ಟಿ20 ವಿಶ್ವಕಪ್ | ರೋಹಿತ್ ಶರ್ಮಾ ಭರ್ಜರಿ ಬ್ಯಾಟಿಂಗ್ : ಆಸೀಸ್‌ಗೆ ಬೃಹತ್ ಗುರಿ ನೀಡಿದ ಟೀಮ್ ಇಂಡಿಯಾ

Date:

Advertisements

ಇಂದು (ಜೂನ್ 24) ಸೇಂಟ್ ಲೂಸಿಯಾದ ಡೇರೆನ್ ಸಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಟಿ20 ವಿಶ್ವಕಪ್ 2024ರ ಸೂಪರ್ 8ರ ಘಟ್ಟದ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ ಅವರ ಭರ್ಜರಿ ಅರ್ಧಶತಕದ ನೆರವಿನಿಂದ 206 ರನ್‌ಗಳ ಬೃಹತ್ ಗುರಿ ನೀಡಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರ 92 ರನ್‌ಗಳ ಆಕರ್ಷಕ ಅರ್ಧಶತಕದ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 205 ರನ್ ಕಲೆ ಹಾಕುವಲ್ಲಿ ಯಶಸ್ವಿಯಾಯಿತು. ಈ ಮೊತ್ತವು ಈ ಬಾರಿಯ ಟಿ20 ವಿಶ್ವಕಪ್‌ನಲ್ಲಿ ದಾಖಲಿಸಿದ ಬೃಹತ್ ಮೊತ್ತವಾಗಿದೆ.

41 ಎಸೆತಗಳನ್ನು ಎದುರಿಸಿದ ನಾಯಕ ರೋಹಿತ್ ಶರ್ಮಾ ಅವರು, ಭರ್ಜರಿ 8 ಸಿಕ್ಸರ್ ಹಾಗೂ 7 ಬೌಂಡರಿಯ ನೆರವಿನಿಂದ 92 ರನ್ ಗಳಿಸಿದ್ದಾಗ, ಮಿಚೆಲ್ ಸ್ಟಾರ್ಕ್‌ ಓವರ್‌ನಲ್ಲಿ ಕ್ಲೀನ್ ಬೌಲ್ಡ್ ಆದರು. ಆ ಮೂಲಕ 8 ರನ್‌ಗಳಿಂದ ಶತಕ ವಂಚಿತರಾದರು.

Advertisements

ನಾಯಕನ ಜೊತೆಗೆ ಇನ್ನಿಂಗ್ಸ್‌ ಆರಂಭಿಸಿದ್ದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಶೂನ್ಯಕ್ಕೆ ಔಟಾಗುವ ಮೂಲಕ ಮತ್ತೆ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದರು. ಈ ಬಾರಿಯ ಟಿ20 ವಿಶ್ವಕಪ್‌ನಲ್ಲಿ ಕೊಹ್ಲಿಯವರ ಬ್ಯಾಟ್‌ನಿಂದ ರನ್‌ಗಳೇ ಹರಿದು ಬರುತ್ತಿಲ್ಲ.

ರೋಹಿತ್ ಶರ್ಮಾ ಬಿಟ್ಟರೆ ಉಳಿದಂತೆ ಸೂರ್ಯ ಕುಮಾರ್ ಯಾದವ್  31 ರನ್ (16 ಎಸೆತ), ಶಿವಂ ದುಬೆ 28 ರನ್ (22 ಎಸೆತ), ಕೊನೆಯಲ್ಲಿ ಹಾರ್ದಿಕ್ ಪಾಂಡ್ಯಾ 17 ಎಸೆತಗಳಲ್ಲಿ 27 ರನ್ ಗಳಿಸಿ ತಮ್ಮಿಂದಾದ ಕೊಡುಗೆ ನೀಡಿದರೆ, ರಿಷಭ್ ಪಂತ್ 15 ರನ್ ಗಳಿಸಿದರು.

ಇದನ್ನು ಓದಿದ್ದೀರಾ? ಟಿ20 ಕ್ರಿಕೆಟ್‌ : 200 ಸಿಕ್ಸರ್‌ಗಳ ಸರದಾರನಾಗಿ ದಾಖಲೆ ಬರೆದ ‘ಹಿಟ್‌ಮ್ಯಾನ್’ ರೋಹಿತ್ ಶರ್ಮಾ

ಬೌಲಿಂಗ್‌ನಲ್ಲಿ ಆಸೀಸ್ ಪರ ಮಿಚೆಲ್ ಸ್ಟಾರ್ಕ್ ಹಾಗೂ ಸ್ಟೋಯ್ನಿಸ್ 2 ವಿಕೆಟ್ ಗಳಿಸಿದರಾದರೂ, ಭರ್ಜರಿ ರನ್ ನೀಡಿ ದುಬಾರಿಯಾದರು. ಸ್ಟಾರ್ಕ್‌ ಅವರು 45 ರನ್ ನೀಡಿದರೆ, ಸ್ಟೋಯ್ನಿಸ್ 56 ರನ್ ನೀಡಿದರು.

ಉಳಿದ ಬೌಲರ್‌ಗಳು ರನ್ ನೀಡಿದರೂ ಕೂಡ ಉತ್ತಮ ಬೌಲಿಂಗ್ ನಡೆಸಿದ ಜೋಶ್ ಹ್ಯಾಝಲ್‌ವುಡ್ ತನ್ನ ಪಾಲಿನ 4 ಓವರ್ ಎಸೆದು ಕೇವಲ 14 ರನ್ ನೀಡಿ, 1 ವಿಕೆಟ್ ಗಳಿಸುವಲ್ಲಿ ಸಫಲರಾದರು. ಆ್ಯಡಮ್ ಝಾಂಪ 40 ಹಾಗೂ ಪ್ಯಾಟ್ ಕಮ್ಮಿನ್ಸ್‌ 48 ರನ್ ಚಚ್ಚಿಸಿಕೊಂಡರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X