ಹೈಕೋರ್ಟ್‌ನಿಂದ ಜಾಮೀನಿಗೆ ತಡೆ: ಸುಪ್ರೀಂ ಮೊರೆ ಹೋದ ಕೇಜ್ರಿವಾಲ್

Date:

Advertisements

ದೆಹಲಿ ಹೈಕೋರ್ಟ್ ತಮ್ಮ ಜಾಮೀನಿಗೆ ತಡೆ ನೀಡಿರುವುದನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.

ಕೇಜ್ರಿವಾಲ್ ಅವರು ತಿಹಾರ್ ಜೈಲಿನಿಂದ ಹೊರಬರುವ ಕೆಲವೇ ಗಂಟೆಗಳ ಮೊದಲು ಜಾರಿ ನಿರ್ದೇಶನಾಲಯ ಜಾಮೀನು ಆದೇಶವನ್ನು ಕೋರ್ಟ್​ನಲ್ಲಿ ಪ್ರಶ್ನಿಸಿತ್ತು. ನ್ಯಾಯಮೂರ್ತಿಗಳಾದ ಸುಧೀರ್ ಕುಮಾರ್ ಜೈನ್ ಮತ್ತು ರವೀಂದರ್ ದುಡೇಜಾ ಅವರ ಪೀಠದ ಮುಂದೆ ತುರ್ತು ವಿಚಾರಣೆಗಾಗಿ ವಿಚಾರಣಾ ನ್ಯಾಯಾಲಯದ ಜಾಮೀನು ಆದೇಶವನ್ನು ಪ್ರಶ್ನಿಸಿ, ಇ.ಡಿ ತನ್ನ ಅರ್ಜಿಯನ್ನು ಉಲ್ಲೇಖಿಸಿತ್ತು. ಅರ್ಜಿಯ ವಿಚಾರಣೆ ನಡೆಸುವವರೆಗೂ ವಿಚಾರಣಾ ನ್ಯಾಯಾಲಯದ ಆದೇಶದ ಪ್ರಕಾರ ಕ್ರಮ ಕೈಗೊಳ್ಳುವುದಿಲ್ಲ ಎಂದು ಹೈಕೋರ್ಟ್ ಕೇಜ್ರಿವಾಲ್ ಅವರ ಜಾಮೀನಿಗೆ ತಡೆ ನೀಡಿತ್ತು.

ಈ ಸುದ್ದಿ ಓದಿದ್ದೀರಾ? ಅಬಕಾರಿ ನೀತಿ ಪ್ರಕರಣ| ಅರವಿಂದ್ ಕೇಜ್ರಿವಾಲ್ ಬಿಡುಗಡೆಗೆ ದೆಹಲಿ ಹೈಕೋರ್ಟ್ ತಡೆ

Advertisements

ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೇಜ್ರಿವಾಲ್‌ಗೆ ರೂಸ್ ಅವೆನ್ಯೂ ಕೋರ್ಟ್ ಜಾಮೀನು ನೀಡಿತ್ತು. ವಿಶೇಷ ನ್ಯಾಯಮೂರ್ತಿಗಳಾದ ನಿಯಾಯ್ ಬಿಂದು ಅವರು 1 ಲಕ್ಷ ಬಾಂಡ್ ಮೇಲೆ ಅವರಿಗೆ ಜಾಮೀನು ನೀಡಿದ್ದರು. ಜಾಮೀನು ಕೋರಿ ಕೇಜ್ರಿವಾಲ್‌ ಸಲ್ಲಿಸಿದ್ದ ಅರ್ಜಿಯ ಕುರಿತು ಪ್ರಾಸಿಕ್ಯೂಷನ್‌ ಮತ್ತು ವಕೀಲರ ವಾದವನ್ನು ಆಲಿಸಿದ ಬಳಿಕ ನ್ಯಾಯಾಧೀಶರು ಆದೇಶ ನೀಡಿದ್ದರು.

ಲೋಕಸಭೆ ಚುನಾವಣೆ ಪ್ರಚಾರಕ್ಕಾಗಿ ಸುಪ್ರೀಂ ಕೋರ್ಟ್‌ 21 ದಿನಗಳ ಮಧ್ಯಂತರ ಜಾಮೀನು ನೀಡಿತ್ತು. ಮಧ್ಯಂತರ ಜಾಮೀನು ಅವಧಿ ಮುಗಿದ ನಂತರ  ಜೂನ್​ 2ರಂದು ತಿಹಾರ್ ಜೈಲಿನಲ್ಲಿ ಕೇಜ್ರಿವಾಲ್​ ಶರಣಾಗಿದ್ದರು. ದೆಹಲಿ ಅಬಕಾರಿ ನೀತಿಯನ್ನು ರೂಪಿಸುವಾಗ ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಇ.ಡಿ ಕೇಜ್ರಿವಾಲ್ ಅವರನ್ನು ಬಂಧಿಸಿತು. ಕೇಜ್ರಿವಾಲ್ ಅವರು ಎಎಪಿಯ ಸಂಚಾಲಕರಾಗಿದ್ದರಿಂದ ಗೋವಾದಲ್ಲಿ ಪಕ್ಷದ ಪ್ರಚಾರಕ್ಕಾಗಿ ಮದ್ಯ ಮಾರಾಟಗಾರರಿಂದ ಪಡೆದ ಹಣವನ್ನು ಬಳಸಲಾಗಿದೆ ಎಂದು ಇ.ಡಿ ಆರೋಪಿಸಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X