ಕೋಲಾರ | ಆಚಾರ್ಯ ಚಿನ್ಮಯಾನಂದ ಸ್ವಾಮೀಜಿ ಕೊಲೆ; ಮೂವರು ಆರೋಪಿಗಳ ಬಂಧನ

Date:

Advertisements

ಆಸ್ತಿ ವಿವಾದದ ಹಿನ್ನೆಲೆ ಆರಂಭವಾದ ಗುಂಪು ಘರ್ಷಣೆಯು ಆಶ್ರಮದ ಸ್ವಾಮೀಜಿಯೊಬ್ಬರ ಕೊಲೆಯಲ್ಲಿ ಅಂತ್ಯ ಕಂಡಿದೆ.

ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮೈಲಾಂಡಳ್ಳಿ ಸಮೀಪದ ಸಂತಳ್ಳಿಯಲ್ಲಿರುವ ಆನಂದ ಮಾರ್ಗ ಆಶ್ರಮದ ಆಚಾರ್ಯ ಚಿನ್ಮಯಾನಂದ ಸ್ವಾಮೀಜಿ(70) ಕೊಲೆಯಾದವರು.

ಸಂತಳ್ಳಿ ಗ್ರಾಮದ ನಾಲ್ಕು ಎಕರೆ ಜಾಗದಲ್ಲಿ ಆಶ್ರಮವಿದ್ದು, ಹಲವು ವರ್ಷಗಳಿಂದ ಜಾಗಕ್ಕಾಗಿ ಆಶ್ರಮದ ಸ್ವಾಮೀಜಿಗಳ ನಡುವೆ ವಿವಾದ ನಡೆಯುತ್ತಿತ್ತು. ಶನಿವಾರ ಬೆಳಿಗ್ಗೆ ಆಚಾರ್ಯ ಧರ್ಮ ಪ್ರಾಣಾನಂದ ಅವರ ಗುಂಪು ಶೌಚಾಲಯದಲ್ಲಿದ್ದ ಚಿನ್ಮಯಾನಂದ ಸ್ವಾಮೀಜಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದೆ.

Advertisements

ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡಿದ್ದ ಚಿನ್ಮಯಾನಂದ ಅವರನ್ನು ಆರ್ ಎಲ್ ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸ್ವಾಮೀಜಿ ಮೃತಪಟ್ಟಿದ್ದಾರೆ.

ಕೊಲೆ ಸಂಬಂಧ ಆಚಾರ್ಯ ಧರ್ಮ ಪ್ರಾಣಾನಂದ(45), ಪ್ರಾಣೇಶ್ವರಾನಂದ(48) ಹಾಗೂ ಅರುಣ್ ಕುಮಾರ್(55) ಎಂಬುವವರನ್ನು ಮಾಲೂರು ಪೊಲೀಸರು ಬಂಧಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಪೆಟ್ರೋಲ್–ಡೀಸೆಲ್ ಬೆಲೆ ಇಳಿಕೆಗೆ ಟ್ರಕ್‌ ಅಸೋಸಿಯೇಷನ್ ಆಗ್ರಹ

ಸ್ಪ್ರೇ ಸಿಂಪಡಿಸಿ ಹಲ್ಲೆ : ಬೆಳಿಗ್ಗೆ ಶೌಚಾಲಯದಲ್ಲಿದ್ದ ಚಿನ್ಮಯಾನಂದ ಸ್ವಾಮೀಜಿ ಅವರ ಮೇಲೆ ಆಚಾರ್ಯ ಧರ್ಮ ಪ್ರಾಣಾನಂದ ಅವರ ಗುಂಪು ಸ್ಪ್ರೇ ಸಿಂಪಡಿಸಿ ದೊಣ್ಣೆಗಳಿಂದ ಹಲ್ಲೆ ನಡೆಸಿದೆ. ಮೊಬೈಲ್ ಮತ್ತು ಕೀ ಕಸಿದುಕೊಂಡಿದ್ದಾರೆ ಎನ್ನಲಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X