ತಮಿಳುನಾಡು ಕಳ್ಳಭಟ್ಟಿ ಸಾರಾಯಿ ದುರಂತ ಅಣ್ಣಾಮಲೈ ಪಿತೂರಿ: ಡಿಎಂಕೆ ನಾಯಕ ಆರೋಪ

Date:

Advertisements

ತಮಿಳುನಾಡಿನ ಕಲ್ಲಾಕುರಿಚಿಯಲ್ಲಿ ನಡೆದ ಕಳ್ಳಭಟ್ಟಿ ಸಾರಾಯಿ ದುರಂತದಲ್ಲಿ ಸಾವಿಗೆ ಬಿಜೆಪಿಯೇ ಹೊಣೆ, ಇದು ಅಣ್ಣಾಮಲೈ ಪಿತೂರಿ ಎಂದು ಡಿಎಂಕೆ ನಾಯಕ ಆರೋಪಿಸಿದ್ದಾರೆ.

“ಅಕ್ರಮ ಮದ್ಯವನ್ನು ಉತ್ಪಾದಿಸಲು ಬಳಸಿದ ಮೆಥೆನಾಲ್ ಅನ್ನು ಬಿಜೆಪಿ ನೇತೃತ್ವದ ಮೈತ್ರಿಕೂಟದ ಆಡಳಿತವಿರುವ ರಾಜ್ಯವಾದ ಪುದುಚೇರಿಯಿಂದ ಪಡೆಯಲಾಗಿದೆ. ಘಟನೆಯು ಅಣ್ಣಾಮಲೈ ಅವರ ಯೋಜಿತ ಪಿತೂರಿ” ಎಂದು ಪತ್ರಿಕಾಗೋಷ್ಠಿಯಲ್ಲಿ ಡಿಎಂಕೆ ಸಂಘಟನಾ ಕಾರ್ಯದರ್ಶಿ ಆರ್‌ಎಸ್ ಭಾರತಿ ದೂರಿದ್ದಾರೆ.

ಜೂನ್ 18ರಂದು ತಮಿಳುನಾಡಿನ ಕಲ್ಲಕುರಿಚಿ ಜಿಲ್ಲೆಯಲ್ಲಿ 50ಕ್ಕೂ ಹೆಚ್ಚು ಜನರು ಕಲಬೆರಕೆ ಮದ್ಯ ಸೇವಿಸಿ ಸಾವನ್ನಪ್ಪಿದ್ದಾರೆ.

Advertisements

ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಆರ್‌ಎಸ್ ಭಾರತಿ ಈ ಘಟನೆಗೆ ಬಿಜೆಪಿಯ ತಮಿಳುನಾಡು ಅಧ್ಯಕ್ಷ ಕೆ ಅಣ್ಣಾಮಲೈ ಅವರನ್ನು ದೂಷಿಸಿದ್ದಾರೆ. ಇನ್ನು ಕಳ್ಳಭಟ್ಟಿ ಸಾರಾಯಿ ದುರಂತ ನಡೆದ ಕಾರಣ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ರಾಜೀನಾಮೆ ನೀಡಬೇಕು ಎಂದು ಅಣ್ಣಾಮಲೈ ಆಗ್ರಹಿಸಿದ್ದಾರೆ.

ಇದನ್ನು ಓದಿದ್ದೀರಾ?  ತಮಿಳುನಾಡು| ಕಳ್ಳಭಟ್ಟಿ ಸಾರಾಯಿ ದುರಂತ; ಮೃತರ ಸಂಖ್ಯೆ 49ಕ್ಕೆ ಏರಿಕೆ

ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿದ್ದ ಅಣ್ಣಾಮಲೈ, “ಪ್ರಸ್ತುತ ನಡೆದ ಘಟನೆಯನ್ನು ನೋಡಿದಾಗ ಎಂಕೆ ಸ್ಟಾಲಿನ್ ಅವರು ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತುಕೊಳ್ಳಬೇಕೇ ಎಂದು ಆತ್ಮಾವಲೋಕನ ಮಾಡಿಕೊಳ್ಳಬೇಕು” ಎಂದಿದ್ದರು.

ಇದಕ್ಕೆ ತಿರುಗೇಟು ನೀಡಿರುವ ಡಿಎಂಕೆ ನಾಯಕ ಆರ್‌ಎಸ್ ಭಾರತಿ, “ರಾಜೀನಾಮೆ ನೀಡಬೇಕಾಗಿರುವುದು ಅವರ (ಬಿಜೆಪಿ) ಸಚಿವರು ಮತ್ತು ಪುದುಚೇರಿಯ ಮುಖ್ಯಮಂತ್ರಿಗಳು. ಯಾಕೆಂದರೆ ಕಳ್ಳಭಟ್ಟಿ ತಯಾರಿಸಲು ಕಚ್ಚಾ ಸಾಮಗ್ರಿಗಳನ್ನು ಪುದುಚೇರಿಯಿಂದ ತರಲಾಗಿದೆ ಎಂದು ಪೊಲೀಸರು ನಮಗೆ ಹೇಳುತ್ತಿದ್ದಾರೆ” ಎಂದು ಹೇಳಿದರು.

