಾರ ವಿದ್ಯಾರ್ಥಿಗಳ ಭವಿಷ್ಯಕ್ಕೆ ದೊಡ್ಡ ಅಪಾಯವಾಗಿದೆ. ನಾವು ಅದರಿಂದ ದೇಶದ ಭವಿಷ್ಯವನ್ನು ಉಳಿಸಬೇಕಾಗಿದೆ” ಎಂದು ಅಭಿಪ್ರಾಯಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X