ಕೇಜ್ರಿವಾಲ್ ಜಾಮೀನಿಗೆ ದೆಹಲಿ ಹೈಕೋರ್ಟ್‌ನ ತಡೆಯಾಜ್ಞೆಯನ್ನು ‘ಅಸಹಜʼ ಎಂದ ಸುಪ್ರೀಂ

Date:

Advertisements

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತಮ್ಮ ಜಾಮೀನಿನ ಮೇಲೆ ದೆಹಲಿ ಹೈಕೋರ್ಟ್‌ ವಿಧಿಸಿದ ಮಧ್ಯಂತರ ತಡೆಯಾಜ್ಞೆಯ ವಿರುದ್ಧ ಸಲ್ಲಿಸಿದ ಮನವಿಯನ್ನು ಆಲಿಸಿದ ಸುಪ್ರೀಂ ಕೋರ್ಟ್‌ನ ರಜಾಕಾಲದ ಪೀಠವು ಸೋಮವಾರ ಇದು ‘ಅಸಹಜ’ ಎಂದು ಹೇಳಿದೆ.

ನ್ಯಾಯಮೂರ್ತಿಗಳಾದ ಮನೋಜ್ ಮಿಶ್ರಾ ಮತ್ತು ಎಸ್‌ವಿಎನ್ ಭಟ್ಟಿ ಅವರನ್ನೊಳಗೊಂಡ ಪೀಠ, ಈ ವಿಷಯದ ಕುರಿತು ಹೈಕೋರ್ಟ್‌ನ ಆದೇಶಕ್ಕಾಗಿ ಕಾಯಲು ಬಯಸುವುದಾಗಿ ಹೇಳಿದೆ. ಹಾಗೆಯೇ “ಇದು ಅಸಹಜ” ಎಂದು ನ್ಯಾಯಮೂರ್ತಿ ಮಿಶ್ರಾ ಹೇಳಿದ್ದಾರೆ.

ಜಾರಿ ನಿರ್ದೇಶನಾಲಯದ ಅರ್ಜಿಯ ತೀರ್ಪು ಪ್ರಕಟಿಸುವವರೆಗೆ ಅರವಿಂದ್ ಕೇಜ್ರಿವಾಲ್ ಅವರ ಬಿಡುಗಡೆಗೆ ಹೈಕೋರ್ಟ್ ತಡೆ ನೀಡಿದ ನಂತರ ಅರವಿಂದ್ ಕೇಜ್ರಿವಾಲ್ ಭಾನುವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದರು.

Advertisements

ಆದರೆ ಈ ಹಂತದಲ್ಲಿ ಯಾವುದೇ ಆದೇಶವನ್ನು ಪ್ರಕಟಿಸುವುದು ಸಮಸ್ಯೆಗೆ ಪೂರ್ವಾಗ್ರಹ ಪಡಿಸಿದಂತಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಇಂದು ಕೇಜ್ರಿವಾಲ್ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರಿಗೆ ತಿಳಿಸಿದೆ.

ಇದನ್ನು ಓದಿದ್ದೀರಾ?  ಹೈಕೋರ್ಟ್‌ನಿಂದ ಜಾಮೀನಿಗೆ ತಡೆ: ಸುಪ್ರೀಂ ಮೊರೆ ಹೋದ ಕೇಜ್ರಿವಾಲ್

“ನಾವು ಈ ಹಂತದಲ್ಲಿ ಯಾವುದೇ ಆದೇಶವನ್ನು ನೀಡಿದರೆ, ನಾವು ಸಮಸ್ಯೆಯನ್ನು ಮುಂಚಿತವಾಗಿ ನಿರ್ಣಯಿಸಿದ್ದಂತೆ ಆಗುತ್ತದೆ. ಯಾಕೆಂದರೆ ಇದು ಬೇರೆ ಯಾವುದೋ ನ್ಯಾಯಾಲಯವಲ್ಲ, ಇದು ಹೈಕೋರ್ಟ್” ಎಂದು ಹೇಳಿದರು.

ಜಾಮೀನು ಆದೇಶದ ಮೇಲಿನ ಮಧ್ಯಂತರ ತಡೆಯನ್ನು ತೆರವು ಮಾಡುವಂತೆ ಸಿಂಘ್ವಿ ಕೋರಿದ್ದರು. ದೆಹಲಿ ಹೈಕೋರ್ಟ್ ತನ್ನ ಆದೇಶವನ್ನು ಪ್ರಕಟಿಸುವವರೆಗೆ ಕೇಜ್ರಿವಾಲ್ ಅವರನ್ನು ಬಿಡುಗಡೆ ಮಾಡಬೇಕು ಎಂದು ವಕೀಲರು ಹೇಳಿದರು.

“ನಾನು ಏನು ಕೇಳುತ್ತಿದ್ದೇನೆಂದು ನನಗೆ ತಿಳಿದಿದೆ. ಜಾರಿ ನಿರ್ದೇಶನಾಲಯವು ಕೇವಲ ಒಂದು ಉಲ್ಲೇಖದ ಮೇರೆಗೆ ಹೈಕೋರ್ಟ್ ಜಾಮೀನು ಆದೇಶಕ್ಕೆ ತಡೆ ನೀಡಿದಂತೆ ಈ ನ್ಯಾಯಾಲಯವು ಉಚ್ಛ ನ್ಯಾಯಾಲಯದ ಆದೇಶವನ್ನು ನೀಡುವ ಮುನ್ನವೇ ತಡೆಹಿಡಿಯಬೇಕು” ಎಂದು ಮನವಿ ಮಾಡಿದರು.

ಇದನ್ನು ಓದಿದ್ದೀರಾ?  ಅರವಿಂದ್ ಕೇಜ್ರಿವಾಲ್ ಜಾಮೀನಿಗೆ ತಡೆ: ‘ಸರ್ವಾಧಿಕಾರ’ ಹೆಚ್ಚುತ್ತಿದೆ ಎಂದ ಪತ್ನಿ ಸುನಿತಾ

ಬಳಿಕ ಪೀಠವು ವಿಚಾರಣೆಯನ್ನು ಜೂನ್ 26ಕ್ಕೆ ಮುಂದೂಡಿದೆ.

ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರ್ಚ್ 21ರಂದು ಇಡಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿತ್ತು. ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯವು ಕಳೆದ ವಾರ ಕೇಜ್ರಿವಾಲ್ ಅವರಿಗೆ ಜಾಮೀನು ಮಂಜೂರು ಮಾಡಿದೆ. ಆದರೆ ಜಾರಿ ನಿರ್ದೇಶನಾಲಯ ಮರುದಿನ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ವಿಚಾರಣಾ ನ್ಯಾಯಾಲಯದ ಆದೇಶದ ಅನುಷ್ಠಾನಕ್ಕೆ ತಡೆ ನೀಡುವಂತೆ ಕೋರಿದೆ. ದೆಹಲಿ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ವಿಧಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X