ಹಾಗೆಯೇ, “ಈ ಸಂಪೂರ್ಣ ಘಟನೆಗೆ ಬಿಜೆಪಿ ಹೊಣೆ. ಅವರೇ ಇದನ್ನು ಮಾಡಿಸಿರುವುದು. ಇದು ಅಣ್ಣಾಮಲೈ ಅವರ ಯೋಜಿತ ಷಡ್ಯಂತ್ರ ಎಂದು ನಾನು ಹೇಳುತ್ತೇವೆ. ಇದು ವಿಕ್ರವಾಂಡಿ ಚುನಾವಣೆಗೆ ಸಂಬಂಧಿಸಿದೆ. ಚುನಾವಣೆಗೂ ಮುನ್ನ ಇದನ್ನು ಮಾಡುತ್ತಿದ್ದಾರೆ ಎಂಬ ಅನುಮಾನವಿದೆ” ಎಂದು ಶಂಕೆ ವ್ಯಕ್ತಪಡಿಸಿದರು.

ಇದನ್ನು ಓದಿದ್ದೀರಾ? ತಮಿಳುನಾಡು| ಕಳ್ಳಭಟ್ಟಿ ಸಾರಾಯಿ ಸೇವಿಸಿ 29 ಮಂದಿ ಸಾವು

“ಡಾರ್ಜಿಲಿಂಗ್ ರೈಲು ಅಪಘಾತದ ನಂತರ ರೈಲ್ವೇ ಸಚಿವರು ರಾಜೀನಾಮೆ ನೀಡಿದ್ದಾರಾ? ನೀಟ್‌ ವಿಚಾರದಲ್ಲಿ ಕೇಂದ್ರ ಸಚಿವರು ರಾಜೀನಾಮೆ ನೀಡಿದ್ದಾರೆಯೇ? 2009ರಲ್ಲಿ 137 ಜನರು ಅಕ್ರಮ ಮದ್ಯ ಸೇವಿಸಿ ಸತ್ತಾಗ ನರೇಂದ್ರ ಮೋದಿ ರಾಜೀನಾಮೆ ನೀಡಿದ್ದಾರಾ” ಎಂದು ಆರ್‌ಎಸ್ ಭಾರತಿ ಪ್ರಶ್ನಿಸಿದರು.

ಕಲ್ಲಕುರಿಚಿ ಕಳ್ಳಭಟ್ಟಿ ದುರಂತ

ಜೂನ್ 18ರಂದು, ಕಲ್ಲಕುರಿಚಿ ಜಿಲ್ಲೆಯ ಕರುಣಾಪುರಂನ ದಿನಗೂಲಿ ಕಾರ್ಮಿಕರು, ಅನೇಕ ಜನರು ಪ್ಯಾಕೆಟ್ ಮತ್ತು ಸ್ಯಾಚೆಟ್‌ಗಳಲ್ಲಿ ಮಾರಾಟವಾದ ನಕಲಿ ಮದ್ಯವನ್ನು ಸೇವಿಸಿದ್ದಾರೆ. ರಾತ್ರಿ ವೇಳೆ ಅವರಲ್ಲಿ ಹಲವರಿಗೆ ಅತಿಸಾರ, ವಾಂತಿ, ಹೊಟ್ಟೆ ನೋವು ಮತ್ತು ಕಣ್ಣುಗಳಲ್ಲಿ ಕಿರಿಕಿರಿಯಂತಹ ರೋಗಲಕ್ಷಣಗಳನ್ನು ಕಾಣಿಸಿಕೊಂಡಿದೆ.


ಘಟನೆಯಲ್ಲಿ ಒಟ್ಟು 53 ಮಂದಿ ಸಾವನ್ನಪ್ಪಿದ್ದು, ಹತ್ತಾರು ಮಂದಿ ಇನ್ನೂ ಗಂಭೀರ ಸ್ಥಿತಿಯಲ್ಲಿದ್ದಾರೆ. ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಪ್ರಕಾರ, ಮೆಥೆನಾಲ್ ಮಿಶ್ರಿತ ಕಳ್ಳಭಟ್ಟಿ ಸಾರಾಯಿ ಸೇವನೆಯಿಂದ ಸಾವು ಸಂಭವಿಸಿದೆ. ಅಕ್ರಮ ಮದ್ಯ ಮಾರಾಟಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

Download Eedina App Android / iOS

X